ಮೈಸೂರು

ಹಳಿ ತಪ್ಪಿದ ರೈಲು : ಯಶಸ್ವಿ ಅಣಕು ಪ್ರದರ್ಶನ

ಹರಿಹರ : ಅರಸಿಕೆರೆಯಿಂದ ಹಾವೇರಿಗೆ ಹೋಗುತ್ತಿದ್ದ ವಿಶೇಷ ರೈಲಿನ ಎರಡು ಸಾಮಾನ್ಯ ದರ್ಜೆಯ ಪ್ಯಾಸೆಂಜರ್ ಬೋಗಿಗಳು ಹರಿಹರ ರೈಲ್ವೆ ನಿಲ್ದಾಣದ ವ್ಯಾಪ್ತಿಯಲ್ಲಿ ಹಳಿತಪ್ಪಿ ಮಗುಚಿ ಬಿದ್ದಿರುವ ಸನ್ನಿವೇಶ, ತಕ್ಷಣವೇ ರೈಲ್ವೆ ಅಧಿಕಾರಿಗಳು ನಿಗದಿತ ಮಾರ್ಗಸೂಚಿಗಳ ಪ್ರಕಾರ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನೋಡುಗರ ಗಮನ ಸೆಳೆಯಿತು.

ಎನ್‌ಡಿಆರ್‌ಎಫ್ ತಂಡವು ಅಸಿಸ್ಟೆಂಟ್ ಕಮಾಂಡೆಂಟ್ ಸೆಂಥಿಲ್ ಕುಮಾರ್ ನೇತೃತ್ವದಲ್ಲಿ ಇಪ್ಪತ್ತಮೂರು ಸಿಬ್ಬಂದಿ ಹಾಗೂ ಎಸ್.ಎನ್.ಕಿರಣ್ ಕುಮಾರ್ ನೇತೃತ್ವದ ಎಸ್‌ಡಿಆರ್‌ಎಫ್ ತಂಡ ಮತ್ತು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸೋಮಶೇಖರ್ ಅವರ ನೇತೃತ್ವದ ಜಿಲ್ಲಾ ಅಗ್ನಿಶಾಮಕ ದಳದ ತಂಡ 20 ನಿಮಿಷಗಳಲ್ಲಿ ಸ್ಥಳಕ್ಕೆ ತಲುಪಿದವು. ರೈಲ್ವೆ ಆಸ್ಪತ್ರೆಯ ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿ ಸ್ಥಳದಲ್ಲಿಯೆ ಪ್ರಥಮ ಚಿಕಿತ್ಸೆ ನೀಡಿ ಎರಡು ಬೋಗಿಗಳಲ್ಲಿ ಸಿಲುಕಿಗೊಂಡಿದ್ದ ಸುಮಾರು 22 ಪ್ರಯಾಣಿಕರನ್ನು ಆಂಬ್ಯುಲೆನ್ಸ್‌ ನೊಳಗೆ ಕರೆದುಕೊಳ್ಳಲು ಸಹಕರಿಸಿದ ಅಣಕು ಪ್ರದರ್ಶನ ಯಶಸ್ವಿಯಾಯಿತು.

ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶಿಲ್ಪಿ ಅಗರ್ವಾಲ್ ಮಾತನಾಡಿ, ಇಂತಹ ನಿಯತಕಾಲಿಕ ಕಸರತ್ತಿನ ಮಹತ್ವವನ್ನು ವಿವರಿಸಿದರು. ಮಾನವ ಅಂಶದಿಂದ ಉಂಟಾಗುವ ವಿಪತ್ತುಗಳನ್ನು ತಡೆಗಟ್ಟುವಲ್ಲಿ ಸರಿಯಾದ ವಿಧಾನಗಳನ್ನು ತೋರಿಸುತ್ತವೆ. ಅಮೂಲ್ಯವಾದ ಮಾನವ ಜೀವಗಳ ನಷ್ಟವನ್ನು ತಪ್ಪಿಸಲು ಅತ್ಯಂತ ಮಹತ್ವದ್ದಾಗಿದೆ ಎಂದರು. ರಕ್ಷಣಾ ತಂಡಗಳಲ್ಲದೆ ಆಂಬ್ಯುಲೆನ್ಸ್‌ಗಳೊಂದಿಗೆ ವೈದ್ಯಕೀಯ ವಿಭಾಗದ ಸಿಬ್ಬಂದಿಗಳು, ರೈಲ್ವೆ ರಕ್ಷಣಾ ಪಡೆ, ಅಗ್ನಿಶಾಮಕ ದಳ, ನಾಗರಿಕ ಆಡಳಿತದ ಪ್ರತಿನಿಧಿಗಳು, ಸರ್ಕಾರಿ ರೈಲ್ವೆ ಪೊಲೀಸ್ ಮತ್ತು ಸಿವಿಲ್ ಪೊಲೀಸರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

lokesh

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

8 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

8 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

8 hours ago