ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮದ ಕೆರೆಯ ಸಮೀಪವಿರುವ ರೈತ ಕೆಂಪಯ್ಯ ಅವರ ತೋಟದ ಬಳಿ ಮಂಗಳವಾರ ಹುಲಿ ಕಾಣಿಸಿಕೊಂಡಿದ್ದು, ರೈತರು ಮತ್ತು ಜನಸಾಮಾನ್ಯರು ಆತಂಕಗೊಂಡಿದ್ದಾರೆ.
ಗ್ರಾಪಂ ಸದಸ್ಯ ಶಿವರಾಜ್ ಅವರು ರಸ್ತೆಯಲ್ಲಿ ಹೋಗುತ್ತಿದ್ದಾಗ ರೈತ ಕೆಂಪಯ್ಯ ತೋಟದ ಬಳಿ ಹುಲಿಯನ್ನು ನೋಡಿ, ಕಾಂಗ್ರೆಸ್ ಮುಖಂಡ ಕ್ಯಾತನಹಳ್ಳಿ ನಾಗರಾಜ್ ಅವರಿಗೆ ತಿಳಿಸಿದ್ದಾರೆ. ತಕ್ಷಣ ಅರಣ್ಯ ಅಧಿಕಾರಿ ರವಿಕುಮಾರ್ ಅವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿ, ಆ ಭಾಗದಲ್ಲಿ ಹುಲಿಯ ಚಲನವಲನಗಳನ್ನು ಪತ್ತೆ ಹಚ್ಚಿ, ಹುಲಿ ಓಡಾಡಿರುವುದನ್ನು ಖಚಿತಪಡಿಸಿಕೊಂಡು, ರೈತ ಕೆಂಪಯ್ಯ ತೋಟದಲ್ಲಿ ಕ್ಯಾಮೆರಾವನ್ನು ಅಳವಡಿಸಿದ್ದಾರೆ.
ಇದನ್ನು ಓದಿ: ಸಂವಿಧಾನ ಅರ್ಥೈಸಿಕೊಂಡಲ್ಲಿ ಕೋಮು ಸಂಘರ್ಷ ರಹಿತ ಸಮಾಜ ನಿರ್ಮಾಣ : ಪ್ರಾ. ಅಸ್ನಾ ಉರೂಜ್
ಈ ಭಾಗದಲ್ಲಿ ಹುಲಿಯ ಚಲನವಲನಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಗಸ್ತಿನಲ್ಲಿದ್ದಾರೆ
ಡೇರಿ ಅಧ್ಯಕ್ಷ ಕೆ.ಪಿ.ಚಲುವರಾಜು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಮಚಂದ್ರಣ್ಣ, ಗುತ್ತಿಗೆದಾರ ಕೃಷ್ಣ, ಕೆ.ಡಿ.ಕೃಷ್ಣಮೂರ್ತಿ, ಮಡಿವಾಳ ಬೀರೇಶ್, ಪ್ರಸನ್ನ ಕುಮಾರ್, ಕೆ.ಟಿ.ಬಸಪ್ಪ, ರಾಜಕೀಯ ಕುಮಾರ, ಚಲುವ, ಕೆ.ಸಿ.ಬಸವರಾಜ್, ಚಂದು, ಮಹದೇವಣ್ಣ, ಅರಣ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…
ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…
ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…
ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…
ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್ಗೆ…