ಮೈಸೂರು

ಮೈಸೂರು ಮೃಗಾಲಯದಲ್ಲಿ ಹುಲಿ ಮನೆ ವೀಕ್ಷಣಾ ಗ್ಯಾಲರಿ ಉದ್ಘಾಟಿಸಿದ ಈಶ್ವರ್‌ ಖಂಡ್ರೆ

ಮೈಸೂರು: ಮೈಸೂರು ಮೃಗಾಲಯಕ್ಕೆ ದೂರದೂರದ ಊರುಗಳಿಂದ ಆಗಮಿಸುವ ಪ್ರವಾಸಿಗರಿಗೆ 80 ಎಕರೆಯಷ್ಟು ವಿಶಾಲವಾದ ಮೃಗಾಲಯ ಆವರಣದಲ್ಲಿ ವನ್ಯಮೃಗ, ಪಕ್ಷಿಗಳನ್ನು ವೀಕ್ಷಿಸಲು ವರ್ಧಿತ ಸೇವೆಗಳನ್ನು ನೀಡಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ ಖಂಡ್ರೆ ತಿಳಿಸಿದರು.

ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿಂದು (ಆ.9) ಸಂದರ್ಶಕರ ಅನುಕೂಲತೆಗಾಗಿ ಲಗ್ಗೇಜು ಕೊಠಡಿ ಮತ್ತು ಹುಲಿ ಮನೆಯ ವೀಕ್ಷಣಾ ಗ್ಯಾಲರಿ ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರು ಮೃಗಾಲಯ ವಿಶ್ವದಲ್ಲಿಯೇ ಅತ್ಯಂತ ಜನಪ್ರಿಯ ಮೃಗಾಲಯಗಳಲ್ಲಿ ಒಂದಾಗಿದೆ ಎಂಬುದು ಕರುನಾಡಿಗೆ ಹೆಮ್ಮೆಯ ಸಂಗತಿ ಎಂದರು.

ಪ್ರತಿ 4 ವರ್ಷಕ್ಕೊಮ್ಮೆ ಕೇಂದ್ರೀಯ ಮೃಗಾಲಯ ಪ್ರಾಧಿಕಾರ ನಡೆಸುವ ಸಾಮರ್ಥ್ಯ ನಿರ್ವಹಣಾ ಮೌಲ್ಯೀಕರಣದ ಪ್ರಕಾರ ಭಾರತದ ಮೃಗಾಲಯಗಳ ಶ್ರೇಣೀಕರಣದಲ್ಲಿ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ 2ನೇ ಸ್ಥಾನದಲ್ಲಿದೆ. ಚೆನ್ನೈ ಅರಿಜ್ಞರ್ ಅಣ್ಣ ಮೃಗಾಲಯ ಮೊದಲ ಸ್ಥಾನದಲ್ಲಿದೆ ಎಂದು ಮಾಹಿತಿ ನೀಡಿದರು.

ಲಗ್ಗೇಜು ಕೊಠಡಿ: ದೂರದ ಊರಿನಿಂದ ಮೃಗಾಲಯ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ಮತ್ತು ಸಂದರ್ಶಕರು ತಮ್ಮ ಲಗ್ಗೇಜು ಹೊತ್ತು ಮೃಗಾಲಯಕ್ಕೆ ಬಂದು ಇಲ್ಲಿ ಮತ್ತೆ ಕ್ಯೂನಲ್ಲಿ ನಿಂತು ಲಗ್ಗೇಜು ಇಡುವುದು ಕಷ್ಟವಾಗುತ್ತಿತ್ತು. ಜೊತೆಗೆ ಲಗ್ಗೇಜುಗಳಲ್ಲಿ ಸ್ಪೋಟಕ ಇತ್ಯಾದಿಯನ್ನು ತಪಾಸಣೆ ಮಾಡುವುದೂ ಸಿಬ್ಬಂದಿಗೆ ಕಷ್ಟವಾಗುತ್ತಿತ್ತು. ಹೀಗಾಗಿ ವಾಹನ ಪಾರ್ಕಿಂಗ್ ಸ್ಥಳದಲ್ಲಿ ಲಗ್ಗೇಜು ಕೊಠಡಿ ಮಾಡಲಾಗಿದ್ದು, ಇಲ್ಲಿ ಸ್ಕ್ಯಾನರ್ ಅಳವಡಿಸಿ ತಪಾಸಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಹುಲಿ ವೀಕ್ಷಣಾ ಗ್ಯಾಲರಿ: ಮೃಗಾಲಯದಲ್ಲಿರುವ ಹುಲಿ ಮನೆಗಳಲ್ಲಿ ಸಂದರ್ಶಕರಿಗೆ ಹುಲಿಗಳನ್ನು ವೀಕ್ಷಿಸಲು ಅನುಕೂಲವಾಗುವಂತೆ ಇಲ್ಲಿ ವೀಕ್ಷಣಾ ಗ್ಯಾಲರಿ ನಿರ್ಮಿಸಲಾಗಿದೆ. ಇಲ್ಲಿ ಎತ್ತರದ ದಿಬ್ಬ ನಿರ್ಮಿಸಲಾಗಿದ್ದು, ಗಾಜಿನೊಳಗಿಂದ ಸಂದರ್ಶಕರು ವೀಕ್ಷಿಸಬಹುದು. ಇಲ್ಲಿ ಹತ್ತಿರದಿಂದ ಹುಲಿ ವೀಕ್ಷಿಸಲು ಅನುಕೂಲವಾಗುವಂತೆ ಮುಂಚಾಚು ನಿರ್ಮಿಸಲಾಗಿದೆ ಎಂದೂ ವಿವರಿಸಿದರು.

