ಮೈಸೂರು: ಮೈಸೂರಿನ ವರಕೋಡು ಎಂಬ ಹಳ್ಳಿಯಲ್ಲಿ ಹುಲಿ ಸಂಚಾರ ಮತ್ತೆ ಶುರುವಾಗಿದ್ದು, ಜನರಲ್ಲಿ ಆತಂಕ ಮನೆಮಾಡಿದೆ.
ಕಳೆದ ಆರು ದಿನಗಳ ಹಿಂದೆ ಅಲ್ಲಿರುವ ಮೊರಾರ್ಜಿ ವಸತಿ ಶಾಲೆಯ ಬಳಿ ಹುಲಿ ಸಂಚರಿಸಿ ಎಲ್ಲರಲ್ಲೂ ಆತಂಕ ಮೂಡಿಸಿತ್ತು. ಕಳೆದ ತಡರಾತ್ರಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ.
ವರಕೋಡು ಅರಣ್ಯ ಪ್ರದೇಶದಲ್ಲಿ ಹುಲಿ ಇರುವಿಕೆಯನ್ನು ಖಾತ್ರಿ ಪಡಿಸಿಕೊಂಡು ಹುಲಿ ಸೆರೆಗಾಗಿ ಹೆಚ್ಚುವರಿ ಹುಲಿ ಬೋನುಗಳನ್ನು ಅಳವಡಿಸಲಾಗಿದೆ.
ಕಾರ್ಯಾಚರಣೆಗೆ ಸಿಬ್ಬಂದಿಗಳ ತಂಡಗಳನ್ನು ನಿಯೋಜಿಸಿ ನೈಟ್ ವಿಷನ್ ಕ್ಯಾಮರಾ, ಟ್ರ್ಯಾಪ್ ಕ್ಯಾಮರಾ ಅಳವಡಿಸಿ ಹುಲಿ ಚಲನವಲನಗಳ ಮೇಲೆ ನಿಗಾ ವಹಿಸಲಾಗಿದೆ.
ಕಾಡಂಚಿನಲ್ಲಿ ಇರುವ ಶಾಲಾ-ಕಾಲೇಜು ಮಕ್ಕಳಿಗೆ ಹಾಗೂ ಜನರಿಗೆ ಯಾವುದೇ ತೊಂದರೆಯಾಗದಂತೆ ತಡೆಗಟ್ಟಲು ವಿಶೇಷ ತಂಡವನ್ನು ರಚಿಸಿ ವಾಹನದೊಂದಿಗೆ ಗಸ್ತು ಮಾಡಿಸಲಾಗುತ್ತಿದೆ.
ಅರಣ್ಯದ ಒಳಗಡೆ ಹಾದುಹೋಗುವ ರಸ್ತೆಗಳಲ್ಲಿ ಜನರ ಸಂಚಾರ ನಿರ್ಬಂಧ ಮುಂದುವರಿಸಲಾಗಿದ್ದು, ಜನತೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಹುಲಿಯನ್ನು ಆದಷ್ಟು ಬೇಗ ಸೆರೆ ಹಿಡಿಯುತ್ತೇವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಧೈರ್ಯ ಹೇಳಿದ್ದಾರೆ.
ವಾಷಿಂಗ್ಟನ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಮತ್ತೆ ಹತ್ಯೆಗೆ ಯತ್ನ ನಡೆದಿದೆ. ಹಿಲ್ಟನ್ ಹೋಟೆಲ್ನ ಘಟನೆ…
ನವದೆಹಲಿ : ರಾಜ್ಯಸಭಾ ಸಂಸದ ರಾಘವ್ ಛಡ್ಡಾ ಅವರು ಎಎಪಿ(ಆಮ್ ಆದ್ಮಿ ಪಾರ್ಟಿ) ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬೆನ್ನಲ್ಲೇ ಸಾಮಾಜಿಕ…
ಬೆಂಗಳೂರು : ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಮೇ 2ರಂದು ಐಡಿಎಸ್ಜಿ ಫಸ್ಟ್…
ವೃತ್ತಿ ಶಿಕ್ಷಣದ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಆಗಮಿಸಿದ್ಧ ಜನಿವಾರ ಧರಿಸಿದ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಮತ್ತೊಂದೆಡೆ ಮೂಗುಬಟ್ಟು…
ದೆಹಲಿ ಕಣ್ಣೋಟ ಸಂಸತ್ತು ಅಂಗೀಕರಿಸಬೇಕಿದ್ದ ಸಂವಿಧಾನದ ೧೩೧ನೇ ತಿದ್ದುಪಡಿ ಮಸೂದೆ ಮಹಿಳಾ ಮೀಸಲಾತಿಯೋ ಅಥವಾ ಜನಗಣತಿಯ ನಂತರ ಲೋಕಸಭೆ ಮತ್ತು…
ನವದೆಹಲಿ : ವಾಷಿಂಗ್ಟನ್ನ ಹಿಲ್ಟನ್ ಹೋಟೆಲ್ನಲ್ಲಿ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಡಿನ್ನರ್ ಕಾರ್ಯಕ್ರದಲ್ಲಿ ಗುಂಡಿನ ದಾಳಿ ನಡೆದ ಘಟನೆ ಕುರಿತು…