ಮೈಸೂರು : ಕಾಡಂಚಿನ ಗ್ರಾಮಗಳಲ್ಲಿ ಜನರನ್ನು ಕಾಡುತ್ತಿದ್ದ ಹುಲಿ ಇದೀಗ ನಗರ ಪ್ರದೇಶಕ್ಕೂ ಕಾಲಿಟ್ಟಿದ್ದು, ನಗರದ ಹೊರವಲಯದಲ್ಲಿ ಸಂಚರಿಸುವ ಜನರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.
ಮೈಸೂರಿನ ಕೆಆರ್ಎಸ್ ರಸ್ತೆಯಲ್ಲಿರುವ ಕೂರ್ಗಳ್ಳಿ ಸಮೀಪವಿರುವ ಬೆಮೆಲ್ ಒಳಾಂಗಣದಲ್ಲಿ ಶನಿವಾರ ಮುಂಜಾನೆ ಹುಲಿ ಕಾಣಿಸಿಕೊಂಡಿದ್ದು, ಕಾರ್ಖಾನೆ ಗಸ್ತು ತಿರುಗುತ್ತಿದ್ದ ಸಿಬ್ಬಂದಿ ಕಣ್ಣಿಗೆ ಬಿದ್ದಿದೆ.
ಬೆಮೆಲ್ ಆವರಣದ ಇಂಜೆನ್ ಸೆಕ್ಷನ್ ರಸ್ತೆಯಲ್ಲಿ ಬೆಳಗಿನ ಜಾವ ನಾಲ್ಕು ಗಂಟಟೆಯ ವೇಳೆಯಲ್ಲಿ ಗಸ್ತು ತಿರುಗುತ್ತಿದ್ದ ಭದ್ರತಾ ಸಿಬ್ಬಂದಿಗೆ ಹುಲಿ ಹೋಗುತ್ತಿರುವುದು ಕಂಡು ಬಂದಿದಿಎ. ಮೊದಲಿಗೆ ಚಿರತೆ ಎಂದು ಭಾವಿಸಿದ ಸಿಬ್ಬಂದಿ ಕಾರಿನಲ್ಲಿ ಅದನ್ನು ಹಿಂಬಾಲಿಸಿದಾಗ ಹುಲಿ ಎಂದು ಖಚಿತವಾಗಿದೆ. ಸದ್ಯ ಈ ದೃಶ್ಯ ಎಲ್ಲೆಡೆ ವೈರಲ್ ಆಗಿದೆ.
ಅರಣ್ಯ ಇಲಾಖೆಯಿಂದ ಸಿಬ್ಬಂದಿಗಳಿಗೆ ಎಚ್ಚರಿಕೆ
ರಾತ್ರಿ ವೇಳೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುವಂತೆ ಈಗಾಗಲೇ ಅಧಿಕಾರಿಗಳು ಉದ್ಯೋಗಿಗಳಿಗೆ ಸೂಚಿಸಿದ್ದು, ವಿಷಯ ತಿಳಿದ ಕೂಡಲೇ ಹುಲಿ ಸೆರೆ ಹಿಡಿಯಲು ಕಾರ್ಯಪಡೆ ತಂಡ ಕಾರ್ಯನಿರ್ವಹಿಸುತ್ತಿದೆ. ತಂಡದಲ್ಲಿ ಪಶುವೈದ್ಯ ಸೇರಿ 20 ಸಿಬ್ಬಂದಿ ಇದ್ದಾರೆ. ಇಲವಾಲ ವ್ಯಾಪ್ತಿಯ ಆರ್. ಎಫ್. ಓ. ಸಂತೋಷ್ ಹೂಗಾರ್ ಡಿ. ಆರ್.ಎಫ್. ಓ ಸುಂದರ್ ಮತ್ತು ಸಿಬ್ಬಂದಿಗಳು ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ಅರಣ್ಯ ಇಲಾಖೆ ಗಸ್ತು
ಅರಣ್ಯ ಇಲಾಖೆ ಅಧಿಕಾರಿಗಳು ಬೆಮೆಲ್ ಒಳಗಡೆ ಹಾಗೂ ಹೊರಗಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದು, ಹುಲಿ ಸೆರೆಗೆ ಪ್ಲಾನ್ ರೂಪಿಸಿದ್ದಾರೆ. ಇನ್ನು ಸುತ್ತಮುತ್ತಲಿನ ಪ್ರದೇಶದ ಜನರಲ್ಲೂ ಆತಂಕ ಮನೆ ಮಾಡಿದೆ. ತಕ್ಷಣ ಹುಲಿ ಸೆರೆ ಹಿಡಿಯುವಂತೆ ಮನವಿ ಮಾಡಿದ್ದಾರೆ
ಕ್ಯೂಂಬಿಂಗ್ ಕಾರ್ಯಚರಣೆ ಆರಂಭ
ಬೆಮೆಲ್ ಆವರಣ ಸುತ್ತ ಮುತ್ತ ಕೆಲವು ಭಾಗ ಅರಣ್ಯದಂತೆಯೇ ಇದ್ದು ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಯುತ್ತಿದೆ. ಹುಲಿ ಕಂಡುಬಂದಿದ್ದ ಸಮೀಪದ ವಸತಿ ಪ್ರದೇಶಗಳಿಗೆ ನುಗ್ಗದಂತೆ ಸಹ ಕ್ರಮ ವಹಿಸಲಾಗಿದೆ. ಅವಶ್ಯವಿದ್ದಲ್ಲಿ ಥರ್ಮಲ್ ಕ್ಯಾಮರಾ ಅಳವಡಿಸಿದ ಡ್ರೋನ್ ಸಹ ಬಳಸಲಾಗುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಶೀಘ್ರವೇ ಹುಲಿ ಸೆರೆ ಹಿಡಿದು ಆತಂಕ ದೂರ ಮಾಡಲಾಗುತ್ತದೆ ಎಂದು ಡಿ ಸಿ ಎಫ್ ಪರಮೇಶ್ ತಿಳಿಸಿದ್ದಾರೆ.
ಅರಣ್ಯ ಇಲಾಖೆಯಿಂದ ಸಹಾಯವಾಣಿ
ಶನಿವಾರ ಹುಲಿಯು ಕಾಣಿಸಿಕೊಂಡ ಹಿನ್ನೆಲೆ ಬೆಮೆಲ್ ನೌಕರರು ಆತಂಕದಲ್ಲಿ ಇದ್ದಾರೆ. ರೈತರು ಜಾಗ್ರತೆ ವಹಿಸಬೇಕು ಹುಲಿ ಕಂಡು ಬಂದಲ್ಲಿ ಅಥವಾ ಅದರ ಹೆಜ್ಜೆಗಳು ಕಂಡು ಬಂದರೆ ತಕ್ಷಣ ಅರಣ್ಯ ಇಲಾಖೆಯ ಸಹಾಯವಾಣಿ ಸಂಖ್ಯೆ 1926ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಕೋರಿದ್ದಾರೆ.
ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದ್ದಾರೆ.…
ಉತ್ತರ ಪ್ರದೇಶ: ಫೆಬ್ರವರಿ.10ರಂದು ಎರಡೂವರೆ ಗಂಟೆಗಳ ಕಾಲ ಪ್ರವಾಸಿಗರಿಗೆ ತಾಜ್ಮಹಲ್ ಪ್ರವೇಶ ನಿಷೇಧಿಸಲಾಗಿದೆ. ಭಾರತೀಯ ಪುರಾತತ್ವ ಸಮೀಕ್ಷೆ ಪ್ರಕಾರ ಸೀಶೆಲ್ಸ್…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ…
ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…
ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…
ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…