ಮೈಸೂರು: ಜನಮನ ಸೆಳೆಯುವ, ಕಣ್ಮನ ತಣಿಸುವ, ಸಾಂಸ್ಕೃತಿಕ ಶ್ರೀಮಂತಿಕೆಯ ದಸರಾ ಜಂಬೂಸವಾರಿಗೆ ಅರಮನೆಗಳ ನಗರಿಯ ರಾಜಪಥ ಸಿಂಗಾರಗೊಂಡಿದೆ. ಬೆಳಕಿ ವೈಭವ ಅದಕ್ಕೆ ಮತ್ತಷ್ಟು ಮೆರಗು ತುಂಬಿದೆ.
ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆ ನಡೆಯುತ್ತಿದ್ದು, ರಾಜ್ಯದ ಶ್ರೀಮಂತ ಸಂಸ್ಕೃತಿ ಸಂಪ್ರದಾಯವನ್ನು ಪ್ರತಿಬಿಂದಿಸಲಾಗುತ್ತಿದೆ. ಐತಿಹಾಸಿಕ ಜಂಜೂ ಸವಾರಿಗೆ ಅಂತಿಮ ಹಂತದ ಸಿದ್ದತಾ ಕಾರ್ಯಗಳು ನಡೆಯುತ್ತಿದೆ. 750ಕೆಜಿ ತೂಕದ ಅಂಬಾರಿಯಲ್ಲಿ ವಿರಾಜಮಾನಾಳದ ಅಧಿದೇವತೆ ಚಾಮುಂಡೇಶ್ವರಿ ದೇವಿ ವಿಗ್ರಹ ಹೊತ್ತ ನೇತೃತ್ವದ ಗಜಪಡೆ ಸಾಗಲಿದೆ.
ಅಂಬಾ ವಿಲಾಸ ಅರಮನೆ ಆವರಣದ ಬಲರಾಮ ದ್ವಾರದ ಮೇಲೆ ಮಧ್ಯಾಹ್ನ 1-41ರಿಂದ 2-10ರೊಳಗೆ ಸಲ್ಲುವ ಶುಭ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವರು. ಬಳಿಕ ವಿಜಯ ದಶಮಿ ಮೆರವಣಿಗೆ ಆರಂಭವಾಗಲಿದೆ.
ವಿವಿಧ ಜಿಲ್ಲೆಗಳ ಕಲಾವಿದರು, ಸಾಂಸ್ಕೃತಿಕ ತಂಡಗಳು ಪ್ರದರ್ಶನದೊಂದಿಗೆ ಬನ್ನಿಮಂಟಪದವರಗೂ ಸು.5 ಕಿ.ಲೋ ವರೆಗೂ ಮೆರವಣಿಗೆ ಸಾಗಲಿದೆ. ವಿವಿಧ ಯೋಜನೆಗಳು ಕಾರ್ಯಕ್ರಮಗಳು ಮತ್ತು ಸಾಮಾಜಿಕಕ ಸಂದೇಶ ಬಿಂಬಿಸುವ ವಿವಿಧ ಸರ್ಕಾರಿ ಇಲಾಕೆಗಳ ಸ್ತಬ್ಧಚಿತ್ರಗಳು ಮೆರವಣಿಗೆಯ ಭಾಗವಾಗಲಿದೆ. ದಾರಿಯುದ್ದಕ್ಕೂ ಸಹಸ್ರಾರು ಜನರು ವೈಭವದ ಜಂಬೂ ಸವಾರಿಯನ್ನು ವೀಕ್ಷಿಸಲಿದ್ದಾರೆ.
ಪಂಜಿನ ಕವಾಯತು: ಬನ್ನಿಪಂಟಪದಲ್ಲಿ ಶನಿವಾರ ರಾತ್ರಿ 8ಗಂಟೆಗೆ ಪಂಜಿನ ಕವಾಯತು ನಡೆಯಲಿದೆ. ರಾಜ್ಯಪಾಲ ವಜುಭಾಯಿ ವಾಲಾ ಕವಾಯತು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸುವರು.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…