ಮೈಸೂರು

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ 5ರಷ್ಟು ಟೋಲ್ ದರ ಹೆಚ್ಚಳವಾಗಲಿದೆ.

ವಾರ್ಷಿಕ ಹಣದುಬ್ಬರ ಆಧಾರಿತ ಹಾಗೂ ರಾಷ್ಟ್ರೀಯ ಹೆದ್ದಾರಿ ಶುಲ್ಕ (ದರಗಳ ನಿರ್ಣಯ ಮತ್ತು ಸಂಗ್ರಹ) ನಿಯಮ 2008ರ ಅನ್ವಯ ಪ್ರತಿ ವರ್ಷ ಟೋಲ್‌ದರ ಶೇ.3 ರಿಂದ ಶೇ.5ರವರೆಗೆ ಹೆಚ್ಚಳ ಆಗಲಿದೆ. ಕಳೆದ ಎರಡು ವರ್ಷಗಳಿಂದ ಇದೇ ರೀತಿ ಟೋಲ್ ದರ ಏರಿಕೆಯಾಗಿತ್ತು.

ಈಗಾಗಲೇ ಎನ್‌ಎಚ್‌ಐಎ ಏಪ್ರಿಲ್ 1 ರಿಂದ ಅನ್ವಯವಾಗುವಂತೆ ಫಾಸ್ಟ್ಯಾಗ್ ಪಾಸ್ ದರವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಖಾಸಗಿ ಕಾರು, ಜೀಪ್, ವ್ಯಾನ್ ಸೇರಿದಂತೆ ವಾಣಿಜ್ಯೇತರ ವಾಹನ ಬಳಕೆ ಮಾಲೀಕರು ಇನ್ನು ಮುಂದೆ ವಾರ್ಷಿಕ ಪಾಸ್‌ಗಳನ್ನು 3,000ರೂ. ಬದಲಿಗೆ, 3,075 ರೂ.ಪಾವತಿಸಿ ಖರೀದಿಸಬೇಕಾಗಿದೆ. ಇದೀಗ ಪ್ರತಿ ವರ್ಷದಂತೆ ಈ ವರ್ಷವೂ ಏಪ್ರಿಲ್ 1 ರಿಂದ ರಾಜ್ಯದ ಎಲ್ಲಾ ಹೆದ್ದಾರಿಗಳಲ್ಲಿ ಟೋಲ್ ದರ ಹೆಚ್ಚಾಗಿರುವುದು ವಾಹನ ಸವಾರರಿಗೆ ಹೊರೆಯಾಗಲಿದೆ.

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ವಾಹನ ಸಂಚಾರ ಪ್ರಾರಂಭವಾದಾಗಿನಿಂದ ಇದು ನಾಲ್ಕನೇ ಬಾರಿ ಬೆಲೆ ಏರಿಕೆಯಾಗಿದೆ. 2023 ರ ಏಪ್ರಿಲ್ 1ರಿಂದ ಹೆದ್ದಾರಿ ಸಂಚಾರಕ್ಕೆ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಟೋಲ್ ದರ ನಿಗದಿ ಮಾಡಿತ್ತು. ನಂತರ ಎರಡು ತಿಂಗಳ ಅವಧಿಯಲ್ಲೇ 2023ರ ಜೂನ್ 1 ರಿಂದ ಶೇ.22ರಷ್ಟು ದರ ಹೆಚ್ಚಿಸಲಾಗಿತ್ತು. ಸಾರ್ವಜನಿಕ ಆಕ್ರೋಶದ ಹಿನ್ನೆಲೆಯಲ್ಲಿ ದರ ಹೆಚ್ಚಳವನ್ನು ವಾಪಸ್ ಪಡೆದಿತ್ತು. ನಂತರ ಏ.1ರಿಂದ ವಾರ್ಷಿಕ ಶೇ.5ರಷ್ಟು ಟೋಲ್ ದರ ಹೆಚ್ಚಳ ಮಾಡುವ ನಿರ್ಧಾರ ಪ್ರಕಟಿಸಿತ್ತು. ಹಾಗಾಗಿ ಇದೀಗ ಮತ್ತೆ ಟೋಲ್ ದರ ಪರಿಷ್ಕರಣೆಯಾಗಿದೆ. ಶುಲ್ಕದಲ್ಲಿ ಏರಿಕೆಯಾಗಿರುವ ವಿಷಯವನ್ನು ಪ್ರಾಧಿಕಾರದ ಮೂಲಗಳು ಖಚಿತಪಡಿಸಿವೆ.

 

ಆಂದೋಲನ ಡೆಸ್ಕ್

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

2 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

3 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

4 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

4 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

5 hours ago

ಒಮ್ಮತದ ಅಭ್ಯರ್ಥಿ ಆಯ್ಕೆ ಆಗಿದೆ ; ಅಲ್ಪಸಂಖ್ಯಾತರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ : ಡಿಸಿಎಂ ಡಿ.ಕೆ

ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ…

5 hours ago