ಮೈಸೂರು

ಮೈಸೂರು | ಬೆಮಲ್‌ ಕ್ಯಾಂಪಸ್‌ನಲ್ಲಿ ಹುಲಿ ದರ್ಶನ ; ಭಯದ ವಾತಾವರಣ

ಮೈಸೂರು : ಕಾಡಂಚಿನ ಗ್ರಾಮಗಳಲ್ಲಿ ಜನರನ್ನು ಕಾಡುತ್ತಿದ್ದ ಹುಲಿ ಇದೀಗ ನಗರ ಪ್ರದೇಶಕ್ಕೂ ಕಾಲಿಟ್ಟಿದ್ದು, ನಗರದ ಹೊರವಲಯದಲ್ಲಿ ಸಂಚರಿಸುವ ಜನರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.

ಮೈಸೂರಿನ ಕೆಆರ್ಎಸ್ ರಸ್ತೆಯಲ್ಲಿರುವ ಕೂರ್ಗಳ್ಳಿ ಸಮೀಪವಿರುವ ಬೆಮೆಲ್ ಒಳಾಂಗಣದಲ್ಲಿ ಶನಿವಾರ ಮುಂಜಾನೆ ಹುಲಿ ಕಾಣಿಸಿಕೊಂಡಿದ್ದು, ಕಾರ್ಖಾನೆ ಗಸ್ತು ತಿರುಗುತ್ತಿದ್ದ ಸಿಬ್ಬಂದಿ ಕಣ್ಣಿಗೆ ಬಿದ್ದಿದೆ.

ಬೆಮೆಲ್‌ ಆವರಣದ ಇಂಜೆನ್‌ ಸೆಕ್ಷನ್‌ ರಸ್ತೆಯಲ್ಲಿ ಬೆಳಗಿನ ಜಾವ ನಾಲ್ಕು ಗಂಟಟೆಯ ವೇಳೆಯಲ್ಲಿ ಗಸ್ತು ತಿರುಗುತ್ತಿದ್ದ ಭದ್ರತಾ ಸಿಬ್ಬಂದಿಗೆ ಹುಲಿ ಹೋಗುತ್ತಿರುವುದು ಕಂಡು ಬಂದಿದಿಎ. ಮೊದಲಿಗೆ ಚಿರತೆ ಎಂದು ಭಾವಿಸಿದ ಸಿಬ್ಬಂದಿ ಕಾರಿನಲ್ಲಿ ಅದನ್ನು ಹಿಂಬಾಲಿಸಿದಾಗ ಹುಲಿ ಎಂದು ಖಚಿತವಾಗಿದೆ. ಸದ್ಯ ಈ ದೃಶ್ಯ ಎಲ್ಲೆಡೆ ವೈರಲ್‌ ಆಗಿದೆ.

ಅರಣ್ಯ ಇಲಾಖೆಯಿಂದ ಸಿಬ್ಬಂದಿಗಳಿಗೆ ಎಚ್ಚರಿಕೆ
ರಾತ್ರಿ ವೇಳೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುವಂತೆ ಈಗಾಗಲೇ ಅಧಿಕಾರಿಗಳು ಉದ್ಯೋಗಿಗಳಿಗೆ ಸೂಚಿಸಿದ್ದು, ವಿಷಯ ತಿಳಿದ ಕೂಡಲೇ ಹುಲಿ ಸೆರೆ ಹಿಡಿಯಲು ಕಾರ್ಯಪಡೆ ತಂಡ ಕಾರ್ಯನಿರ್ವಹಿಸುತ್ತಿದೆ. ತಂಡದಲ್ಲಿ ಪಶುವೈದ್ಯ ಸೇರಿ 20 ಸಿಬ್ಬಂದಿ ಇದ್ದಾರೆ. ಇಲವಾಲ ವ್ಯಾಪ್ತಿಯ ಆರ್. ಎಫ್. ಓ. ಸಂತೋಷ್ ಹೂಗಾರ್ ಡಿ. ಆರ್.ಎಫ್. ಓ ಸುಂದರ್ ಮತ್ತು ಸಿಬ್ಬಂದಿಗಳು ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

ಅರಣ್ಯ ಇಲಾಖೆ ಗಸ್ತು
ಅರಣ್ಯ ಇಲಾಖೆ ಅಧಿಕಾರಿಗಳು‌‌ ಬೆಮೆಲ್ ಒಳಗಡೆ ಹಾಗೂ ಹೊರಗಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದು, ಹುಲಿ ಸೆರೆಗೆ ಪ್ಲಾನ್ ರೂಪಿಸಿದ್ದಾರೆ. ಇನ್ನು ಸುತ್ತಮುತ್ತಲಿನ ಪ್ರದೇಶದ ಜನರಲ್ಲೂ ಆತಂಕ ಮನೆ ಮಾಡಿದೆ. ತಕ್ಷಣ ಹುಲಿ ಸೆರೆ ಹಿಡಿಯುವಂತೆ ಮನವಿ ಮಾಡಿದ್ದಾರೆ

ಕ್ಯೂಂಬಿಂಗ್ ಕಾರ್ಯಚರಣೆ ಆರಂಭ
ಬೆಮೆಲ್ ಆವರಣ ಸುತ್ತ ಮುತ್ತ ಕೆಲವು ಭಾಗ ಅರಣ್ಯದಂತೆಯೇ ಇದ್ದು ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಯುತ್ತಿದೆ. ಹುಲಿ ಕಂಡುಬಂದಿದ್ದ ಸಮೀಪದ ವಸತಿ ಪ್ರದೇಶಗಳಿಗೆ ನುಗ್ಗದಂತೆ ಸಹ ಕ್ರಮ ವಹಿಸಲಾಗಿದೆ. ಅವಶ್ಯವಿದ್ದಲ್ಲಿ ಥರ್ಮಲ್ ಕ್ಯಾಮರಾ ಅಳವಡಿಸಿದ ಡ್ರೋನ್ ಸಹ ಬಳಸಲಾಗುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಶೀಘ್ರವೇ ಹುಲಿ ಸೆರೆ ಹಿಡಿದು ಆತಂಕ ದೂರ ಮಾಡಲಾಗುತ್ತದೆ ಎಂದು ಡಿ‌ ಸಿ ಎಫ್ ಪರಮೇಶ್ ತಿಳಿಸಿದ್ದಾರೆ.

ಅರಣ್ಯ ಇಲಾಖೆಯಿಂದ ಸಹಾಯವಾಣಿ
ಶನಿವಾರ ಹುಲಿಯು ಕಾಣಿಸಿಕೊಂಡ ಹಿನ್ನೆಲೆ ಬೆಮೆಲ್‌ ನೌಕರರು ಆತಂಕದಲ್ಲಿ‌ ಇದ್ದಾರೆ. ರೈತರು ಜಾಗ್ರತೆ ವಹಿಸಬೇಕು ಹುಲಿ ಕಂಡು ಬಂದಲ್ಲಿ ಅಥವಾ ಅದರ ಹೆಜ್ಜೆಗಳು ಕಂಡು ಬಂದರೆ ತಕ್ಷಣ ಅರಣ್ಯ ಇಲಾಖೆಯ ಸಹಾಯವಾಣಿ ಸಂಖ್ಯೆ 1926ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

38 mins ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

44 mins ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

2 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

2 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

2 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

4 hours ago