ಮೈಸೂರು

ಚಾಮುಂಡಿ ಬೆಟ್ಟದಲ್ಲಿ ಬಿಗಿ ಬಂದೋಬಸ್ತ್‌ : 1700ಕ್ಕೂ ಹೆಚ್ಚು ಪೊಲೀಸ್‌ ನಿಯೋಜನೆ

ಮೈಸೂರು : ಆಷಾಢಮಾಸದಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಚಾಮುಂಡಿಬೆಟ್ಟಕ್ಕೆ ಸಾಗರೋಪಾದಿಯಲ್ಲಿ ಭಕ್ತಾದಿಗಳು ಬರುವ ಕಾರಣ ಸುರಕ್ಷತೆಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಲಲಿತಾದ್ರಿಪುರ, ಉತ್ತನಹಳ್ಳಿ, ತಾವರೆಕಟ್ಟೆ ಮಾರ್ಗದಿಂದ ಖಾಸಗಿ ವಾಹನಗಳ ಪ್ರವೇಶ ಇರುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾಲಾಟ್ಕರ್ ಹೇಳಿದರು.

ಚಾಮುಂಡಿಬೆಟ್ಟದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಆಷಾಢಮಾಸದ ಶುಕ್ರವಾರ, ಶನಿವಾರ, ಭಾನುವಾರ ಮತ್ತು ವರ್ಧಂತಿ ದಿನಗಳಂದು ಭಕ್ತರು ಹೆಚ್ಚಾಗಿ ಆಗಮಿಸುವ ಕಾರಣ ಬೆಟ್ಟಕ್ಕೆ ವಾಹನಗಳ ಪ್ರವೇಶ ನಿರ್ಬಂಧ ಸೇರಿ ಸಣ್ಣ ಲೋಪವಾಗದಂತೆ ರಕ್ಷಣೆ ನೀಡಲಾಗುವುದು ಎಂದು ಹೇಳಿದರು.

ಮುಂಜಾನೆ 3 ರಿಂದ ರಾತ್ರಿ 12 ಗಂಟೆವರೆಗೆ ಬಂದೋಬಸ್ತ್ ಮಾಡಲಾಗಿದ್ದು, ನಾಲ್ವರು ಡಿಸಿಪಿ, 12 ಮಂದಿ ಎಸಿಪಿ, 32 ಸರ್ಕಲ್ ಇನ್‌ಸ್ಪೆಕ್ಟರ್, 65 ಪಿಎಸ್‌ಐ,1071, 6 ಕೆಎಸ್‌ಆರ್‌ಪಿ ತುಕಡಿಗಳು, 12 ಸಿಎಆರ್ ತುಕಡಿಗಳು, 300 ಹೋಂಗಾರ್ಡ್‌ಗಳು ಸೇರಿದಂತೆ 1700ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಈ ಬಾರಿ ಯಾವುದೇ ಸ್ಥಳದಿಂದ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಗೂಗಲ್ ಮ್ಯಾಪ್ ಅಥವಾ ವಾಯ್ಸ್ ಸರ್ಚ್ ಉಪಯೋಗಿಸಿ ಲಲಿತಮಹಲ್ ಪಾರ್ಕಿಂಗ್ ಸ್ಥಳವನ್ನು ಸುಲಭವಾಗಿ ತಲುಪುವ, ವಿವಿಐಪಿ ಹಾಗೂ ಸರ್ಕಾರಿ ವಾಹನಗಳಿಗೆ ವಿಶೇಷ ನಿಲುಗಡೆ ಸ್ಥಳ ಗುರುತಿಸಲಾಗಿದೆ. ಬೆಟ್ಟದ ಮೇಲೆ ದರ್ಶನದ ಟಿಕೆಟ್ ವಿತರಣೆ ಮಾಡುವುದಿಲ್ಲ. ಲಲಿತಮಹಲ್ ಮೈದಾನದಲ್ಲಿ 300 ರೂ. ಮತ್ತು 2000 ರೂ. ದರ್ಶನದ ಟಿಕೆಟ್‌ಗಳ ಕೌಂಟರ್ ತೆರೆಯಲಾಗುವುದು. ಸಾಮಾನ್ಯ ಮತ್ತು ಐರಾವತ ಬಸ್ ಕಲ್ಪಿಸಲಾಗುವುದು ಎಂದು ವಿವರಿಸಿದರು.

