ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮದ ಕೆರೆಯ ಸಮೀಪವಿರುವ ರೈತ ಕೆಂಪಯ್ಯ ಅವರ ತೋಟದ ಬಳಿ ಮಂಗಳವಾರ ಹುಲಿ ಕಾಣಿಸಿಕೊಂಡಿದ್ದು, ರೈತರು ಮತ್ತು ಜನಸಾಮಾನ್ಯರು ಆತಂಕಗೊಂಡಿದ್ದಾರೆ.
ಗ್ರಾಪಂ ಸದಸ್ಯ ಶಿವರಾಜ್ ಅವರು ರಸ್ತೆಯಲ್ಲಿ ಹೋಗುತ್ತಿದ್ದಾಗ ರೈತ ಕೆಂಪಯ್ಯ ತೋಟದ ಬಳಿ ಹುಲಿಯನ್ನು ನೋಡಿ, ಕಾಂಗ್ರೆಸ್ ಮುಖಂಡ ಕ್ಯಾತನಹಳ್ಳಿ ನಾಗರಾಜ್ ಅವರಿಗೆ ತಿಳಿಸಿದ್ದಾರೆ. ತಕ್ಷಣ ಅರಣ್ಯ ಅಧಿಕಾರಿ ರವಿಕುಮಾರ್ ಅವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿ, ಆ ಭಾಗದಲ್ಲಿ ಹುಲಿಯ ಚಲನವಲನಗಳನ್ನು ಪತ್ತೆ ಹಚ್ಚಿ, ಹುಲಿ ಓಡಾಡಿರುವುದನ್ನು ಖಚಿತಪಡಿಸಿಕೊಂಡು, ರೈತ ಕೆಂಪಯ್ಯ ತೋಟದಲ್ಲಿ ಕ್ಯಾಮೆರಾವನ್ನು ಅಳವಡಿಸಿದ್ದಾರೆ.
ಇದನ್ನು ಓದಿ: ಸಂವಿಧಾನ ಅರ್ಥೈಸಿಕೊಂಡಲ್ಲಿ ಕೋಮು ಸಂಘರ್ಷ ರಹಿತ ಸಮಾಜ ನಿರ್ಮಾಣ : ಪ್ರಾ. ಅಸ್ನಾ ಉರೂಜ್
ಈ ಭಾಗದಲ್ಲಿ ಹುಲಿಯ ಚಲನವಲನಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಗಸ್ತಿನಲ್ಲಿದ್ದಾರೆ
ಡೇರಿ ಅಧ್ಯಕ್ಷ ಕೆ.ಪಿ.ಚಲುವರಾಜು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಮಚಂದ್ರಣ್ಣ, ಗುತ್ತಿಗೆದಾರ ಕೃಷ್ಣ, ಕೆ.ಡಿ.ಕೃಷ್ಣಮೂರ್ತಿ, ಮಡಿವಾಳ ಬೀರೇಶ್, ಪ್ರಸನ್ನ ಕುಮಾರ್, ಕೆ.ಟಿ.ಬಸಪ್ಪ, ರಾಜಕೀಯ ಕುಮಾರ, ಚಲುವ, ಕೆ.ಸಿ.ಬಸವರಾಜ್, ಚಂದು, ಮಹದೇವಣ್ಣ, ಅರಣ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…