ಮೈಸೂರು : ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಶೇ.೫೦ರ ದಂಡ ಪಾವತಿಗೆ ಸರ್ಕಾರ ನೀಡಿದ್ದ ಅವಕಾವನ್ನು ಸದ್ಬಳಕೆ ಮಾಡಿಕೊಂಡಿರುವ ವಾಹನ ಸವಾರರು, ೧೯ ದಿನಗಳ ಅವಧಿಯಲ್ಲಿ ಬರೋಬ್ಬರಿ ೨೯.೯೭ ಕೋಟಿ ರೂ. ದಂಡ ಪಾವತಿಸಿದ್ದಾರೆ.
ರಾಜ್ಯ ಸರ್ಕಾರ ದಂಡ ಪಾವತಿಗೆ ಶೇ.೫೦ರಷ್ಟು ರಿಯಾಯಿತಿ ಘೋಷಣೆ ಮಾಡಿರುವುದಕ್ಕೆ ವಾಹನ ಸವಾರರು ಉತ್ತಮ ಪ್ರತಿಕ್ರಿಯೆ ನೀಡಿದ್ದು, ಅ.೧೨ರ ವರೆಗೆ ಒಟ್ಟು ೨೯,೯೭,೬೪,೦೩೦ ರೂ. ಸಂಗ್ರಹವಾಗಿದ್ದು, ಇದರಿಂದಾಗಿ ಒಟ್ಟು ೧೨,೭೦,೮೭೬ ಪ್ರಕರಣಗಳು ಇತ್ಯರ್ಥಗೊಂಡಂತಗಿದೆ.
ಸಂಚಾರ ಇ-ಚಲನ್ನಲ್ಲಿ ದಾಖಲಾದ ಪ್ರಕರಣ ಇತ್ಯರ್ಥಪಡಿಸಲು ಸರ್ಕಾರ ಆ.೨೩ರಿಂದ ಸೆ.೧೨ರ ವರೆಗೆ ಶೇ.೫೦ ರಿಯಾಯಿತಿ ದಂಡ ಪಾವತಿಗೆ ಅವಕಾಶ ಮಾಡಿಕೊಟ್ಟಿತ್ತು. ಈ ಅವಕಾಶವನ್ನು ಬಳಸಿಕೊಂಡು ವಾಹನ ಚಾಲಕರು ದಂಡ ಪಾವತಿ ಮಾಡಿದ್ದಾರೆ.
ಸೀಟ್ ಬೆಲ್ಟ್ ಧರಿಸದೆ ಪ್ರಯಾಣ, ಪ್ರಯಾಣದ ಸಮಯದಲ್ಲಿ ಮೊಬೈಲ್ ಬಳಕೆ, ತ್ರಿಬಲ್ ರೈಡಿಂಗ್, ಹೆಲ್ಮೆಟ್ ರಹಿತ ಪ್ರಯಾಣ, ಸಂಚಾರ ನಿರ್ಬಂಧಿತ ರಸ್ತೆಯಲ್ಲಿ ಪ್ರಯಾಣ, ಸಿಗ್ನಲ್ ಜಂಪ್, ಅತಿ ವೇಗದ ಚಾಲನೆ ಮಾಡುವವರನ್ನು ಎಐ ಕ್ಯಾಮೆರಾ ಗುರುತಿಸುತ್ತಿದೆ. ಅದನ್ನು ಆಧರಿಸಿ ದಂಡ ವಿಧಿಸಲಾಗಿದೆ.
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…