Tomato crop destroyed by miscreants Distraught food vendor
ಮೈಸೂರು: ರಾತ್ರೋರಾತ್ರಿ ದುಷ್ಕರ್ಮಿಗಳು 4 ಸಾವಿರಕ್ಕೂ ಹೆಚ್ಚಿನ ಟೊಮ್ಯಾಟೋ ಗಿಡಗಳನ್ನು ನಾಶ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಬಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಾದೇಗೌಡ ಎಂಬುವವರು ಅರ್ಧ ಎಕರೆ ಜಮೀನಿನಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚಿನ ಟೊಮ್ಯಾಟೋ ಗಿಡಗಳನ್ನು ನಾಟಿ ಮಾಡಿದ್ದರು.
ಇದಕ್ಕಾಗಿಯೇ ಸುಮಾರು 2 ಲಕ್ಷ ಹಣವನ್ನು ಸಹ ಖರ್ಚು ಮಾಡಿದ್ದರು. ಟೊಮ್ಯಾಟೋ ಬೆಳೆ ಕಟಾವಿಗೆ ಬಂದಿದ್ದ ವೇಳೆ ರಾತ್ರೋರಾತ್ರಿ ಕಿಡಿಗೇಡಿಗಳು ಗಿಡಗಳನ್ನು ಕಿತ್ತು ನಾಶಮಾಡಿದ್ದಾರೆ.
ಬೆಳಿಗ್ಗೆ ಜಮೀನಿಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ರೈತ ಮಾದೇಗೌಡ ತೀವ್ರ ಕಂಗಾಲಾಗಿದ್ದಾರೆ. ಘಟನೆ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…
ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…
ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ ಎಚ್.ಡಿ.ಕೋಟೆ: ಈ ಬಾರಿ…
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…
ದಾ.ರಾ.ಮಹೇಶ್ ವೀರನಹೊಸಹಳ್ಳಿಯಲ್ಲಿ ಕಲಾತಂಡಗಳೊಡನೆ ಸ್ವಾಗತ ಕೋರಲು ಅರಣ್ಯ ಇಲಾಖೆ ಸಜ್ಜು ವೀರನಹೊಸಹಳ್ಳಿ: ಆಗಸ್ಟ್ ೨೬ರಂದು ಆರಂಭವಾಗಲಿರುವ ಗಜ ಪಯಣಕ್ಕೆ ವಿವಿಧ…