ಮೈಸೂರು

ಮೈಸೂರು ಮೃಗಾಲಯದಲ್ಲಿ ಹುಲಿ ಮನೆ ವೀಕ್ಷಣಾ ಗ್ಯಾಲರಿ ಉದ್ಘಾಟಿಸಿದ ಈಶ್ವರ್‌ ಖಂಡ್ರೆ

ಮೈಸೂರು: ಮೈಸೂರು ಮೃಗಾಲಯಕ್ಕೆ ದೂರದೂರದ ಊರುಗಳಿಂದ ಆಗಮಿಸುವ ಪ್ರವಾಸಿಗರಿಗೆ 80 ಎಕರೆಯಷ್ಟು ವಿಶಾಲವಾದ ಮೃಗಾಲಯ ಆವರಣದಲ್ಲಿ ವನ್ಯಮೃಗ, ಪಕ್ಷಿಗಳನ್ನು ವೀಕ್ಷಿಸಲು ವರ್ಧಿತ ಸೇವೆಗಳನ್ನು ನೀಡಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ ಖಂಡ್ರೆ ತಿಳಿಸಿದರು.

ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿಂದು (ಆ.9) ಸಂದರ್ಶಕರ ಅನುಕೂಲತೆಗಾಗಿ ಲಗ್ಗೇಜು ಕೊಠಡಿ ಮತ್ತು ಹುಲಿ ಮನೆಯ ವೀಕ್ಷಣಾ ಗ್ಯಾಲರಿ ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರು ಮೃಗಾಲಯ ವಿಶ್ವದಲ್ಲಿಯೇ ಅತ್ಯಂತ ಜನಪ್ರಿಯ ಮೃಗಾಲಯಗಳಲ್ಲಿ ಒಂದಾಗಿದೆ ಎಂಬುದು ಕರುನಾಡಿಗೆ ಹೆಮ್ಮೆಯ ಸಂಗತಿ ಎಂದರು.

ಪ್ರತಿ 4 ವರ್ಷಕ್ಕೊಮ್ಮೆ ಕೇಂದ್ರೀಯ ಮೃಗಾಲಯ ಪ್ರಾಧಿಕಾರ ನಡೆಸುವ ಸಾಮರ್ಥ್ಯ ನಿರ್ವಹಣಾ ಮೌಲ್ಯೀಕರಣದ ಪ್ರಕಾರ ಭಾರತದ ಮೃಗಾಲಯಗಳ ಶ್ರೇಣೀಕರಣದಲ್ಲಿ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ 2ನೇ ಸ್ಥಾನದಲ್ಲಿದೆ. ಚೆನ್ನೈ ಅರಿಜ್ಞರ್ ಅಣ್ಣ ಮೃಗಾಲಯ ಮೊದಲ ಸ್ಥಾನದಲ್ಲಿದೆ ಎಂದು ಮಾಹಿತಿ ನೀಡಿದರು.

ಲಗ್ಗೇಜು ಕೊಠಡಿ: ದೂರದ ಊರಿನಿಂದ ಮೃಗಾಲಯ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ಮತ್ತು ಸಂದರ್ಶಕರು ತಮ್ಮ ಲಗ್ಗೇಜು ಹೊತ್ತು ಮೃಗಾಲಯಕ್ಕೆ ಬಂದು ಇಲ್ಲಿ ಮತ್ತೆ ಕ್ಯೂನಲ್ಲಿ ನಿಂತು ಲಗ್ಗೇಜು ಇಡುವುದು ಕಷ್ಟವಾಗುತ್ತಿತ್ತು. ಜೊತೆಗೆ ಲಗ್ಗೇಜುಗಳಲ್ಲಿ ಸ್ಪೋಟಕ ಇತ್ಯಾದಿಯನ್ನು ತಪಾಸಣೆ ಮಾಡುವುದೂ ಸಿಬ್ಬಂದಿಗೆ ಕಷ್ಟವಾಗುತ್ತಿತ್ತು. ಹೀಗಾಗಿ ವಾಹನ ಪಾರ್ಕಿಂಗ್ ಸ್ಥಳದಲ್ಲಿ ಲಗ್ಗೇಜು ಕೊಠಡಿ ಮಾಡಲಾಗಿದ್ದು, ಇಲ್ಲಿ ಸ್ಕ್ಯಾನರ್ ಅಳವಡಿಸಿ ತಪಾಸಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಹುಲಿ ವೀಕ್ಷಣಾ ಗ್ಯಾಲರಿ: ಮೃಗಾಲಯದಲ್ಲಿರುವ ಹುಲಿ ಮನೆಗಳಲ್ಲಿ ಸಂದರ್ಶಕರಿಗೆ ಹುಲಿಗಳನ್ನು ವೀಕ್ಷಿಸಲು ಅನುಕೂಲವಾಗುವಂತೆ ಇಲ್ಲಿ ವೀಕ್ಷಣಾ ಗ್ಯಾಲರಿ ನಿರ್ಮಿಸಲಾಗಿದೆ. ಇಲ್ಲಿ ಎತ್ತರದ ದಿಬ್ಬ ನಿರ್ಮಿಸಲಾಗಿದ್ದು, ಗಾಜಿನೊಳಗಿಂದ ಸಂದರ್ಶಕರು ವೀಕ್ಷಿಸಬಹುದು. ಇಲ್ಲಿ ಹತ್ತಿರದಿಂದ ಹುಲಿ ವೀಕ್ಷಿಸಲು ಅನುಕೂಲವಾಗುವಂತೆ ಮುಂಚಾಚು ನಿರ್ಮಿಸಲಾಗಿದೆ ಎಂದೂ ವಿವರಿಸಿದರು.

