ಹುಣಸೂರು: ಮಂಗಳಮುಖಿಯೋರ್ವರು ಟಾರ್ಚರ್ ನೀಡುತ್ತಾ ಇದ್ದರು ಎಂಬ ಆರೋಪದ ಮೇರೆಗೆ ಅಪ್ರಾಪ್ತ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.
17 ವರ್ಷದ ರಾಹುಲ್ ಮೌರ್ಯ ಎಂಬಾತನೇ ಆತ್ಮಹತ್ಯೆಗೆ ಶರಣಾದ ಬಾಲಕನಾಗಿದ್ದಾನೆ. ಕಳೆದ ಒಂದು ವರ್ಷದಿಂದಲೂ ಮಂಗಳಮುಖಿ ಜೊತೆ ಫೋನ್ನಲ್ಲಿ ಮಾತನಾಡುತ್ತಿದ್ದ ಮೌರ್ಯ, ಕಳೆದ ನಾಲ್ಕು ತಿಂಗಳಿನಿಂದ ಇದ್ದಕ್ಕಿದ್ದಂತೆ ಮನೆಯಿಂದ ನಾಪತ್ತೆಯಾಗಿದ್ದನು.
ಪೋಷಕರು ನನ್ನ ಮಗ ಕಾಣೆಯಾಗಿದ್ದಾನೆ ಎಂದು ಭಾವಿಸಿ ಎಲ್ಲಾ ಕಡೆ ಹುಡುಕಿದ್ದರು. ಆದರೆ ಆತ ಯಾರ ಕಣ್ಣಿಗೂ ಬಿದ್ದಿರಲಿಲ್ಲ. ಬಳಿಕ ಇದೇ ಜೂನ್.23ರಂದು ಮನೆಗೆ ವಾಪಸ್ಸು ಬಂದ ಮೌರ್ಯ ಪೋಷಕರೊಂದಿಗೆ ಗಲಾಟೆ ಮಾಡಿದ್ದನು.
ಬಳಿಕ ಮನನೊಂದು ಮೌರ್ಯ ಆತ್ಮಹತ್ಯೆಗೆ ಶರಣಾಗಿದ್ದು, ಮೃತನ ಪೋಷಕರು ಮಂಗಳಮುಖಿಯ ಮೇಲೆ ಆರೋಪ ಮಾಡಿದ್ದಾರೆ. ನನ್ನ ಮಗ ಯಾವುದೇ ಕಾರಣಕ್ಕೂ ಈ ರೀತಿ ಆತ್ಮಹತ್ಯೆಗೆ ಶರಣಾಗುವವನಲ್ಲ. ಮಂಗಳಮುಖಿ ನನ್ನ ಮಗನ ತಲೆಕೆಡಿಸಿದ್ದಾಳೆ ಎಂದು ಆರೋಪಿಸಿದ್ದಾರೆ. ಸದ್ಯ ಪ್ರಕರಣ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…