ಭಕ್ತರು ತಮ್ಮ ವಾಹನಗಳನ್ನು ಲಲಿತಮಹಲ್ ಪ್ಯಾಲೇಸ್ ಮುಂಭಾಗದ ಮೈದಾನದಲ್ಲಿ ನಿಲುಗಡೆ ಮಾಡಬೇಕು. ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ, ನಗರ ಬಸ್ ನಿಲ್ದಾಣದಿಂದ ಶುಕ್ರವಾರ ಮಾತ್ರ ಚಾಮುಂಡಿಬೆಟ್ಟಕ್ಕೆ ಹೋಗುವವರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದರು.

ಮೆಟ್ಟಿಲು ಮೂಲಕ ಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಮುಂಜಾನೆ 5 ಗಂಟೆಯಿಂದ ಪ್ರವೇಶ ಕಲ್ಪಿಸಲಾಗುವುದು. ಈ ಭಕ್ತಾದಿಗಳು ಪಿಂಜಾರಾಪೋಲ್ ಬಳಿಯ ಮೈದಾನದಲ್ಲಿ ವಾಹನ ನಿಲುಗಡೆ ಮಾಡಬಹುದು. ಬೆಟ್ಟದ ನಿವಾಸಿಗಳು ಮುಕ್ತ ಸಂಚಾರಕ್ಕಾಗಿ ಅಗತ್ಯ ದಾಖಲೆಗಳನ್ನು ಹಾಜರಿಪಡಿಸಿ ಪ್ರವೇಶ ಪಡೆಯಬಹುದಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಬಹೂರೂಪಿ | ಜಾನಪದ ಉತ್ಸವಕ್ಕೆ ಚಾಲನೆ

ಮೈಸೂರು : ಸಂಕ್ರಾಂತಿ ಹೊಸ್ತಿಲಲ್ಲಿ ಮೈಸೂರಿನಲ್ಲಿ ನಡೆಯುವ ಕಲಾ ಹಬ್ಬವಾದ ಬಹುರೂಪಿ ನಾಟಕೋತ್ಸವವಕ್ಕೆ ಮುನ್ನುಡಿ ಬರೆದು ‘ಜಾನಪದ ಉತ್ಸವ’ ರಂಗಾಯಣದಲ್ಲಿ…

8 hours ago

ಸಂಗ್ರಹಾಲಯವಾಗಿ ಕುವೆಂಪು ಅವರ ಉದಯರವಿ ಮನೆ

ರಸಪ್ರಶ್ನೆ ಕಾರ್ಯಕ್ರಮದ ಸಮಾರಂಭದಲ್ಲಿ ಡಾ.ಚಿದಾನಂದ ಗೌಡ ಮಾಹಿತಿ ಕುಶಾಲನಗರ : ಕುವೆಂಪುರವರ ಉದಯರವಿ ಮನೆಯನ್ನು ಸಂಗ್ರಹಾಲಯ ಮಾಡುವ ಬಗ್ಗೆ ಚಿಂತನೆ…

8 hours ago

ಮ.ಬೆಟ್ಟ ಮಾರ್ಗದಲ್ಲಿ ಚಿರತೆ ಪ್ರತ್ಯಕ್ಷ : ಎಚ್ಚರಿಕೆಯ ಸಂಚಾರಕ್ಕೆ ಕೋರಿಕೆ

ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು…

9 hours ago

ದ್ವೇಷ ಮರೆಯಿರಿ, ಪ್ರೀತಿ ಗಳಿಸಿ : ಡಿ.ಆರ್.ಪಾಟೀಲ್ ಕರೆ

ನಂಜನಗೂಡು : ದ್ವೇಷ ಮರೆತು, ಪ್ರೀತಿ ಗಳಿಸುವಂತೆ ಕೆಲಸ ಮಾಡಿ ಜೀವನ ನಡೆಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ…

9 hours ago

ಡ್ಯಾಡ್ ಈಸ್‌ ಹೋಂ | ಎಚ್‌ಡಿಕೆ ಎಂಟ್ರಿಗೆ ಡಿಕೆಶಿ, ಸಿದ್ದು ಶಾಕ್‌ ; ಸಂಚಲನ ಮೂಡಿಸುತ್ತಿರುವ AI ವಿಡಿಯೋ

ಬೆಂಗಳೂರು : ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು…

9 hours ago

ಸೋಮನಾಥದಲ್ಲಿ ಶೌರ್ಯ ಯಾತ್ರೆ

ಸೋಮನಾಥ : ಗುಜರಾತ್‌ನ ಗಿರ್‌ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಆಯೋಜಿಸಲಾದ ವಿಧ್ಯುಕ್ತ…

9 hours ago