ಮೈಸೂರು

ಸಂಚಾರ ನಿಯಮ ಉಲ್ಲಂಘನೆ : 55 ಕೇಸ್‌ ದಾಖಲು, ವಾಹನ ವಶಕ್ಕೆ

ಮೈಸೂರು : ದಸರಾ ಮುಗಿಯುತ್ತಿದ್ದಂತೆ ಮೈಸೂರು ನಗರಾದ್ಯಂತ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿ, ನಿಯಮ ಉಲ್ಲಂಘನೆ ಮಾಡುತ್ತಿರುವವರ ವಿರುದ್ಧ ಕೇಸ್‌ ದಾಖಲಿಸಿ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ದಸರಾ ಮಹೋತ್ಸವದ ಅಂಗವಾಗಿ ಚೆಸ್ಕಾಂ ವತಿಯಿಂದ ಮೈಸೂರು ನಗರವನ್ನು ದೀಪಾಲಂಕಾರದ ಮೂಲಕ ನವ ವಧುವಿನಂತೆ ಶೃಂಗಾರಗೊಳಿಲಾಗಿತ್ತು. ಅದನ್ನು ವೀಕ್ಷಿಸಲು ಸಂಜೆ ನಂತರ ರಸ್ತೆಗಿಳಿಯುತ್ತಿರುವ ವಾಹನ ಸವಾರರು ಸಂಚಾರ ನಿಯಮವನ್ನು ಪಾಲಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ವಿಶೇಷ ಕಾರ್ಯಚರಣೆ ಆರಂಭಿಸಿ ತ್ರಿಬಲ್ ರೈಡಿಂಗ್ ಮಾಡುವವರ ವಿರುದ್ಧ ೫೫ ಪ್ರಕರಣಗಳನ್ನು ದಾಖಲಿಸಿದ್ದು ಇತರ ಪ್ರಕರಣಗಳಲ್ಲಿ ೫೨ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ವಿದ್ಯುತ್ ದೀಪಾಲಂಕಾರವನ್ನು ವೀಕ್ಷಿಸಲು ಬರುವ ಪ್ರವಾಸಿಗರು ಮತ್ತು ಸ್ಥಳೀಯರು ಸಂಚಾರ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ. ಹೆಲ್ಮೆಟ್ ರಹಿತ ವಾಹನ ಚಾಲನೆ, ತ್ರಿಬಲ್ ರೈಡಿಂಗ್, ದೋಷ ಪೂರಿತ ನಂಬರ್ ಪ್ಲೇಟ್ ಇರುವ ವಾಹನ ಬಳಕೆ ಸೇರಿದಂತೆ ಅನೇಕ ರೀತಿಯಲ್ಲಿ ಸಂಚಾರ ನಿಯಮ ಉಲ್ಲಂಘಿಸುತ್ತಿರುವುದನ್ನು ಸಂಚಾರ ಪೊಲೀಸರು ಕಟ್ಟುನಿಟ್ಟಾಗಿ ಗಮನಿಸುತ್ತಿದ್ದಾರೆ.

ಇದನ್ನು ಓದಿ: ಟ್ರಾಫಿಕ್‌ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ರಿಯಾಯಿತಿ

ಸಂಜೆ ದೀಪಾಲಂಕಾರ ವೀಕ್ಷಿಸಲು ಬರುತ್ತಿರುವ ಯುವಕರ ಮೇಲೆ ತೀವ್ರ ನಿಗಾ ಇಟ್ಟಿರುವ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ ಜೊತೆಗೆ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿರುವುದನ್ನು ಗಮನಿಸಿ, ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಾಚರಣೆಯನ್ನು ಆರಂಭಿಸಿ, ದೇವರಾಜ, ಕೃಷ್ಣರಾಜ, ನರಸಿಂಹರಾಜ, ಸಿದ್ದಾರ್ಥನಗರದ ಮತ್ತು ವಿವಿ ಪುರಂ ಠಾಣೆ ಸಂಚಾರ ಪೊಲೀಸರು ವಾಹನಗಳ ತಪಾಸಣೆ ನಡೆಸಿ, ಪ್ರಕರಣ ದಾಖಲಿಸುತ್ತಿದ್ದಾರೆ.

