ಮೈಸೂರು

ಮೈಸೂರು : ಸೇನೆ ಬೆಂಬಲಿಸಿ ತಿರಂಗಾ ಯಾತ್ರೆ

ಮೈಸೂರು : ರಾಷ್ಟ್ರೀಯ ಭದ್ರತೆಗಾಗಿ ನಾಗರಿಕರು ಘೋಷವಾಕ್ಯದಡಿ ಮೈಸೂರಿನಲ್ಲಿ ಶುಕ್ರವಾರ ನಡೆದ ತಿರಂಗಾ ಯಾತ್ರೆಯಲ್ಲಿ ದೇಶದ ಮೂರು ಸೇನೆಗಳಿಗೆ ಬಹುಪರಾಕ್‌ ಹೇಳುವ ಮೂಲಕ ದೇಶಭಕ್ತಿಯನ್ನು ಅನಾವರಣಗೊಳಿಸಿ, ವೀರ ಸೈನಿಕರಿಗೆ ಕೃತಜ್ಞತೆ ಸಲ್ಲಿಸಲಾಯಿತು.

ಆಪರೇಷನ್ ಸಿಂಧೂರ ಯಶಸ್ವಿ ಹಿನ್ನಲೆ ನಗರದಲ್ಲಿ ಬಿಜೆಪಿ ವತಿಯಿಂದ ನಡೆದ ತಿರಂಗಾ ಯಾತ್ರೆಯಲ್ಲಿ ಪಕ್ಷಾತೀತವಾಗಿ ಭಾಗವಹಿಸಿದ ಸಾರ್ವಜನಿಕರು ದೇಶದ ಪರ ಜಯಘೋಷ ಮೊಳಗಿಸಿದರು.

ನಗರದ ಜನರಲ್ ಕಾರ್ಯಪ್ಪ ವೃತ್ತದ ಬಳಿ ಜಮಾಯಿಸಿದ ವಿವಿಧ ಕಾಲೇಜು ವಿದ್ಯಾರ್ಥಿಗಳು, ಬಿಜೆಪಿ ಕಾರ್ಯಕರ್ತರು, ಮೈಸೂರಿನ ಸಹಸ್ರಾರು ಸಂಖ್ಯೆಯ ಸಾರ್ವಜನಿಕರು ತಿರಾಂಗವನ್ನಿಡಿದು ಶಿವರಾಂಪೇಟೆ ರಸ್ತೆ, ಕೆ.ಆರ್‌ ವೃತ್ತ, ಡಿ.ದೇವರಾಜು ರಸ್ತೆ ಮುಖೇನ ಮತ್ತೆ ಕಾರ್ಯಪ್ಪ ವೃತ್ತದ ಬಳಿ ಬಂದರು.

ತಿರಂಗ ಯಾತ್ರೆಯಲ್ಲಿ ಜೆಎಸ್ಎಸ್ ದೇಶೀಕೇಂದ್ರ ಸ್ವಾಮೀಜಿ, ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಬಿಜಿಎಸ್ ಸೋಮನಾಥೇಶ್ವರ ಸ್ವಾಮೀಜಿ ಮತ್ತು ವಿವಿಧ ಧರ್ಮದ ಧಾರ್ಮಿಕ ಗುರುಗಳು ಸೇರಿದಂತೆ ಸಾವಿರಾರು ಜನ ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಪ್ರಸ್ತುತ ದಲಿತ ರಾಜಕಾರಣದಲ್ಲಿ ಮಹದೇವಪ್ಪ ಎಂಬ ವಿದ್ಯಮಾನ

ರಮೇಶ್‌ ಎಚ್.ಕೆ. ಶಿವಮೊಗ್ಗ ಕರ್ನಾಟಕದಲ್ಲಿ ದಲಿತ ವರ್ಗಗಳ ರಾಜಕಾರಣ ಎಂದಾಕ್ಷಣ ಕೆ. ಹೆಚ್. ರಂಗನಾಥ್, ಬಿ. ರಾಚಯ್ಯ, ಎನ್. ರಾಚಯ್ಯ,…

16 mins ago

ಬೆಂ-ಮೈ ಹೆದ್ದಾರಿಯಲ್ಲಿ ಕಾರು-ಬಸ್ ಡಿಕ್ಕಿ ; ತಪ್ಪಿದ ಭಾರೀ ಅನಾಹುತ, ಪ್ರಯಾಣಿಕರು ಪಾರು

ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್…

38 mins ago

ಅಮೆರಿಕ ವಶವಾದ ಇರಾನ್‌ ಹಡಗು ; ಸಶಸ್ತ್ರ ಕಡಲ್ಗಳ್ಳತನ ಎಂದ ಇರಾನ್‌

ವಾಷಿಂಗ್ಟನ್ : ಇರಾನ್ ಧ್ವಜವಿರುವ ಸರಕು ಹಡಗನ್ನು (ಟೂಸ್ಕಾ) ಒಮಾನ್ ಕೊಲ್ಲಿಯಲ್ಲಿ (ಹಾರ್ಮುಜ್ ಜಲಸಂಧಿ ಸಮೀಪ) ನಮ್ಮ ಭದ್ರತಾ ಪಡೆಗಳು…

54 mins ago

ದಲಿತ ಚಿಂತಕ ಧೀಮಂತ ನಾಯಕ ಡಾ.ಎಚ್.ಸಿ.ಮಹದೇವಪ್ಪ ಅವರ ಹೋರಾಟದ ಕತೆ……

‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಮನದಾಳದ ಮಾತು ಇಲ್ಲಿದೆ ನಿರೂಪಣೆ.. ಆರ್‌.ಟಿ.ವಿಠ್ಠಲಮೂರ್ತಿ ನಾನು…

2 hours ago

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…

5 hours ago

ಪಿರಿಯಾಪಟ್ಟಣ : ಈಜಲು ನೀರಿಗಿಳಿದಿ ಯುವಕರಿಬ್ಬರು ಸಾವು

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…

5 hours ago