ಮೈಸೂರು: ಮೈಸೂರು ಮೃಗಾಲಯಕ್ಕೆ ದೂರದೂರದ ಊರುಗಳಿಂದ ಆಗಮಿಸುವ ಪ್ರವಾಸಿಗರಿಗೆ 80 ಎಕರೆಯಷ್ಟು ವಿಶಾಲವಾದ ಮೃಗಾಲಯ ಆವರಣದಲ್ಲಿ ವನ್ಯಮೃಗ, ಪಕ್ಷಿಗಳನ್ನು ವೀಕ್ಷಿಸಲು ವರ್ಧಿತ ಸೇವೆಗಳನ್ನು ನೀಡಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ತಿಳಿಸಿದರು.
ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿಂದು (ಆ.9) ಸಂದರ್ಶಕರ ಅನುಕೂಲತೆಗಾಗಿ ಲಗ್ಗೇಜು ಕೊಠಡಿ ಮತ್ತು ಹುಲಿ ಮನೆಯ ವೀಕ್ಷಣಾ ಗ್ಯಾಲರಿ ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರು ಮೃಗಾಲಯ ವಿಶ್ವದಲ್ಲಿಯೇ ಅತ್ಯಂತ ಜನಪ್ರಿಯ ಮೃಗಾಲಯಗಳಲ್ಲಿ ಒಂದಾಗಿದೆ ಎಂಬುದು ಕರುನಾಡಿಗೆ ಹೆಮ್ಮೆಯ ಸಂಗತಿ ಎಂದರು.
ಪ್ರತಿ 4 ವರ್ಷಕ್ಕೊಮ್ಮೆ ಕೇಂದ್ರೀಯ ಮೃಗಾಲಯ ಪ್ರಾಧಿಕಾರ ನಡೆಸುವ ಸಾಮರ್ಥ್ಯ ನಿರ್ವಹಣಾ ಮೌಲ್ಯೀಕರಣದ ಪ್ರಕಾರ ಭಾರತದ ಮೃಗಾಲಯಗಳ ಶ್ರೇಣೀಕರಣದಲ್ಲಿ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ 2ನೇ ಸ್ಥಾನದಲ್ಲಿದೆ. ಚೆನ್ನೈ ಅರಿಜ್ಞರ್ ಅಣ್ಣ ಮೃಗಾಲಯ ಮೊದಲ ಸ್ಥಾನದಲ್ಲಿದೆ ಎಂದು ಮಾಹಿತಿ ನೀಡಿದರು.
ಲಗ್ಗೇಜು ಕೊಠಡಿ: ದೂರದ ಊರಿನಿಂದ ಮೃಗಾಲಯ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ಮತ್ತು ಸಂದರ್ಶಕರು ತಮ್ಮ ಲಗ್ಗೇಜು ಹೊತ್ತು ಮೃಗಾಲಯಕ್ಕೆ ಬಂದು ಇಲ್ಲಿ ಮತ್ತೆ ಕ್ಯೂನಲ್ಲಿ ನಿಂತು ಲಗ್ಗೇಜು ಇಡುವುದು ಕಷ್ಟವಾಗುತ್ತಿತ್ತು. ಜೊತೆಗೆ ಲಗ್ಗೇಜುಗಳಲ್ಲಿ ಸ್ಪೋಟಕ ಇತ್ಯಾದಿಯನ್ನು ತಪಾಸಣೆ ಮಾಡುವುದೂ ಸಿಬ್ಬಂದಿಗೆ ಕಷ್ಟವಾಗುತ್ತಿತ್ತು. ಹೀಗಾಗಿ ವಾಹನ ಪಾರ್ಕಿಂಗ್ ಸ್ಥಳದಲ್ಲಿ ಲಗ್ಗೇಜು ಕೊಠಡಿ ಮಾಡಲಾಗಿದ್ದು, ಇಲ್ಲಿ ಸ್ಕ್ಯಾನರ್ ಅಳವಡಿಸಿ ತಪಾಸಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಹುಲಿ ವೀಕ್ಷಣಾ ಗ್ಯಾಲರಿ: ಮೃಗಾಲಯದಲ್ಲಿರುವ ಹುಲಿ ಮನೆಗಳಲ್ಲಿ ಸಂದರ್ಶಕರಿಗೆ ಹುಲಿಗಳನ್ನು ವೀಕ್ಷಿಸಲು ಅನುಕೂಲವಾಗುವಂತೆ ಇಲ್ಲಿ ವೀಕ್ಷಣಾ ಗ್ಯಾಲರಿ ನಿರ್ಮಿಸಲಾಗಿದೆ. ಇಲ್ಲಿ ಎತ್ತರದ ದಿಬ್ಬ ನಿರ್ಮಿಸಲಾಗಿದ್ದು, ಗಾಜಿನೊಳಗಿಂದ ಸಂದರ್ಶಕರು ವೀಕ್ಷಿಸಬಹುದು. ಇಲ್ಲಿ ಹತ್ತಿರದಿಂದ ಹುಲಿ ವೀಕ್ಷಿಸಲು ಅನುಕೂಲವಾಗುವಂತೆ ಮುಂಚಾಚು ನಿರ್ಮಿಸಲಾಗಿದೆ ಎಂದೂ ವಿವರಿಸಿದರು.
