ಮೈಸೂರು

ಹಳಿ ತಪ್ಪಿದ ರೈಲು : ಯಶಸ್ವಿ ಅಣಕು ಪ್ರದರ್ಶನ

ಹರಿಹರ : ಅರಸಿಕೆರೆಯಿಂದ ಹಾವೇರಿಗೆ ಹೋಗುತ್ತಿದ್ದ ವಿಶೇಷ ರೈಲಿನ ಎರಡು ಸಾಮಾನ್ಯ ದರ್ಜೆಯ ಪ್ಯಾಸೆಂಜರ್ ಬೋಗಿಗಳು ಹರಿಹರ ರೈಲ್ವೆ ನಿಲ್ದಾಣದ ವ್ಯಾಪ್ತಿಯಲ್ಲಿ ಹಳಿತಪ್ಪಿ ಮಗುಚಿ ಬಿದ್ದಿರುವ ಸನ್ನಿವೇಶ, ತಕ್ಷಣವೇ ರೈಲ್ವೆ ಅಧಿಕಾರಿಗಳು ನಿಗದಿತ ಮಾರ್ಗಸೂಚಿಗಳ ಪ್ರಕಾರ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನೋಡುಗರ ಗಮನ ಸೆಳೆಯಿತು.

ಎನ್‌ಡಿಆರ್‌ಎಫ್ ತಂಡವು ಅಸಿಸ್ಟೆಂಟ್ ಕಮಾಂಡೆಂಟ್ ಸೆಂಥಿಲ್ ಕುಮಾರ್ ನೇತೃತ್ವದಲ್ಲಿ ಇಪ್ಪತ್ತಮೂರು ಸಿಬ್ಬಂದಿ ಹಾಗೂ ಎಸ್.ಎನ್.ಕಿರಣ್ ಕುಮಾರ್ ನೇತೃತ್ವದ ಎಸ್‌ಡಿಆರ್‌ಎಫ್ ತಂಡ ಮತ್ತು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸೋಮಶೇಖರ್ ಅವರ ನೇತೃತ್ವದ ಜಿಲ್ಲಾ ಅಗ್ನಿಶಾಮಕ ದಳದ ತಂಡ 20 ನಿಮಿಷಗಳಲ್ಲಿ ಸ್ಥಳಕ್ಕೆ ತಲುಪಿದವು. ರೈಲ್ವೆ ಆಸ್ಪತ್ರೆಯ ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿ ಸ್ಥಳದಲ್ಲಿಯೆ ಪ್ರಥಮ ಚಿಕಿತ್ಸೆ ನೀಡಿ ಎರಡು ಬೋಗಿಗಳಲ್ಲಿ ಸಿಲುಕಿಗೊಂಡಿದ್ದ ಸುಮಾರು 22 ಪ್ರಯಾಣಿಕರನ್ನು ಆಂಬ್ಯುಲೆನ್ಸ್‌ ನೊಳಗೆ ಕರೆದುಕೊಳ್ಳಲು ಸಹಕರಿಸಿದ ಅಣಕು ಪ್ರದರ್ಶನ ಯಶಸ್ವಿಯಾಯಿತು.

ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶಿಲ್ಪಿ ಅಗರ್ವಾಲ್ ಮಾತನಾಡಿ, ಇಂತಹ ನಿಯತಕಾಲಿಕ ಕಸರತ್ತಿನ ಮಹತ್ವವನ್ನು ವಿವರಿಸಿದರು. ಮಾನವ ಅಂಶದಿಂದ ಉಂಟಾಗುವ ವಿಪತ್ತುಗಳನ್ನು ತಡೆಗಟ್ಟುವಲ್ಲಿ ಸರಿಯಾದ ವಿಧಾನಗಳನ್ನು ತೋರಿಸುತ್ತವೆ. ಅಮೂಲ್ಯವಾದ ಮಾನವ ಜೀವಗಳ ನಷ್ಟವನ್ನು ತಪ್ಪಿಸಲು ಅತ್ಯಂತ ಮಹತ್ವದ್ದಾಗಿದೆ ಎಂದರು. ರಕ್ಷಣಾ ತಂಡಗಳಲ್ಲದೆ ಆಂಬ್ಯುಲೆನ್ಸ್‌ಗಳೊಂದಿಗೆ ವೈದ್ಯಕೀಯ ವಿಭಾಗದ ಸಿಬ್ಬಂದಿಗಳು, ರೈಲ್ವೆ ರಕ್ಷಣಾ ಪಡೆ, ಅಗ್ನಿಶಾಮಕ ದಳ, ನಾಗರಿಕ ಆಡಳಿತದ ಪ್ರತಿನಿಧಿಗಳು, ಸರ್ಕಾರಿ ರೈಲ್ವೆ ಪೊಲೀಸ್ ಮತ್ತು ಸಿವಿಲ್ ಪೊಲೀಸರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

lokesh

Recent Posts

ತ್ರಿನೇಶ್ವರ ದೇವಾಲಯಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಭೇಟಿ

ಮೈಸೂರು: ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಂಪ್ರದಾಯದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು ತ್ರಿನೇಶ್ವರ ದೇವಾಲಯಕ್ಕೆ ಭೇಟಿ ನೀಡಿ…

21 mins ago

ಮಹಾಶಿವರಾತ್ರಿ ಪ್ರಯುಕ್ತ ಅರಮನೆ ತ್ರಿನೇಶ್ವರ ದೇವಾಲಯಕ್ಕೆ ಭಕ್ತರ ದಂಡು

ಮೈಸೂರು: ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿರುವ ತ್ರಿನೇಶ್ವರ ದೇವಾಲಯಕ್ಕೆ ಭಕ್ತರ ದಂಡೇ ಹರಿದು…

27 mins ago

ಓದುಗರ ಪತ್ರ | ಹಟ್ಟಿ ಮಾರಮ್ಮ ದೇವಾಲಯಕ್ಕೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಹಟ್ಟಿ ಮಾರಮ್ಮ ದೇವಾಲಯದಲ್ಲಿ ಪ್ರತಿ ವರ್ಷ ಫೆಬ್ರವರಿ/ಮಾರ್ಚ್ ತಿಂಗಳಲ್ಲಿ ಅದ್ಧೂರಿಯಾಗಿ ಕೊಂಡೋತ್ಸವ, ಜಾತ್ರೆ ನಡೆಯುತ್ತದೆ.…

1 hour ago

ಓದುಗರ ಪತ್ರ | ಮಾದರಿ ಗ್ರಾಮ ಸೌಂದಾಳ

ಮಹಾರಾಷ್ಟ್ರ ರಾಜ್ಯದ ಸೌಂದಾಳ ಗ್ರಾಮವು ದೇಶದಲ್ಲೇ ಮೊದಲ ಜಾತಿ ಮುಕ್ತ ಮನಸ್ಸುಳ್ಳ ಗ್ರಾಮ ಎಂಬ ಕೀರ್ತಿಯನ್ನು ಗಳಿಸಿ ನಮ್ಮ ಸಮಾಜಕ್ಕೆ…

2 hours ago

ಓದುಗರ ಪತ್ರ | ಪಿಯುಸಿ ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಿ

ಈ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸರ್ಕಾರಿ ಕಾಲೇಜುಗಳಿಂದ ಒಟ್ಟು 1.38 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ, ಇವರಲ್ಲಿ 63,514 ವಿದ್ಯಾರ್ಥಿಗಳು…

2 hours ago

ಓದುಗರ ಪತ್ರ | ಹೆಚ್ಚುವರಿ ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾಕಷ್ಟು ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತೊಂದರೆಯಾಗಿದೆ.…

2 hours ago