ಕಾರಂಜಿ ಕೆರೆ ಮತ್ಸ್ಯಾಲಯಕ್ಕೆ ಮರು ಟೆಂಡರ್: ಕಾರಂಜಿ ಕೆರೆ ಆವರಣದಲ್ಲಿ ಆರಂಭಿಸಲು ಉದ್ದೇಶಿಸಿರುವ ಸಮುದ್ರ ಮತ್ತು ಸಿಹಿನೀರು ಮೀನುಗಳ ಮತ್ಸ್ಯಾಗಾರ ನಿರ್ಮಿಸಲು ಯೋಜಿಸಲಾಗಿದ್ದು, ಇದಕ್ಕೆ ಕಳೆದ ಜನವರಿಯಲ್ಲಿ ಟೆಂಡರ್ ಕರೆಯಲಾಗಿತ್ತು. ಆದರೆ ಒಬ್ಬ ಗುತ್ತಿಗೆದಾರರು ಮಾತ್ರವೇ ಟೆಂಡರ್ ಸಲ್ಲಿಸಿದ್ದ ಕಾರಣ ಈ ಟೆಂಡರ್ ರದ್ದು ಮಾಡಿ, ಹೊಸದಾಗಿ ಟೆಂಡರ್ ಕರೆಯಲು ತೀರ್ಮಾನಿಸಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ವಿಳಂಬವಾಗಿದ್ದು, ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು.

ಕೂರ್ಗಳ್ಳಿಯಲ್ಲಿ ವನ್ಯಮೃಗ ರಕ್ಷಣಾ ಕೇಂದ್ರ: ಮೈಸೂರು ಹೊರವಲಯ ಕೂರ್ಗಳ್ಳಿಯಲ್ಲಿ ನಾಲ್ಕು ವನ್ಯಜೀವಿ ರಕ್ಷಣಾ ವಿಭಾಗಗಳಿದ್ದು, ಇತ್ತೀಚೆಗೆ ಮತ್ತೆ 2 ವಿಭಾಗಕ್ಕೆ ಅನುಮೋದನೆ ನೀಡಲಾಗಿದೆ. ಇಲ್ಲಿ ಗಾಯಗೊಂಡ ಅಥವಾ ಗ್ರಾಮಕ್ಕೆ ನುಗ್ಗಿ ಮಾನವ – ವನ್ಯಜೀವಿ ಸಂಘರ್ಷಕ್ಕೆ ಕಾರಣವಾದ ಕಾರಣಕ್ಕೆ ಸೆರೆ ಹಿಡಿದ 8 ಹುಲಿ ಅಥವಾ ಚಿರತೆಗಳನ್ನು ಇಲ್ಲಿ ಸಂರಕ್ಷಿಸಬಹುದಾಗಿದೆ ಎಂದು ತಿಳಿಸಿದರು.

ಆನೆಗಳ ಈಜುಕೊಳ: ಕಾಡಿನಲ್ಲಿ ತಾಯಿಯಿಂದ ಬೇರ್ಪಟ್ಟ ಆನೆ ಮರಿಗಳನ್ನು ಪೋಷಿಸಲು ಕೂರ್ಗಳ್ಳಿಯಲ್ಲಿ ಪುನರ್ವಸತಿ ಕೇಂದ್ರ ಸ್ಥಾಪಿಸಲಾಗಿದ್ದು, ಇಲ್ಲಿ 2 ಆನೆ ಮರಿ ಮತ್ತು 3 ದೊಡ್ಡ ಆನೆಗಳಿದ್ದು, ಇವುಗಳಿಗಾಗಿಯೇ ವಿಶೇಷವಾಗಿ ಈಜುಕೊಳ ವಿನ್ಯಾಸಗೊಳಿಸಲಾಗಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

6 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

9 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

10 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

10 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

10 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

11 hours ago