ಮೈಸೂರು

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ ಪುಷ್ಪ ಅಮರನಾಥ್ ಅವರು ಮೈಸೂರು ಕೇಂದ್ರಿಯ ಬಸ್ ನಿಲ್ದಾಣದಿಂದ ಮಂಡ್ಯವರೆಗೂ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸಿದರು.

ಈ ವೇಳೆ ಶಕ್ತಿ ಯೋಜನೆಯಲ್ಲಿ ಉಚಿತ ಪ್ರಯಾಣಕ್ಕೆ ಆಗಮಿಸಿದ ಮಹಿಳಾ ಪ್ರಯಾಣಿಕರಿಗೆ ಸಿಹಿ ವಿತರಣೆ ಮಾಡಿದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಕಾಂಗ್ರೆಸ್ ಶಕ್ತಿ ಯೋಜನೆಯ ಮೂಲಕ ಬಸ್ ನಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣ ಮಾಡುವ ಅನುಕೂಲ ಮಾಡಿದೆ. ಮಹಿಳೆಯಾಗಿ ನಾನು ಕೂಡ ಶಕ್ತಿ ಯೋಜನೆಯನ್ನ ಅಭಿನಂದಿಸುತ್ತೇನೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ನುಡಿದಂತೆ ನೆಡೆದಿದೆ, ನಡೆಯುತ್ತಿದೆ ಎಂದು ಹೇಳಿದರು.

ಮಹಿಳೆಯರ ಬಳಿಗೆ ತೆರಳಿ ನಾನು ಅಭಿಪ್ರಾಯ ಸಂಗ್ರಹಿಸಿದ್ದೇನೆ. ಎಲ್ಲಾ ಮಹಿಳೆಯರು ಖುಷಿಯಿಂದ ಶಕ್ತಿ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಮಹಿಳೆಯರು ತವರು ಮನೆ ಸೇರಿದಂತೆ ಬೇರೆ ಬೇರೆ ಕಡೆ ಪ್ರಯಾಣ ಮಾಡುತ್ತಿದ್ದಾರೆ. ಬಡವರು ಮತ್ತು ಶ್ರೀಮಂತರು ಎಲ್ಲರಿಗೂ ಈ ಯೋಜನೆ ಒಂದು ಶಕ್ತಿಯಾಗಿದೆ. ಸಿದ್ದರಾಮಯ್ಯ ರವರ ಸರಕಾರವನ್ನ ಮಹಿಳೆಯರು ಹಾರೈಸುತ್ತಿದ್ದಾರೆ ಎಂದರು.

ಗ್ಯಾರಂಟಿ ನಿಲ್ಲಲ್ಲ
ನಾನು ಗ್ಯಾರಂಟಿ ಅನುಷ್ಠಾನ ಉಪಾಧ್ಯಕ್ಷೆಯಾಗಿ ಖುದ್ದು ಫಲಾನುವಿಗಳ ಅಭಿಪ್ರಾಯ ಸಂಗ್ರಹಿಸಲು ಮೈಸೂರಿನಿಂದ ಮಂಡ್ಯಕ್ಕೆ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದೇನೆ. ಮುಂದಿನ ದಿನ ಗಳಲ್ಲಿ ಮತ್ತಷ್ಟು ಬಸ್ ಗಳ ವ್ಯವಸ್ಥೆ ಮಾಡಲಾಗುತ್ತದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲೋದಿಲ್ಲ ಇದು ಜನರಿಗಾಗಿ ಮಾಡಿರುವುದು ಮುಂದುವರೆಯುತ್ತದೆ ಎಂದರು.

ಗೃಹಲಕ್ಷ್ಮಿ ಯೋಜನೆಯಲ್ಲಿ ಕೆಲ ತಾಂತ್ರಿಕ ಸಮಸ್ಯೆ ಉಂಟಾಗಿತ್ತು ಆಗಾಗಿ ಎರಡು ತಿಂಗಳ ಹಣ ಹಾಕಲು ಸಾಧ್ಯವಾಗಿಲ್ಲ. ಸ್ವತಃ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಭರವಸೆ ನೀಡಿದ್ದಾರೆ ಕೆಲವೇ ದಿನಗಳಲ್ಲಿ ಬಾಕಿ ಹಣವನ್ನ ಕೂಡ ಜಮಾ ಮಾಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಅಧಿಕಾರಿಗಳಾದ ದಿನೇಶ್ DTO ಕೆ ಎಸ್ ಆರ್ ಟಿ ಸಿ ಮತ್ತು ಕಲಾಶ್ರೀ ಅಸಿಸ್ಟೆಂಟ್ ಟ್ರಾಫಿಕ್ ಮ್ಯಾನೇಜರ್ ATM ಕೆ ಎಸ್ ಆರ್ ಟಿ ಸಿ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

20 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

20 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

23 hours ago