ಕಾರಂಜಿ ಕೆರೆ ಮತ್ಸ್ಯಾಲಯಕ್ಕೆ ಮರು ಟೆಂಡರ್: ಕಾರಂಜಿ ಕೆರೆ ಆವರಣದಲ್ಲಿ ಆರಂಭಿಸಲು ಉದ್ದೇಶಿಸಿರುವ ಸಮುದ್ರ ಮತ್ತು ಸಿಹಿನೀರು ಮೀನುಗಳ ಮತ್ಸ್ಯಾಗಾರ ನಿರ್ಮಿಸಲು ಯೋಜಿಸಲಾಗಿದ್ದು, ಇದಕ್ಕೆ ಕಳೆದ ಜನವರಿಯಲ್ಲಿ ಟೆಂಡರ್ ಕರೆಯಲಾಗಿತ್ತು. ಆದರೆ ಒಬ್ಬ ಗುತ್ತಿಗೆದಾರರು ಮಾತ್ರವೇ ಟೆಂಡರ್ ಸಲ್ಲಿಸಿದ್ದ ಕಾರಣ ಈ ಟೆಂಡರ್ ರದ್ದು ಮಾಡಿ, ಹೊಸದಾಗಿ ಟೆಂಡರ್ ಕರೆಯಲು ತೀರ್ಮಾನಿಸಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ವಿಳಂಬವಾಗಿದ್ದು, ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು.

ಕೂರ್ಗಳ್ಳಿಯಲ್ಲಿ ವನ್ಯಮೃಗ ರಕ್ಷಣಾ ಕೇಂದ್ರ: ಮೈಸೂರು ಹೊರವಲಯ ಕೂರ್ಗಳ್ಳಿಯಲ್ಲಿ ನಾಲ್ಕು ವನ್ಯಜೀವಿ ರಕ್ಷಣಾ ವಿಭಾಗಗಳಿದ್ದು, ಇತ್ತೀಚೆಗೆ ಮತ್ತೆ 2 ವಿಭಾಗಕ್ಕೆ ಅನುಮೋದನೆ ನೀಡಲಾಗಿದೆ. ಇಲ್ಲಿ ಗಾಯಗೊಂಡ ಅಥವಾ ಗ್ರಾಮಕ್ಕೆ ನುಗ್ಗಿ ಮಾನವ – ವನ್ಯಜೀವಿ ಸಂಘರ್ಷಕ್ಕೆ ಕಾರಣವಾದ ಕಾರಣಕ್ಕೆ ಸೆರೆ ಹಿಡಿದ 8 ಹುಲಿ ಅಥವಾ ಚಿರತೆಗಳನ್ನು ಇಲ್ಲಿ ಸಂರಕ್ಷಿಸಬಹುದಾಗಿದೆ ಎಂದು ತಿಳಿಸಿದರು.

ಆನೆಗಳ ಈಜುಕೊಳ: ಕಾಡಿನಲ್ಲಿ ತಾಯಿಯಿಂದ ಬೇರ್ಪಟ್ಟ ಆನೆ ಮರಿಗಳನ್ನು ಪೋಷಿಸಲು ಕೂರ್ಗಳ್ಳಿಯಲ್ಲಿ ಪುನರ್ವಸತಿ ಕೇಂದ್ರ ಸ್ಥಾಪಿಸಲಾಗಿದ್ದು, ಇಲ್ಲಿ 2 ಆನೆ ಮರಿ ಮತ್ತು 3 ದೊಡ್ಡ ಆನೆಗಳಿದ್ದು, ಇವುಗಳಿಗಾಗಿಯೇ ವಿಶೇಷವಾಗಿ ಈಜುಕೊಳ ವಿನ್ಯಾಸಗೊಳಿಸಲಾಗಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಅರ್ಹರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಿ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ…

3 mins ago

ಚಾ. ಬೆಟ್ಟಕ್ಕೆ ಗಂಡಾಂತರ ತರುವ ಕಟ್ಟಡಗಳ ನಿರ್ಮಾಣ ನಿಲ್ಲಿಸಿ

ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…

14 mins ago

ಚಲನಚಿತ್ರ ವಿಮರ್ಶೆಗಳ ಹೆಸರಿನ ಅನಿಸಿಕೆಗಳೂ ಚಿತ್ರೋದ್ಯಮವೂ

ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…

38 mins ago

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

56 mins ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

2 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

3 hours ago