ಮೈಸೂರು

ಮೈಸೂರು | ನಾಳೆ(ಆ.17) ರಾಷ್ಟ್ರೀಯ ಮುಕ್ತ ಕರಾಟೆ ಪಂದ್ಯಾವಳಿ

ಮೈಸೂರು : ನ್ಯಾಷನಲ್ ಕರಾಟೆ ಅಸೋಸಿಯೇಷನ್ ಆಫ್ ಇಂಡಿಯಾ(ಎನ್‌ಕೆಎ) ವತಿಯಿಂದ ರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್‌ಶಿಪ್-2025 ಪಂದ್ಯಾವಳಿಯನ್ನು ಆ.17ರಂದು ನಗರದ ಚಾಮುಂಡಿವಿಹಾರ ಕ್ರೀಡಾಂಗಣದ ಒಳಾಂಗಣದಲ್ಲಿ ಆಯೋಜಿಸಲಾಗಿದೆ.

ಪಂದ್ಯಾವಳಿಗೂ ಮುನ್ನ ನಡೆಯುವ ಕಾರ್ಯಕ್ರಮವನ್ನು ಶಾಸಕ ಜಿ.ಟಿ.ದೇವೇಗೌಡ ಉದ್ಘಾಟಿಸುವರು. ಪಂದ್ಯಾವಳಿಯನ್ನು ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಮಲ್ಲಿಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್, ಹಿರಿಯ ಪತ್ರಕರ್ತ ಸಿ.ಕೆ.ಮಹೇಂದ್ರ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ಕಾರ್ಲ್ಸ್‌ಬರ್ಗ್ ಇಂಡಿಯಾ ಸಂಸ್ಥೆಯ ಬ್ರೆವರಿ ವಿಭಾಗದ ಮುಖ್ಯಸ್ಥ ಮಯಂಕ್ ಗೌರ್ ಮತ್ತು ಎಸ್‌ಪಿಆರ್ ಅಭಿನ್‌ಬೆವ್ ಇಂಡಿಯಾ ಸಂಸ್ಥೆಯ ಲಾಜಿಸ್ಟಿಕ್ಸ್ ವಿಭಾಗದ ಹಿರಿಯ ವ್ಯವಸ್ಥಾಪ ರಾಧಾಕೃಷ್ಣನ್ ತೃಪ್ತಿ ಪಾಲ್ಗೊಳ್ಳಲಿದ್ದಾರೆ.

ಅತಿಥಿಗಳಾಗಿ ಎಕೆಎಸ್‌ಕೆಎ ರೆಫರಿ ಕಮಿಷನ್ ಛೇರ್ಮನ್ ಎನ್.ಜಿ.ಶಿವದಾಸ್, ಕಾರ್ಯದರ್ಶಿ ಭಾರ್ಗವ್ ರೆಡ್ಡಿ, ಬೆಂಗಳೂರಿನ ಸುರೇಶ್ ಕೆನಿಚಿರಾ, ಅಡ್ವೊಕೇಟ್ ಎಸ್.ಉಮೇಶ್ ಮತ್ತು ನಾಗಾ ಮಾರ್ಷಿಯಲ್ ಆರ್ಟ್ಸ್ ಅಕಾಡೆಮಿ ಅಧ್ಯಕ್ಷ ಸೋಸಲೆ ಎಂ. ಸಿದ್ದರಾಜು ಭಾಗವಹಿಸಲಿದ್ದು, ಎನ್‌ಕೆಎ ಸಂಸ್ಥಾಪಕ ಅಧ್ಯಕ್ಷ ಎನ್.ಶಂಕರ್ ಉಪಸ್ಥಿತರಿರುವರು.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

3 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

3 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

3 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

4 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

4 hours ago