ಮೈಸೂರು : ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಶೇ.೫೦ರ ದಂಡ ಪಾವತಿಗೆ ಸರ್ಕಾರ ನೀಡಿದ್ದ ಅವಕಾವನ್ನು ಸದ್ಬಳಕೆ ಮಾಡಿಕೊಂಡಿರುವ ವಾಹನ ಸವಾರರು, ೧೯ ದಿನಗಳ ಅವಧಿಯಲ್ಲಿ ಬರೋಬ್ಬರಿ ೨೯.೯೭ ಕೋಟಿ ರೂ. ದಂಡ ಪಾವತಿಸಿದ್ದಾರೆ.
ರಾಜ್ಯ ಸರ್ಕಾರ ದಂಡ ಪಾವತಿಗೆ ಶೇ.೫೦ರಷ್ಟು ರಿಯಾಯಿತಿ ಘೋಷಣೆ ಮಾಡಿರುವುದಕ್ಕೆ ವಾಹನ ಸವಾರರು ಉತ್ತಮ ಪ್ರತಿಕ್ರಿಯೆ ನೀಡಿದ್ದು, ಅ.೧೨ರ ವರೆಗೆ ಒಟ್ಟು ೨೯,೯೭,೬೪,೦೩೦ ರೂ. ಸಂಗ್ರಹವಾಗಿದ್ದು, ಇದರಿಂದಾಗಿ ಒಟ್ಟು ೧೨,೭೦,೮೭೬ ಪ್ರಕರಣಗಳು ಇತ್ಯರ್ಥಗೊಂಡಂತಗಿದೆ.
ಸಂಚಾರ ಇ-ಚಲನ್ನಲ್ಲಿ ದಾಖಲಾದ ಪ್ರಕರಣ ಇತ್ಯರ್ಥಪಡಿಸಲು ಸರ್ಕಾರ ಆ.೨೩ರಿಂದ ಸೆ.೧೨ರ ವರೆಗೆ ಶೇ.೫೦ ರಿಯಾಯಿತಿ ದಂಡ ಪಾವತಿಗೆ ಅವಕಾಶ ಮಾಡಿಕೊಟ್ಟಿತ್ತು. ಈ ಅವಕಾಶವನ್ನು ಬಳಸಿಕೊಂಡು ವಾಹನ ಚಾಲಕರು ದಂಡ ಪಾವತಿ ಮಾಡಿದ್ದಾರೆ.
ಸೀಟ್ ಬೆಲ್ಟ್ ಧರಿಸದೆ ಪ್ರಯಾಣ, ಪ್ರಯಾಣದ ಸಮಯದಲ್ಲಿ ಮೊಬೈಲ್ ಬಳಕೆ, ತ್ರಿಬಲ್ ರೈಡಿಂಗ್, ಹೆಲ್ಮೆಟ್ ರಹಿತ ಪ್ರಯಾಣ, ಸಂಚಾರ ನಿರ್ಬಂಧಿತ ರಸ್ತೆಯಲ್ಲಿ ಪ್ರಯಾಣ, ಸಿಗ್ನಲ್ ಜಂಪ್, ಅತಿ ವೇಗದ ಚಾಲನೆ ಮಾಡುವವರನ್ನು ಎಐ ಕ್ಯಾಮೆರಾ ಗುರುತಿಸುತ್ತಿದೆ. ಅದನ್ನು ಆಧರಿಸಿ ದಂಡ ವಿಧಿಸಲಾಗಿದೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…