ಮೈಸೂರು

ಹುಲಿ ವಾಪಸ್‌ ಅರಣ್ಯಕ್ಕೆ ಅಟ್ಟುವಲ್ಲಿ ಯಶಸ್ವಿ : ಒಬ್ಬಂಟಿಯಾಗಿ ಓಡಾಡದಂತೆ ಅರಣ್ಯ ಇಲಾಖೆ ಮನವಿ

ಮೈಸೂರು : ರೈತರ ಜಮೀನು, ತೋಟಗಳು, ಗ್ರಾಮಗಳ ಗಡಿಭಾಗದಲ್ಲಿ ಕೂಂಬಿಂಗ್ ಕಾರ್ಯಚರಣೆ ನಡೆಸಿ ಹುಲಿಯನ್ನು ಸುರಕ್ಷಿತವಾಗಿ ಅರಣ್ಯಕ್ಕೆ ವಾಪಸ್ ಅಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ತಾರಕ, ಸತ್ತಿಗೆಹುಂಡಿ, ಪೆಂಜಹಳ್ಳಿ, ಹುಣಸೇಕುಪ್ಪೆ, ಸೋಗಹಳ್ಳಿ, ಕೆಂಪೇಗೌಡನಹುಂಡಿ, ಮಂಚೇಗೌಡನಹಳ್ಳಿ, ಹೊನ್ನಮ್ಮನಕಟ್ಟೆ, ಹೊಸಹೊಳಲು, ರಾಗಲಕುಪ್ಪೆ, ಮಗ್ಗೆ, ಮಳಲಿ, ಎನ್.ಬೆಳ್ತೂರು ಗ್ರಾಮಗಳ ವ್ಯಾಪ್ತಿಯಲ್ಲಿ ಹುಲಿಯು ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆಯು ಮೂರು ತಂಡಗಳನ್ನು ರಚಿಸಿ, ತಾರಕ ಶಾಖಾ ವ್ಯಾಪ್ತಿಯಲ್ಲಿ ಒಂದು ತಂಡ, ಉದ್ದೂರು ಶಾಖಾ ವ್ಯಾಪ್ತಿಯಲ್ಲಿ ಎರಡು ತಂಡಗಳನ್ನು ನೇಮಿಸಿಕೊಂಡು ವಲಯದ ಅರಣ್ಯದ ಹೊರ ಭಾಗದಲ್ಲಿ ರೈತರ ಜಮೀನು,ತೋಟಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆಯನ್ನು ಕೈಗೊಳ್ಳುವುದರ ಮೂಲಕ ಹುಲಿಯನ್ನು ಸುರಕ್ಷಿತವಾಗಿ ವಾಪಸ್ ಅರಣ್ಯಕ್ಕೆ ಯಶಸ್ವಿಯಾಗಿ ಅಟ್ಟಲಾಗಿರುತ್ತದೆ.

ಇದನ್ನು ಓದಿ: ಮುಂದುವರೆದ ಹುಲಿ ದಾಳಿ;ರೈತ ಸಾವು : ರೊಚ್ಚಿಗೆದ್ದ ಗ್ರಾಮಸ್ಥರಿಂದ ಆರ್‌ಎಫ್‌ಓ ಮೇಲೆ ಹಲ್ಲೆ

ಮುಂದುವರಿದು ಇದೇ ರೀತಿ ಹುಲಿಯು ಪದೇ ಪದೇ ಕಾಡಂಚಿನ ಗ್ರಾಮಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ದೂರುಗಳು ಸ್ವೀಕೃತವಾಗುತ್ತಿದ್ದು, ಹೆಚ್ಚಿನ ಅನಾಹುತಗಳನ್ನು ತಪ್ಪಿಸುವ ಸಲುವಾಗಿ ವಲಯದ ಸಿಬ್ಬಂದಿಗಳನ್ನು ಪ್ರತಿದಿನ ರಾತ್ರಿ ಗಸ್ತು ಮಾಡಲು ಸಿಬ್ಬಂದಿಗಳ ತಂಡವನ್ನು ನೇಮಿಸಲಾಗಿರುತ್ತದೆ. ತಂಡವು ಪ್ರತಿದಿನ ಗಸ್ತು ಮಾಡುವ ಮೂಲಕ ನಿಗಾ ಇಡಲಾಗಿದ್ದು,ಅರಣ್ಯದಂಚಿನ ಗ್ರಾಮಗಳ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ರೈತರು, ಸಾರ್ವಜನಿಕರು,ಮಕ್ಕಳು ಎಚ್ಚರಿಕೆಯಿಂದ ಓಡಾಡುವುದು, ಒಬ್ಬಂಟಿಯಾಗಿ ಯಾರು ಓಡಾಡಬಾರದು ಎಂದು ಹೇಳಿದೆ.