ಪ್ರಮುಖವಾಗಿ ಹಾರ್ಡಿಂಜ್(ಜಯಚಾಮರಾಜೇಂದ್ರ) ವೃತ್ತ, ಸಯ್ಯಾಜಿರಾವ್ ರಸ್ತೆ, ಬನ್ನಿಮಂಟಪ, ಡಿ.ದೇವರಾಜ ಅರಸು ರಸ್ತೆ, ಕೃಷ್ಣರಾಜ ಬುಲೇವಾರ್ಡ್ ರಸ್ತೆ, ಚಾಮರಾಜ ಜೋಡಿ ರಸ್ತೆ, ಜೆಎಲ್‌ಬಿ ರಸ್ತೆ, ಮಿಲೇನಿಯಂ(ಎಲ್‌ಐಸಿ ಸರ್ಕಲ್) ವೃತ್ತ, ಒಂಟಿಕೊಪ್ಪಲ್ ದೇವಸ್ಥಾನ ರಸ್ತೆ, ಕೆಆರ್‌ಎಸ್ ರಸ್ತೆ, ಮೈಸೂರು-ಬೆಂಗಳೂರು ಬಿಎನ್ ರಸ್ತೆ ಸೇರಿದಂತೆ ಮೈಸೂರು ನಗರಾದ್ಯಂತ ಕಾರ್ಯಾಚರಣೆಯನ್ನು ಚುರುಕುಗೊಳಿಸಿರುವ ಪೊಲೀಸರು ಸಂಚಾರ ನಿಯಮವನ್ನು ಪಾಲಿಸದ ವಾಹನ ಸವಾರರಿಗೆ ದಂಡ ವಿಧಿಸಲು ಮುಂದಾಗಿದ್ದಾರೆ.

ಸಂಚಾರ ಠಾಣೆವಾರು ದಾಖಲಾದ ದೂರುಗಳು
ಮೈಸೂರು: ಸಂಚಾರ ವಿಭಾಗದ ಎಸಿಪಿ ಶಿವಶಂಕರ್ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಿದ ಸಂಚಾರಿ ಪೊಲೀಸರು, ದೇವರಾಜ ಠಾಣೆ ವ್ಯಾಪ್ತಿಯಲ್ಲಿ ೧೩, ಕೃಷ್ಣರಾಜ ಠಾಣೆ ವ್ಯಾಪ್ತಿಯಲ್ಲಿ ೨೧, ನರಸಿಂಹರಾಜ ಠಾಣೆ ವ್ಯಾಪ್ತಿಯಲ್ಲಿ ೧, ಸಿದ್ದಾರ್ಥ ನಗರ ಠಾಣೆ ವ್ಯಾಪ್ತಿಯಲ್ಲಿ ೧೧ ಹಾಗೂ ವಿವಿ ಪುರಂ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ೫೫ ತ್ರಿಬಲ್ ರೈಡಿಂಗ್ ಪ್ರಕರಣಗಳನ್ನು ದಾಖಲಿಸಿ ದಂಡ ವಿಽಸಿದ್ದಾರೆ. ಇತರೆ ಪ್ರಕರಣಗಳಲ್ಲಿ ದೇವರಾಜ ಠಾಣೆ ವ್ಯಾಪ್ತಿಯಲ್ಲಿ ೧೫, ನರಸಿಂಹರಾಜ ೨, ಸಿದ್ದಾರ್ಥ ನಗರ ೧೭, ವಿವಿ ಪುರಂ ಠಾಣೆ ವ್ಯಾಪ್ತಿಯಲ್ಲಿ ೧೮ ವಾಹನಗಳೂ ಸೇರಿದಂತೆ ೫೨ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಆಂದೋಲನ ಡೆಸ್ಕ್

Recent Posts

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

15 mins ago

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…

28 mins ago

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

41 mins ago

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

55 mins ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

1 hour ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

2 hours ago