ಕಾರಂಜಿ ಕೆರೆ ಮತ್ಸ್ಯಾಲಯಕ್ಕೆ ಮರು ಟೆಂಡರ್: ಕಾರಂಜಿ ಕೆರೆ ಆವರಣದಲ್ಲಿ ಆರಂಭಿಸಲು ಉದ್ದೇಶಿಸಿರುವ ಸಮುದ್ರ ಮತ್ತು ಸಿಹಿನೀರು ಮೀನುಗಳ ಮತ್ಸ್ಯಾಗಾರ ನಿರ್ಮಿಸಲು ಯೋಜಿಸಲಾಗಿದ್ದು, ಇದಕ್ಕೆ ಕಳೆದ ಜನವರಿಯಲ್ಲಿ ಟೆಂಡರ್ ಕರೆಯಲಾಗಿತ್ತು. ಆದರೆ ಒಬ್ಬ ಗುತ್ತಿಗೆದಾರರು ಮಾತ್ರವೇ ಟೆಂಡರ್ ಸಲ್ಲಿಸಿದ್ದ ಕಾರಣ ಈ ಟೆಂಡರ್ ರದ್ದು ಮಾಡಿ, ಹೊಸದಾಗಿ ಟೆಂಡರ್ ಕರೆಯಲು ತೀರ್ಮಾನಿಸಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ವಿಳಂಬವಾಗಿದ್ದು, ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು.
ಕೂರ್ಗಳ್ಳಿಯಲ್ಲಿ ವನ್ಯಮೃಗ ರಕ್ಷಣಾ ಕೇಂದ್ರ: ಮೈಸೂರು ಹೊರವಲಯ ಕೂರ್ಗಳ್ಳಿಯಲ್ಲಿ ನಾಲ್ಕು ವನ್ಯಜೀವಿ ರಕ್ಷಣಾ ವಿಭಾಗಗಳಿದ್ದು, ಇತ್ತೀಚೆಗೆ ಮತ್ತೆ 2 ವಿಭಾಗಕ್ಕೆ ಅನುಮೋದನೆ ನೀಡಲಾಗಿದೆ. ಇಲ್ಲಿ ಗಾಯಗೊಂಡ ಅಥವಾ ಗ್ರಾಮಕ್ಕೆ ನುಗ್ಗಿ ಮಾನವ – ವನ್ಯಜೀವಿ ಸಂಘರ್ಷಕ್ಕೆ ಕಾರಣವಾದ ಕಾರಣಕ್ಕೆ ಸೆರೆ ಹಿಡಿದ 8 ಹುಲಿ ಅಥವಾ ಚಿರತೆಗಳನ್ನು ಇಲ್ಲಿ ಸಂರಕ್ಷಿಸಬಹುದಾಗಿದೆ ಎಂದು ತಿಳಿಸಿದರು.
ಆನೆಗಳ ಈಜುಕೊಳ: ಕಾಡಿನಲ್ಲಿ ತಾಯಿಯಿಂದ ಬೇರ್ಪಟ್ಟ ಆನೆ ಮರಿಗಳನ್ನು ಪೋಷಿಸಲು ಕೂರ್ಗಳ್ಳಿಯಲ್ಲಿ ಪುನರ್ವಸತಿ ಕೇಂದ್ರ ಸ್ಥಾಪಿಸಲಾಗಿದ್ದು, ಇಲ್ಲಿ 2 ಆನೆ ಮರಿ ಮತ್ತು 3 ದೊಡ್ಡ ಆನೆಗಳಿದ್ದು, ಇವುಗಳಿಗಾಗಿಯೇ ವಿಶೇಷವಾಗಿ ಈಜುಕೊಳ ವಿನ್ಯಾಸಗೊಳಿಸಲಾಗಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದರು.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…