ಮೈಸೂರು

ಹುಲಿ ವಾಪಸ್‌ ಅರಣ್ಯಕ್ಕೆ ಅಟ್ಟುವಲ್ಲಿ ಯಶಸ್ವಿ : ಒಬ್ಬಂಟಿಯಾಗಿ ಓಡಾಡದಂತೆ ಅರಣ್ಯ ಇಲಾಖೆ ಮನವಿ

ಮೈಸೂರು : ರೈತರ ಜಮೀನು, ತೋಟಗಳು, ಗ್ರಾಮಗಳ ಗಡಿಭಾಗದಲ್ಲಿ ಕೂಂಬಿಂಗ್ ಕಾರ್ಯಚರಣೆ ನಡೆಸಿ ಹುಲಿಯನ್ನು ಸುರಕ್ಷಿತವಾಗಿ ಅರಣ್ಯಕ್ಕೆ ವಾಪಸ್ ಅಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ತಾರಕ, ಸತ್ತಿಗೆಹುಂಡಿ, ಪೆಂಜಹಳ್ಳಿ, ಹುಣಸೇಕುಪ್ಪೆ, ಸೋಗಹಳ್ಳಿ, ಕೆಂಪೇಗೌಡನಹುಂಡಿ, ಮಂಚೇಗೌಡನಹಳ್ಳಿ, ಹೊನ್ನಮ್ಮನಕಟ್ಟೆ, ಹೊಸಹೊಳಲು, ರಾಗಲಕುಪ್ಪೆ, ಮಗ್ಗೆ, ಮಳಲಿ, ಎನ್.ಬೆಳ್ತೂರು ಗ್ರಾಮಗಳ ವ್ಯಾಪ್ತಿಯಲ್ಲಿ ಹುಲಿಯು ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆಯು ಮೂರು ತಂಡಗಳನ್ನು ರಚಿಸಿ, ತಾರಕ ಶಾಖಾ ವ್ಯಾಪ್ತಿಯಲ್ಲಿ ಒಂದು ತಂಡ, ಉದ್ದೂರು ಶಾಖಾ ವ್ಯಾಪ್ತಿಯಲ್ಲಿ ಎರಡು ತಂಡಗಳನ್ನು ನೇಮಿಸಿಕೊಂಡು ವಲಯದ ಅರಣ್ಯದ ಹೊರ ಭಾಗದಲ್ಲಿ ರೈತರ ಜಮೀನು,ತೋಟಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆಯನ್ನು ಕೈಗೊಳ್ಳುವುದರ ಮೂಲಕ ಹುಲಿಯನ್ನು ಸುರಕ್ಷಿತವಾಗಿ ವಾಪಸ್ ಅರಣ್ಯಕ್ಕೆ ಯಶಸ್ವಿಯಾಗಿ ಅಟ್ಟಲಾಗಿರುತ್ತದೆ.

ಇದನ್ನು ಓದಿ: ಮುಂದುವರೆದ ಹುಲಿ ದಾಳಿ;ರೈತ ಸಾವು : ರೊಚ್ಚಿಗೆದ್ದ ಗ್ರಾಮಸ್ಥರಿಂದ ಆರ್‌ಎಫ್‌ಓ ಮೇಲೆ ಹಲ್ಲೆ

ಮುಂದುವರಿದು ಇದೇ ರೀತಿ ಹುಲಿಯು ಪದೇ ಪದೇ ಕಾಡಂಚಿನ ಗ್ರಾಮಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ದೂರುಗಳು ಸ್ವೀಕೃತವಾಗುತ್ತಿದ್ದು, ಹೆಚ್ಚಿನ ಅನಾಹುತಗಳನ್ನು ತಪ್ಪಿಸುವ ಸಲುವಾಗಿ ವಲಯದ ಸಿಬ್ಬಂದಿಗಳನ್ನು ಪ್ರತಿದಿನ ರಾತ್ರಿ ಗಸ್ತು ಮಾಡಲು ಸಿಬ್ಬಂದಿಗಳ ತಂಡವನ್ನು ನೇಮಿಸಲಾಗಿರುತ್ತದೆ. ತಂಡವು ಪ್ರತಿದಿನ ಗಸ್ತು ಮಾಡುವ ಮೂಲಕ ನಿಗಾ ಇಡಲಾಗಿದ್ದು,ಅರಣ್ಯದಂಚಿನ ಗ್ರಾಮಗಳ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ರೈತರು, ಸಾರ್ವಜನಿಕರು,ಮಕ್ಕಳು ಎಚ್ಚರಿಕೆಯಿಂದ ಓಡಾಡುವುದು, ಒಬ್ಬಂಟಿಯಾಗಿ ಯಾರು ಓಡಾಡಬಾರದು ಎಂದು ಹೇಳಿದೆ.

ಅಂತರಸಂತೆ ವನ್ಯಜೀವಿ ವಲಯದ ರಿಂಗ್ ರಸ್ತೆಯಲ್ಲಿ ಬರುವ ತಾರಕ ಮತ್ತು ಉದ್ದೂರು ಅರಣ್ಯದಂಚಿನಲ್ಲಿರುವ ಗ್ರಾಮಗಳಲ್ಲಿ ಎರಡು ತಂಡಗಳನ್ನು ರಚಿಸಿದ್ದು, ಸತ್ತಿಗೆಹುಂಡಿ,ಪೆಂಜಹಳ್ಳಿ, ಹುಣಸೇಕುಪ್ಪೆ,ಸೋಗಹಳ್ಳಿ,ಹೊಸಮಾಳ, ಮಂಚೇಗೌಡನಹಳ್ಳಿ, ಹೊನ್ನಮ್ಮನಕಟ್ಟೆ, ಹೊಸಹೊಳಲು, ರಾಗಲಕುಪ್ಪೆ ಭಾಗಗಳಲ್ಲಿ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಡಿಸಿಎಫ್ ಪಿ.ಎ.ಸೀಮಾ ಹೇಳಿದ್ದಾರೆ. ‌

ಬಂಡೀಪುರ,ನಾಗರಹೊಳೆ ಹುಲಿ ಸಂರಕ್ಷಿತ ವ್ಯಾಪ್ತಿಯಲ್ಲಿ ಹುಲಿಗಳ ಉಪಟಳ ಹೆಚ್ಚಾಗಿರುವುದರಿಂದ ಹುಲಿ ಸಂರಕ್ಷಿತ ಪ್ರದೇಶಗಳ ವಲಯಗಳಲ್ಲಿ ಕ್ಷಿಪ್ರ ಕಾರ್ಯಪಡೆ ತಂಡ ರಚಿಸಿ, ಒಂದು ಇಲಾಖೆಯ ವಾಹನವನ್ನು ನಿಗದಿಪಡಿಸಿ ಗಸ್ತು ಮಾಡಲು ಹೇಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago