ಮೈಸೂರು : ಸದ್ಯದ ಪರಿಸ್ಥಿತಿಯಲ್ಲಿ ಮುಸ್ಲಿಂ ಸಮುದಾಯದ ಅಸ್ಮಿತೆ ಉಳಿಸಿಕೊಳ್ಳಲು ಮೈಸೂರಿನಲ್ಲಿ ಟಿಪ್ಪು ಸುಲ್ತಾನರ 100 ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗುವುದು ಎಂದು ಶಾಸಕ ತನ್ವೀರ್ ಸೇಠ್ ಘೋಷಿಸಿದ್ದಾರೆ. ರಾಜೀವ್ ನಗರ ಅಲ್ ಬದರ್ ಮೈದಾನದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು ಟಿಪ್ಪು ಉತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಸ್ಲಾಂ ಧರ್ಮದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಅವಕಾಶವಿಲ್ಲ. ಇದ್ದಿದ್ದರೇ ಮನೆಗೊಂದರಂತೆ ಟಿಪ್ಪು ಪ್ರತಿಮೆ ನಿರ್ಮಾಣವಾಗುತ್ತಿತ್ತು. ನಮ್ಮನ್ನು ಒಗ್ಗಟ್ಟಾಗಿಸುವ ಶಕ್ತಿ ಟಿಪ್ಪು ಹೆಸರಿಗಿದೆ. ಇಂದು ವಿವಿಧ ಪಕ್ಷಗಳಲ್ಲಿರುವ ಒಂದೇ ಸಮುದಾಯದ ಮುಖಂಡರು ಟಿಪ್ಪು ಹೆಸರಲ್ಲಿ ಒಂದಾಗಿರುವುದೇ ಇದಕ್ಕೆ ಸಾಕ್ಷಿ ಎಂದು ಹೇಳಿದರು.
ಇನ್ನು ಟಿಪ್ಪು ಹೆಸರಿಗೆ ಅನೇಕ ಅಪಚಾರಗಳನ್ನು ಮಾಡಲಾಗುತ್ತಿದೆ. ಸುಳ್ಳು ಕತೆಗಳನ್ನು ಸೃಷ್ಟಿಸಿ ಜನರನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ. ಟಿಪ್ಪು ಅಭಿಮಾನಿಗಳು, ನಮ್ಮ ಸಮುದಾಯ ಎಲ್ಲವನ್ನೂ ಮೌನವಾಗಿ ಸಹಿಸುತ್ತಿದೆ. ಕಾಲ ಬಂದಾಗ ಅದಕ್ಕೆ ಸ್ಪಷ್ಟ ಉತ್ತರ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…