ಸರಗೂರು: ನಾಳೆ ಮೂರನೇ ಆಷಾಢ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಸರಗೂರು ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟದಲ್ಲಿ ನಾಳೆ ಮೂರನೇ ಆಷಾಢ ಶುಕ್ರವಾಗಿರುವ ಹಿನ್ನೆಲೆಯಲ್ಲಿ ದೇಗುಲದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಇಂದೇ ದೇವಾಲಯವನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗುತ್ತಿದೆ.
ನಾಳೆ ದೇವಾಲಯಕ್ಕೆ ಆಷಾಢ ಶುಕ್ರವಾರದ ಪ್ರಯುಕ್ತ ನೂರಾರು ಮಂದಿ ಬರುವ ನಿರೀಕ್ಷೆಯಿದ್ದು, ದೇವಿಯ ದರ್ಶನ ಮಾಡಲು ಎಲ್ಲಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ.
ಇನ್ನು ನಾಳೆ ಆಷಾಢ ಶುಕ್ರವಾರದ ಪ್ರಯುಕ್ತ ಬೆಟ್ಟಕ್ಕೆ ಖಾಸಗಿ ವಾಹನಗಳು ಹೆಚ್ಚು ಹೆಚ್ಚು ಸಂಚರಿಸಲಿದ್ದು, ಸಾರ್ವಜನಿಕರು ಕೂಡ ಹೆಚ್ಚಾಗಿ ಸೇರುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಬೆಟ್ಟದಲ್ಲಿ ಎಲ್ಲಾ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ.
ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ಸಹೋದರಿಯಾದ ಚಿಕ್ಕದೇವಮ್ಮನಿಗೆ, ಚಾಮುಂಡಿಬೆಟ್ಟದಲ್ಲಿ ಹೇಗೆಲ್ಲಾ ಪೂಜೆ ನಡೆಯುತ್ತೆ ಹಾಗೆಯೇ ಚಿಕ್ಕದೇವಮ್ಮನ ಬೆಟ್ಟದಲ್ಲೂ ಕೂಡ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿದೆ.
ಇನ್ನೂ ಇತಿಹಾಸದ ಪುರಾವೆಗಳ ಪ್ರಕಾರ ಚಿಕ್ಕದೇವಮ್ಮನ ಬೆಟ್ಟಕ್ಕೂ ಮೈಸೂರಿನ ಚಾಮುಂಡಿಬೆಟ್ಟಕ್ಕೂ ಸುರಂಗ ಮಾರ್ಗ ಇದೆ ಎನ್ನಲಾಗುತ್ತಿದ್ದು, ಸಂಶೋಧನೆ ನಡೆಸಿದ ಬಳಿಕವೇ ಇದರ ಸತ್ಯಾಸತ್ಯತೆ ಹೊರಬರಲಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…