ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮದ ಕೆರೆಯ ಸಮೀಪವಿರುವ ರೈತ ಕೆಂಪಯ್ಯ ಅವರ ತೋಟದ ಬಳಿ ಮಂಗಳವಾರ ಹುಲಿ ಕಾಣಿಸಿಕೊಂಡಿದ್ದು, ರೈತರು ಮತ್ತು ಜನಸಾಮಾನ್ಯರು ಆತಂಕಗೊಂಡಿದ್ದಾರೆ.
ಗ್ರಾಪಂ ಸದಸ್ಯ ಶಿವರಾಜ್ ಅವರು ರಸ್ತೆಯಲ್ಲಿ ಹೋಗುತ್ತಿದ್ದಾಗ ರೈತ ಕೆಂಪಯ್ಯ ತೋಟದ ಬಳಿ ಹುಲಿಯನ್ನು ನೋಡಿ, ಕಾಂಗ್ರೆಸ್ ಮುಖಂಡ ಕ್ಯಾತನಹಳ್ಳಿ ನಾಗರಾಜ್ ಅವರಿಗೆ ತಿಳಿಸಿದ್ದಾರೆ. ತಕ್ಷಣ ಅರಣ್ಯ ಅಧಿಕಾರಿ ರವಿಕುಮಾರ್ ಅವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿ, ಆ ಭಾಗದಲ್ಲಿ ಹುಲಿಯ ಚಲನವಲನಗಳನ್ನು ಪತ್ತೆ ಹಚ್ಚಿ, ಹುಲಿ ಓಡಾಡಿರುವುದನ್ನು ಖಚಿತಪಡಿಸಿಕೊಂಡು, ರೈತ ಕೆಂಪಯ್ಯ ತೋಟದಲ್ಲಿ ಕ್ಯಾಮೆರಾವನ್ನು ಅಳವಡಿಸಿದ್ದಾರೆ.
ಇದನ್ನು ಓದಿ: ಸಂವಿಧಾನ ಅರ್ಥೈಸಿಕೊಂಡಲ್ಲಿ ಕೋಮು ಸಂಘರ್ಷ ರಹಿತ ಸಮಾಜ ನಿರ್ಮಾಣ : ಪ್ರಾ. ಅಸ್ನಾ ಉರೂಜ್
ಈ ಭಾಗದಲ್ಲಿ ಹುಲಿಯ ಚಲನವಲನಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಗಸ್ತಿನಲ್ಲಿದ್ದಾರೆ
ಡೇರಿ ಅಧ್ಯಕ್ಷ ಕೆ.ಪಿ.ಚಲುವರಾಜು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಮಚಂದ್ರಣ್ಣ, ಗುತ್ತಿಗೆದಾರ ಕೃಷ್ಣ, ಕೆ.ಡಿ.ಕೃಷ್ಣಮೂರ್ತಿ, ಮಡಿವಾಳ ಬೀರೇಶ್, ಪ್ರಸನ್ನ ಕುಮಾರ್, ಕೆ.ಟಿ.ಬಸಪ್ಪ, ರಾಜಕೀಯ ಕುಮಾರ, ಚಲುವ, ಕೆ.ಸಿ.ಬಸವರಾಜ್, ಚಂದು, ಮಹದೇವಣ್ಣ, ಅರಣ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…