ಮೈಸೂರು

ಮೈಸೂರು | ಬೆಮಲ್‌ ಕ್ಯಾಂಪಸ್‌ನಲ್ಲಿ ಹುಲಿ ದರ್ಶನ ; ಭಯದ ವಾತಾವರಣ

ಮೈಸೂರು : ಕಾಡಂಚಿನ ಗ್ರಾಮಗಳಲ್ಲಿ ಜನರನ್ನು ಕಾಡುತ್ತಿದ್ದ ಹುಲಿ ಇದೀಗ ನಗರ ಪ್ರದೇಶಕ್ಕೂ ಕಾಲಿಟ್ಟಿದ್ದು, ನಗರದ ಹೊರವಲಯದಲ್ಲಿ ಸಂಚರಿಸುವ ಜನರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.

ಮೈಸೂರಿನ ಕೆಆರ್ಎಸ್ ರಸ್ತೆಯಲ್ಲಿರುವ ಕೂರ್ಗಳ್ಳಿ ಸಮೀಪವಿರುವ ಬೆಮೆಲ್ ಒಳಾಂಗಣದಲ್ಲಿ ಶನಿವಾರ ಮುಂಜಾನೆ ಹುಲಿ ಕಾಣಿಸಿಕೊಂಡಿದ್ದು, ಕಾರ್ಖಾನೆ ಗಸ್ತು ತಿರುಗುತ್ತಿದ್ದ ಸಿಬ್ಬಂದಿ ಕಣ್ಣಿಗೆ ಬಿದ್ದಿದೆ.

ಬೆಮೆಲ್‌ ಆವರಣದ ಇಂಜೆನ್‌ ಸೆಕ್ಷನ್‌ ರಸ್ತೆಯಲ್ಲಿ ಬೆಳಗಿನ ಜಾವ ನಾಲ್ಕು ಗಂಟಟೆಯ ವೇಳೆಯಲ್ಲಿ ಗಸ್ತು ತಿರುಗುತ್ತಿದ್ದ ಭದ್ರತಾ ಸಿಬ್ಬಂದಿಗೆ ಹುಲಿ ಹೋಗುತ್ತಿರುವುದು ಕಂಡು ಬಂದಿದಿಎ. ಮೊದಲಿಗೆ ಚಿರತೆ ಎಂದು ಭಾವಿಸಿದ ಸಿಬ್ಬಂದಿ ಕಾರಿನಲ್ಲಿ ಅದನ್ನು ಹಿಂಬಾಲಿಸಿದಾಗ ಹುಲಿ ಎಂದು ಖಚಿತವಾಗಿದೆ. ಸದ್ಯ ಈ ದೃಶ್ಯ ಎಲ್ಲೆಡೆ ವೈರಲ್‌ ಆಗಿದೆ.

ಅರಣ್ಯ ಇಲಾಖೆಯಿಂದ ಸಿಬ್ಬಂದಿಗಳಿಗೆ ಎಚ್ಚರಿಕೆ
ರಾತ್ರಿ ವೇಳೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುವಂತೆ ಈಗಾಗಲೇ ಅಧಿಕಾರಿಗಳು ಉದ್ಯೋಗಿಗಳಿಗೆ ಸೂಚಿಸಿದ್ದು, ವಿಷಯ ತಿಳಿದ ಕೂಡಲೇ ಹುಲಿ ಸೆರೆ ಹಿಡಿಯಲು ಕಾರ್ಯಪಡೆ ತಂಡ ಕಾರ್ಯನಿರ್ವಹಿಸುತ್ತಿದೆ. ತಂಡದಲ್ಲಿ ಪಶುವೈದ್ಯ ಸೇರಿ 20 ಸಿಬ್ಬಂದಿ ಇದ್ದಾರೆ. ಇಲವಾಲ ವ್ಯಾಪ್ತಿಯ ಆರ್. ಎಫ್. ಓ. ಸಂತೋಷ್ ಹೂಗಾರ್ ಡಿ. ಆರ್.ಎಫ್. ಓ ಸುಂದರ್ ಮತ್ತು ಸಿಬ್ಬಂದಿಗಳು ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

ಅರಣ್ಯ ಇಲಾಖೆ ಗಸ್ತು
ಅರಣ್ಯ ಇಲಾಖೆ ಅಧಿಕಾರಿಗಳು‌‌ ಬೆಮೆಲ್ ಒಳಗಡೆ ಹಾಗೂ ಹೊರಗಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದು, ಹುಲಿ ಸೆರೆಗೆ ಪ್ಲಾನ್ ರೂಪಿಸಿದ್ದಾರೆ. ಇನ್ನು ಸುತ್ತಮುತ್ತಲಿನ ಪ್ರದೇಶದ ಜನರಲ್ಲೂ ಆತಂಕ ಮನೆ ಮಾಡಿದೆ. ತಕ್ಷಣ ಹುಲಿ ಸೆರೆ ಹಿಡಿಯುವಂತೆ ಮನವಿ ಮಾಡಿದ್ದಾರೆ

ಕ್ಯೂಂಬಿಂಗ್ ಕಾರ್ಯಚರಣೆ ಆರಂಭ
ಬೆಮೆಲ್ ಆವರಣ ಸುತ್ತ ಮುತ್ತ ಕೆಲವು ಭಾಗ ಅರಣ್ಯದಂತೆಯೇ ಇದ್ದು ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಯುತ್ತಿದೆ. ಹುಲಿ ಕಂಡುಬಂದಿದ್ದ ಸಮೀಪದ ವಸತಿ ಪ್ರದೇಶಗಳಿಗೆ ನುಗ್ಗದಂತೆ ಸಹ ಕ್ರಮ ವಹಿಸಲಾಗಿದೆ. ಅವಶ್ಯವಿದ್ದಲ್ಲಿ ಥರ್ಮಲ್ ಕ್ಯಾಮರಾ ಅಳವಡಿಸಿದ ಡ್ರೋನ್ ಸಹ ಬಳಸಲಾಗುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಶೀಘ್ರವೇ ಹುಲಿ ಸೆರೆ ಹಿಡಿದು ಆತಂಕ ದೂರ ಮಾಡಲಾಗುತ್ತದೆ ಎಂದು ಡಿ‌ ಸಿ ಎಫ್ ಪರಮೇಶ್ ತಿಳಿಸಿದ್ದಾರೆ.

ಅರಣ್ಯ ಇಲಾಖೆಯಿಂದ ಸಹಾಯವಾಣಿ
ಶನಿವಾರ ಹುಲಿಯು ಕಾಣಿಸಿಕೊಂಡ ಹಿನ್ನೆಲೆ ಬೆಮೆಲ್‌ ನೌಕರರು ಆತಂಕದಲ್ಲಿ‌ ಇದ್ದಾರೆ. ರೈತರು ಜಾಗ್ರತೆ ವಹಿಸಬೇಕು ಹುಲಿ ಕಂಡು ಬಂದಲ್ಲಿ ಅಥವಾ ಅದರ ಹೆಜ್ಜೆಗಳು ಕಂಡು ಬಂದರೆ ತಕ್ಷಣ ಅರಣ್ಯ ಇಲಾಖೆಯ ಸಹಾಯವಾಣಿ ಸಂಖ್ಯೆ 1926ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

8 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

9 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

10 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

11 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

11 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

15 hours ago