ಮೈಸೂರು

ಇಂದು ಅಂತರಾಷ್ಟ್ರೀಯ ಹುಲಿ ದಿನ: ಭಾರತದ ವಿವಿಧ ರಾಜ್ಯಗಳ ಹುಲಿಗಳ ಸಂಖ್ಯೆ ಎಷ್ಟಿದೆ ಇಲ್ನೊಡಿ…

ಮೈಸೂರು: ಇಂದು( ಜು.29) ಅಂತರಾಷ್ಟ್ರೀಯ ಹುಲಿ‌ ದಿನ. ಹುಲಿ ನಮ್ಮ ದೇಶದ ರಾಷ್ಟ್ರೀಯ ಪ್ರಾಣಿ‌ ಕೂಡ ಹೌದು. ಇತ್ತೀಚಿನ ದಿನಗಳಲ್ಲಿ ಅಳಿವಿನಂಚಿನತ್ತ ಹುಲಿಯ ಸಂತತಿ ಸಾಗುತ್ತಿದೆ. ಕಾಡಿಗೆ ಹುಲಿಗಳ ಅವಶ್ಯವೇನು ಹಾಗೂ  ಕ್ಷೀಣಿಸುತ್ತಿರುವ ಹುಲಿಗಳ ಸಂತತಿಯ ರಕ್ಷಿಸುವ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಪ್ರತಿವರ್ಷ ಅಂತರಾಷ್ಟ್ರೀಯ ಹುಲಿಗಳ  ದಿನವನ್ನು ಆಚರಿಸಲಾಗುತ್ತದೆ.

ವಿಶ್ವದಾದ್ಯಂತ ಜುಲೈ 29 ರಂದು ಹುಲಿಗಳ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷದ ಹುಲಿಗಳ ದಿನದ ಸಂಧರ್ಭದಲ್ಲಿ ಭಾರತದ ವಿವಿಧ ರಾಜ್ಯಗಳಲ್ಲಿ ಹುಲಿಗಳ ಸಂಖ್ಯೆ ಎಷ್ಟಿಟ್ಟಿದೆ ಎಂಬುದು ಇಲ್ಲಿದೆ ಗಮನಿಸಿ.

ಭಾರತದಲ್ಲಿ  ಮಧ್ಯಪ್ರದೇಶ ಅತಿ ಹೆಚ್ಚು ಹುಲಿಗಳನ್ನು ಹೊಂದಿದ್ದು,  ಕೆಲವು ರಾಜ್ಯಗಳಲ್ಲಿ ಒಂದೇ ಒಂದು ಹುಲಿಯು ಇಲ್ಲ.

ಮಧ್ಯಪ್ರದೇಶವು 785 ಹುಲಿಗಳನ್ನು ಹೊಂದಿದ್ದು, ಉತ್ತರಖಂಡವು 560 ಹುಲಿಗಳನ್ನು ಹೊಂದಿದೆ. ನಮ್ಮ ರಾಜ್ಯ ಕರ್ನಾಟಕವು 524 ಹುಲಿಗಳನ್ನು ಹೊಂದಿ ಕ್ರಮವಾಗಿ ದೇಶದಲ್ಲಿ ಅತಿಹೆಚ್ಚು ಹುಲಿ ಹೊಂದಿರುವ ಮೂರನೇ ರಾಜ್ಯವಾಗಿದೆ.

ಇನ್ನೂ ಮಹಾರಾಷ್ಟ್ರವು 444, ತಮಿಳುನಾಡು 306, ಉತ್ತರ ಪ್ರದೇಶ 205, ಕೇರಳ 183, ಅಸ್ಸಾಂ 182, ಪಶ್ಚಿಮ ಬಂಗಾಳ 131‌ಹುಲಿಗಳನ್ನು ಹೊಂದಿದೆ.

ಇನ್ನುಳಿದ ರಾಜ್ಯಗಳಲ್ಲಿ ಹುಲಿಗಳ ಸಂಖ್ಯೆ 100 ಕ್ಕಿಂತಲೂ ಕಡಿಮೆ ಇದೆ. ನೆರೆ ಆಂದ್ರಪ್ರದೇಶದಲ್ಲಿ 62 ಹುಲಿಗಳಿವೆ. ರಾಜಸ್ಥಾನದಲ್ಲಿ 88 ಹುಲಿಗಳಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

7 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

7 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

8 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

8 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

9 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

9 hours ago