ಸರಗೂರು: ನಾಳೆ ಮೂರನೇ ಆಷಾಢ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಸರಗೂರು ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟದಲ್ಲಿ ನಾಳೆ ಮೂರನೇ ಆಷಾಢ ಶುಕ್ರವಾಗಿರುವ ಹಿನ್ನೆಲೆಯಲ್ಲಿ ದೇಗುಲದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಇಂದೇ ದೇವಾಲಯವನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗುತ್ತಿದೆ.
ನಾಳೆ ದೇವಾಲಯಕ್ಕೆ ಆಷಾಢ ಶುಕ್ರವಾರದ ಪ್ರಯುಕ್ತ ನೂರಾರು ಮಂದಿ ಬರುವ ನಿರೀಕ್ಷೆಯಿದ್ದು, ದೇವಿಯ ದರ್ಶನ ಮಾಡಲು ಎಲ್ಲಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ.
ಇನ್ನು ನಾಳೆ ಆಷಾಢ ಶುಕ್ರವಾರದ ಪ್ರಯುಕ್ತ ಬೆಟ್ಟಕ್ಕೆ ಖಾಸಗಿ ವಾಹನಗಳು ಹೆಚ್ಚು ಹೆಚ್ಚು ಸಂಚರಿಸಲಿದ್ದು, ಸಾರ್ವಜನಿಕರು ಕೂಡ ಹೆಚ್ಚಾಗಿ ಸೇರುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಬೆಟ್ಟದಲ್ಲಿ ಎಲ್ಲಾ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ.
ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ಸಹೋದರಿಯಾದ ಚಿಕ್ಕದೇವಮ್ಮನಿಗೆ, ಚಾಮುಂಡಿಬೆಟ್ಟದಲ್ಲಿ ಹೇಗೆಲ್ಲಾ ಪೂಜೆ ನಡೆಯುತ್ತೆ ಹಾಗೆಯೇ ಚಿಕ್ಕದೇವಮ್ಮನ ಬೆಟ್ಟದಲ್ಲೂ ಕೂಡ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿದೆ.
ಇನ್ನೂ ಇತಿಹಾಸದ ಪುರಾವೆಗಳ ಪ್ರಕಾರ ಚಿಕ್ಕದೇವಮ್ಮನ ಬೆಟ್ಟಕ್ಕೂ ಮೈಸೂರಿನ ಚಾಮುಂಡಿಬೆಟ್ಟಕ್ಕೂ ಸುರಂಗ ಮಾರ್ಗ ಇದೆ ಎನ್ನಲಾಗುತ್ತಿದ್ದು, ಸಂಶೋಧನೆ ನಡೆಸಿದ ಬಳಿಕವೇ ಇದರ ಸತ್ಯಾಸತ್ಯತೆ ಹೊರಬರಲಿದೆ.
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…