Tight security at Chamundi Hill: Deployment of over 1,700 police personnel
ಮೈಸೂರು : ಆಷಾಢಮಾಸದಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಚಾಮುಂಡಿಬೆಟ್ಟಕ್ಕೆ ಸಾಗರೋಪಾದಿಯಲ್ಲಿ ಭಕ್ತಾದಿಗಳು ಬರುವ ಕಾರಣ ಸುರಕ್ಷತೆಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಲಲಿತಾದ್ರಿಪುರ, ಉತ್ತನಹಳ್ಳಿ, ತಾವರೆಕಟ್ಟೆ ಮಾರ್ಗದಿಂದ ಖಾಸಗಿ ವಾಹನಗಳ ಪ್ರವೇಶ ಇರುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾಲಾಟ್ಕರ್ ಹೇಳಿದರು.
ಚಾಮುಂಡಿಬೆಟ್ಟದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಆಷಾಢಮಾಸದ ಶುಕ್ರವಾರ, ಶನಿವಾರ, ಭಾನುವಾರ ಮತ್ತು ವರ್ಧಂತಿ ದಿನಗಳಂದು ಭಕ್ತರು ಹೆಚ್ಚಾಗಿ ಆಗಮಿಸುವ ಕಾರಣ ಬೆಟ್ಟಕ್ಕೆ ವಾಹನಗಳ ಪ್ರವೇಶ ನಿರ್ಬಂಧ ಸೇರಿ ಸಣ್ಣ ಲೋಪವಾಗದಂತೆ ರಕ್ಷಣೆ ನೀಡಲಾಗುವುದು ಎಂದು ಹೇಳಿದರು.
ಮುಂಜಾನೆ 3 ರಿಂದ ರಾತ್ರಿ 12 ಗಂಟೆವರೆಗೆ ಬಂದೋಬಸ್ತ್ ಮಾಡಲಾಗಿದ್ದು, ನಾಲ್ವರು ಡಿಸಿಪಿ, 12 ಮಂದಿ ಎಸಿಪಿ, 32 ಸರ್ಕಲ್ ಇನ್ಸ್ಪೆಕ್ಟರ್, 65 ಪಿಎಸ್ಐ,1071, 6 ಕೆಎಸ್ಆರ್ಪಿ ತುಕಡಿಗಳು, 12 ಸಿಎಆರ್ ತುಕಡಿಗಳು, 300 ಹೋಂಗಾರ್ಡ್ಗಳು ಸೇರಿದಂತೆ 1700ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಈ ಬಾರಿ ಯಾವುದೇ ಸ್ಥಳದಿಂದ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಗೂಗಲ್ ಮ್ಯಾಪ್ ಅಥವಾ ವಾಯ್ಸ್ ಸರ್ಚ್ ಉಪಯೋಗಿಸಿ ಲಲಿತಮಹಲ್ ಪಾರ್ಕಿಂಗ್ ಸ್ಥಳವನ್ನು ಸುಲಭವಾಗಿ ತಲುಪುವ, ವಿವಿಐಪಿ ಹಾಗೂ ಸರ್ಕಾರಿ ವಾಹನಗಳಿಗೆ ವಿಶೇಷ ನಿಲುಗಡೆ ಸ್ಥಳ ಗುರುತಿಸಲಾಗಿದೆ. ಬೆಟ್ಟದ ಮೇಲೆ ದರ್ಶನದ ಟಿಕೆಟ್ ವಿತರಣೆ ಮಾಡುವುದಿಲ್ಲ. ಲಲಿತಮಹಲ್ ಮೈದಾನದಲ್ಲಿ 300 ರೂ. ಮತ್ತು 2000 ರೂ. ದರ್ಶನದ ಟಿಕೆಟ್ಗಳ ಕೌಂಟರ್ ತೆರೆಯಲಾಗುವುದು. ಸಾಮಾನ್ಯ ಮತ್ತು ಐರಾವತ ಬಸ್ ಕಲ್ಪಿಸಲಾಗುವುದು ಎಂದು ವಿವರಿಸಿದರು.
ಭಕ್ತರು ತಮ್ಮ ವಾಹನಗಳನ್ನು ಲಲಿತಮಹಲ್ ಪ್ಯಾಲೇಸ್ ಮುಂಭಾಗದ ಮೈದಾನದಲ್ಲಿ ನಿಲುಗಡೆ ಮಾಡಬೇಕು. ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ, ನಗರ ಬಸ್ ನಿಲ್ದಾಣದಿಂದ ಶುಕ್ರವಾರ ಮಾತ್ರ ಚಾಮುಂಡಿಬೆಟ್ಟಕ್ಕೆ ಹೋಗುವವರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಮೆಟ್ಟಿಲು ಮೂಲಕ ಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಮುಂಜಾನೆ 5 ಗಂಟೆಯಿಂದ ಪ್ರವೇಶ ಕಲ್ಪಿಸಲಾಗುವುದು. ಈ ಭಕ್ತಾದಿಗಳು ಪಿಂಜಾರಾಪೋಲ್ ಬಳಿಯ ಮೈದಾನದಲ್ಲಿ ವಾಹನ ನಿಲುಗಡೆ ಮಾಡಬಹುದು. ಬೆಟ್ಟದ ನಿವಾಸಿಗಳು ಮುಕ್ತ ಸಂಚಾರಕ್ಕಾಗಿ ಅಗತ್ಯ ದಾಖಲೆಗಳನ್ನು ಹಾಜರಿಪಡಿಸಿ ಪ್ರವೇಶ ಪಡೆಯಬಹುದಾಗಿದೆ ಎಂದು ಹೇಳಿದರು.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…