ಅಂತರಸಂತೆ ವನ್ಯಜೀವಿ ವಲಯದ ರಿಂಗ್ ರಸ್ತೆಯಲ್ಲಿ ಬರುವ ತಾರಕ ಮತ್ತು ಉದ್ದೂರು ಅರಣ್ಯದಂಚಿನಲ್ಲಿರುವ ಗ್ರಾಮಗಳಲ್ಲಿ ಎರಡು ತಂಡಗಳನ್ನು ರಚಿಸಿದ್ದು, ಸತ್ತಿಗೆಹುಂಡಿ,ಪೆಂಜಹಳ್ಳಿ, ಹುಣಸೇಕುಪ್ಪೆ,ಸೋಗಹಳ್ಳಿ,ಹೊಸಮಾಳ, ಮಂಚೇಗೌಡನಹಳ್ಳಿ, ಹೊನ್ನಮ್ಮನಕಟ್ಟೆ, ಹೊಸಹೊಳಲು, ರಾಗಲಕುಪ್ಪೆ ಭಾಗಗಳಲ್ಲಿ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಡಿಸಿಎಫ್ ಪಿ.ಎ.ಸೀಮಾ ಹೇಳಿದ್ದಾರೆ. ‌

ಬಂಡೀಪುರ,ನಾಗರಹೊಳೆ ಹುಲಿ ಸಂರಕ್ಷಿತ ವ್ಯಾಪ್ತಿಯಲ್ಲಿ ಹುಲಿಗಳ ಉಪಟಳ ಹೆಚ್ಚಾಗಿರುವುದರಿಂದ ಹುಲಿ ಸಂರಕ್ಷಿತ ಪ್ರದೇಶಗಳ ವಲಯಗಳಲ್ಲಿ ಕ್ಷಿಪ್ರ ಕಾರ್ಯಪಡೆ ತಂಡ ರಚಿಸಿ, ಒಂದು ಇಲಾಖೆಯ ವಾಹನವನ್ನು ನಿಗದಿಪಡಿಸಿ ಗಸ್ತು ಮಾಡಲು ಹೇಳಲಾಗಿದೆ.

ಆಂದೋಲನ ಡೆಸ್ಕ್

Recent Posts

ನ್ಯಾಟೋ ದೇಶಗಳಿಗೆ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…

7 mins ago

ಪ್ರಜ್ವಲ್‌ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣ ; 39 ಆರೋಪಿಗಳ ವಿರುದ್ಧ ಚಾರ್ಚ್‌ಶೀಟ್‌

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…

25 mins ago

ರೀಲ್ಸ್ ಹುಚ್ಚಾಟ, ಕೊರಿಯರ್ ಆಫೀಸಿಗೆ ಅಪ್ಪನನ್ನೇ ಪಾರ್ಸೆಲ್ ತಂದ ಮಂದಿ!

ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…

1 hour ago

ಜೆಡಿಎಸ್‌ನಲ್ಲೇ ಇದ್ದೀನಿ, ಪಕ್ಷದಿಂದಲೇ ಸ್ಪರ್ಧೆ : ಜಿ.ಟಿ.ದೇವೇಗೌಡ ಸ್ಪಷ್ಟನೆ

ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ…

2 hours ago

ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ..!

ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್‌ನಲ್ಲಿ ಅನುದಾನದ ಭರವಸೆ -ನವೀನ್ ಡಿಸೋಜ ಮಡಿಕೇರಿ : ಕೊಡಗಿನಲ್ಲಿ…

2 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಅಲೆಮಾರಿ ಮಕ್ಕಳ ಶಿಕ್ಷಣ ಸಂಗಾತಿ ʻಲರ್ನಿಂಗ್ ಕಂಪ್ಯಾನಿಯನ್ಸ್’ ‌

ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…

3 hours ago