ಮೈಸೂರು

ಹಳಿ ತಪ್ಪಿದ ರೈಲು : ಯಶಸ್ವಿ ಅಣಕು ಪ್ರದರ್ಶನ

ಹರಿಹರ : ಅರಸಿಕೆರೆಯಿಂದ ಹಾವೇರಿಗೆ ಹೋಗುತ್ತಿದ್ದ ವಿಶೇಷ ರೈಲಿನ ಎರಡು ಸಾಮಾನ್ಯ ದರ್ಜೆಯ ಪ್ಯಾಸೆಂಜರ್ ಬೋಗಿಗಳು ಹರಿಹರ ರೈಲ್ವೆ ನಿಲ್ದಾಣದ ವ್ಯಾಪ್ತಿಯಲ್ಲಿ ಹಳಿತಪ್ಪಿ ಮಗುಚಿ ಬಿದ್ದಿರುವ ಸನ್ನಿವೇಶ, ತಕ್ಷಣವೇ ರೈಲ್ವೆ ಅಧಿಕಾರಿಗಳು ನಿಗದಿತ ಮಾರ್ಗಸೂಚಿಗಳ ಪ್ರಕಾರ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನೋಡುಗರ ಗಮನ ಸೆಳೆಯಿತು.

ಎನ್‌ಡಿಆರ್‌ಎಫ್ ತಂಡವು ಅಸಿಸ್ಟೆಂಟ್ ಕಮಾಂಡೆಂಟ್ ಸೆಂಥಿಲ್ ಕುಮಾರ್ ನೇತೃತ್ವದಲ್ಲಿ ಇಪ್ಪತ್ತಮೂರು ಸಿಬ್ಬಂದಿ ಹಾಗೂ ಎಸ್.ಎನ್.ಕಿರಣ್ ಕುಮಾರ್ ನೇತೃತ್ವದ ಎಸ್‌ಡಿಆರ್‌ಎಫ್ ತಂಡ ಮತ್ತು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸೋಮಶೇಖರ್ ಅವರ ನೇತೃತ್ವದ ಜಿಲ್ಲಾ ಅಗ್ನಿಶಾಮಕ ದಳದ ತಂಡ 20 ನಿಮಿಷಗಳಲ್ಲಿ ಸ್ಥಳಕ್ಕೆ ತಲುಪಿದವು. ರೈಲ್ವೆ ಆಸ್ಪತ್ರೆಯ ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿ ಸ್ಥಳದಲ್ಲಿಯೆ ಪ್ರಥಮ ಚಿಕಿತ್ಸೆ ನೀಡಿ ಎರಡು ಬೋಗಿಗಳಲ್ಲಿ ಸಿಲುಕಿಗೊಂಡಿದ್ದ ಸುಮಾರು 22 ಪ್ರಯಾಣಿಕರನ್ನು ಆಂಬ್ಯುಲೆನ್ಸ್‌ ನೊಳಗೆ ಕರೆದುಕೊಳ್ಳಲು ಸಹಕರಿಸಿದ ಅಣಕು ಪ್ರದರ್ಶನ ಯಶಸ್ವಿಯಾಯಿತು.

ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶಿಲ್ಪಿ ಅಗರ್ವಾಲ್ ಮಾತನಾಡಿ, ಇಂತಹ ನಿಯತಕಾಲಿಕ ಕಸರತ್ತಿನ ಮಹತ್ವವನ್ನು ವಿವರಿಸಿದರು. ಮಾನವ ಅಂಶದಿಂದ ಉಂಟಾಗುವ ವಿಪತ್ತುಗಳನ್ನು ತಡೆಗಟ್ಟುವಲ್ಲಿ ಸರಿಯಾದ ವಿಧಾನಗಳನ್ನು ತೋರಿಸುತ್ತವೆ. ಅಮೂಲ್ಯವಾದ ಮಾನವ ಜೀವಗಳ ನಷ್ಟವನ್ನು ತಪ್ಪಿಸಲು ಅತ್ಯಂತ ಮಹತ್ವದ್ದಾಗಿದೆ ಎಂದರು. ರಕ್ಷಣಾ ತಂಡಗಳಲ್ಲದೆ ಆಂಬ್ಯುಲೆನ್ಸ್‌ಗಳೊಂದಿಗೆ ವೈದ್ಯಕೀಯ ವಿಭಾಗದ ಸಿಬ್ಬಂದಿಗಳು, ರೈಲ್ವೆ ರಕ್ಷಣಾ ಪಡೆ, ಅಗ್ನಿಶಾಮಕ ದಳ, ನಾಗರಿಕ ಆಡಳಿತದ ಪ್ರತಿನಿಧಿಗಳು, ಸರ್ಕಾರಿ ರೈಲ್ವೆ ಪೊಲೀಸ್ ಮತ್ತು ಸಿವಿಲ್ ಪೊಲೀಸರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

lokesh

Recent Posts

ಕೊಡಗು ಜಿಲ್ಲೆಯತ್ತ ಪ್ರವಾಸಿಗರ ದಂಡು..!

ಪುನೀತ್ ಮಡಿಕೇರಿ ಹೊಸ ವರ್ಷಾಚರಣೆಗೆ ಕೊಡಗಿನತ್ತ ಮುಖ ಮಾಡಿದ ಜನರು; ಜಿಲ್ಲೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಮಡಿಕೇರಿ: ಹೊಸ ವರ್ಷವನ್ನು…

3 mins ago

ರಾಷ್ಟ್ರ, ರಾಜ್ಯ ರಾಜಕಾರಣದ ರಂಗು

೨೦೨೫ರ ಅವಧಿಯಲ್ಲಿ ರಾಜಕೀಯವಾಗಿ ಗಂಭೀರ ವಿಪ್ಲವಗಳನ್ನು ಕಾಣದೆ ಹೋದರೂ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಂದಷ್ಟು ಬದಲಾವಣೆಗಳು ನಡೆದಿರುವುದು…

8 mins ago

ಅವಧಿಗೂ ಮುನ್ನ ಶಾಲೆಗೆ ಬೀಗ; ಕಲಿಕೆಗೆ ಹಿನ್ನಡೆ

ಶಾಲೆಗೆ ಬೀಗ ಹಾಕಿರುವುದನ್ನು ಫೋಟೊ ತೆಗೆದು ಸಾಬೀತುಪಡಿಸಿದ ಕರವೇ; ಶಿಕ್ಷಕರ ವಿರುದ್ಧ ಆಕ್ರೋಶ  ಹನೂರು: ಹನೂರು ಶೈಕ್ಷಣಿಕ ವಲಯದ ಕೆಲವೆಡೆ…

18 mins ago

2026ರ ಸ್ವಾಗತಕ್ಕೆ ತಾಣಗಳೆಡೆಗೆ ಪ್ರವಾಸಿಗರ ಲಗ್ಗೆ

ಚಾಮರಾಜನಗರ: ಹೊಸ ವರ್ಷ-೨೦೨೬ರ ಸ್ವಾಗತಕ್ಕೆ ಜಿಲ್ಲೆಯ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ನಾನಾ ಕಡೆಯಿಂದ ಧಾವಿಸುವ ಪ್ರವಾಸಿಗರು ಅದಾಗಲೇ ವಸತಿ…

22 mins ago

ಮೈಸೂರು ನಗರ ಸಾರಿಗೆ: ಹಳೆ ಬಸ್‌ಗಳಿಗೆ ಹೊಸ ರೂಪ?

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ನಗರದಲ್ಲಿ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವ ಸಾರ್ವಜನಿಕರ ಸಂಖ್ಯೆ ಹೆಚ್ಚಾಗಿದೆ. ನಗರ ಸಾರಿಗೆಗೆ ಪ್ರಸಕ್ತ ವರ್ಷ ೯೬…

28 mins ago