ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಕೆರೆಯ ಬಳಿ ಹುಲಿಯೊಂದು ತನ್ನ ಮೂರು ಮರಿಗಳೊಂದಿಗೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
ಗ್ರಾಮದ ಮಾರ್ಗವಾಗಿ ತೆರಳುತ್ತಿದ್ದ ವಾಹನ ಸವಾರರ ಮೊಬೈಲ್ನಲ್ಲಿ ಹುಲಿಗಳ ದೃಶ್ಯ ಸೆರೆಯಾಗಿದೆ.
ವಾಹನ ಸವಾರರರನ್ನು ಕಂಡೊಡನೆ ಹುಲಿ ಘರ್ಜಿಸಿದ್ದು, ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ.
ಹುಲಿಗಳು ಕಾಣಿಸಿಕೊಂಡಿರುವ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಪರಿಶೀಲನೆ ನಡೆಸಿದ್ದಾರೆ.
ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಚೆ ಬರಲು ಭಯಪಡುವ ಸ್ಥಿತಿ ನಿರ್ಮಾಣವಾಗಿದ್ದು, ಆದಷ್ಟು ಬೇಗ ವ್ಯಾಘ್ರನನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಶನಿವಾರಸಂತೆ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ಸಂಜೆ ಕಾಫಿ ತೋಟದಲ್ಲಿ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ…
ಎಸ್.ಎಸ್.ಭಟ್ ನಂ.ಗೂಡು: ಹೊಸ ಸೇತುವೆಯಲ್ಲಿ ದ್ವಿಮುಖ ಸಂಚಾರಕ್ಕೆ ಪೂರ್ವಸಿದ್ಧತೆ ಕೈಗೊಳ್ಳದಿದ್ದರೆ ಅಪಾಯದ ಭೀತಿ ನಂಜನಗೂಡು: ಕಬಿನಿ ನದಿಯ ದೇವರಾಜ ಅರಸು…
ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಅಸಮಾಧಾನ; ಶೀಘ್ರದಲ್ಲಿ ನೇಮಕ ಮಾಡಲು ಆಗ್ರಹ ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ತಾಲ್ಲೂಕು ಅಧ್ಯಕ್ಷ ಸ್ಥಾನ…
ದೇವರಾಜ ಅರಸು ಕಾಲೋನಿ, ಪೌರಕಾರ್ಮಿಕರ ಕಾಲೋನಿಯಲ್ಲಿ ನೀರಿನ ಸಮಸ್ಯೆ ಪ್ರಶಾಂತ್ ಎಸ್. ಮೈಸೂರು: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ ೬೨ರ…
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದ ಪರಿಣಾಮ ಜಿಲ್ಲೆಯಲ್ಲಿ ತಿಂಗಳು ಕಳೆದರೂ ಗ್ಯಾಸ್ ಟ್ರಬಲ್ ತಗ್ಗಿಲ್ಲ.…