ಮೈಸೂರು : ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಶೇ.೫೦ರ ದಂಡ ಪಾವತಿಗೆ ಸರ್ಕಾರ ನೀಡಿದ್ದ ಅವಕಾವನ್ನು ಸದ್ಬಳಕೆ ಮಾಡಿಕೊಂಡಿರುವ ವಾಹನ ಸವಾರರು, ೧೯ ದಿನಗಳ ಅವಧಿಯಲ್ಲಿ ಬರೋಬ್ಬರಿ ೨೯.೯೭ ಕೋಟಿ ರೂ. ದಂಡ ಪಾವತಿಸಿದ್ದಾರೆ.
ರಾಜ್ಯ ಸರ್ಕಾರ ದಂಡ ಪಾವತಿಗೆ ಶೇ.೫೦ರಷ್ಟು ರಿಯಾಯಿತಿ ಘೋಷಣೆ ಮಾಡಿರುವುದಕ್ಕೆ ವಾಹನ ಸವಾರರು ಉತ್ತಮ ಪ್ರತಿಕ್ರಿಯೆ ನೀಡಿದ್ದು, ಅ.೧೨ರ ವರೆಗೆ ಒಟ್ಟು ೨೯,೯೭,೬೪,೦೩೦ ರೂ. ಸಂಗ್ರಹವಾಗಿದ್ದು, ಇದರಿಂದಾಗಿ ಒಟ್ಟು ೧೨,೭೦,೮೭೬ ಪ್ರಕರಣಗಳು ಇತ್ಯರ್ಥಗೊಂಡಂತಗಿದೆ.
ಸಂಚಾರ ಇ-ಚಲನ್ನಲ್ಲಿ ದಾಖಲಾದ ಪ್ರಕರಣ ಇತ್ಯರ್ಥಪಡಿಸಲು ಸರ್ಕಾರ ಆ.೨೩ರಿಂದ ಸೆ.೧೨ರ ವರೆಗೆ ಶೇ.೫೦ ರಿಯಾಯಿತಿ ದಂಡ ಪಾವತಿಗೆ ಅವಕಾಶ ಮಾಡಿಕೊಟ್ಟಿತ್ತು. ಈ ಅವಕಾಶವನ್ನು ಬಳಸಿಕೊಂಡು ವಾಹನ ಚಾಲಕರು ದಂಡ ಪಾವತಿ ಮಾಡಿದ್ದಾರೆ.
ಸೀಟ್ ಬೆಲ್ಟ್ ಧರಿಸದೆ ಪ್ರಯಾಣ, ಪ್ರಯಾಣದ ಸಮಯದಲ್ಲಿ ಮೊಬೈಲ್ ಬಳಕೆ, ತ್ರಿಬಲ್ ರೈಡಿಂಗ್, ಹೆಲ್ಮೆಟ್ ರಹಿತ ಪ್ರಯಾಣ, ಸಂಚಾರ ನಿರ್ಬಂಧಿತ ರಸ್ತೆಯಲ್ಲಿ ಪ್ರಯಾಣ, ಸಿಗ್ನಲ್ ಜಂಪ್, ಅತಿ ವೇಗದ ಚಾಲನೆ ಮಾಡುವವರನ್ನು ಎಐ ಕ್ಯಾಮೆರಾ ಗುರುತಿಸುತ್ತಿದೆ. ಅದನ್ನು ಆಧರಿಸಿ ದಂಡ ವಿಧಿಸಲಾಗಿದೆ.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…