ಮೈಸೂರು

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ ಪುಷ್ಪ ಅಮರನಾಥ್ ಅವರು ಮೈಸೂರು ಕೇಂದ್ರಿಯ ಬಸ್ ನಿಲ್ದಾಣದಿಂದ ಮಂಡ್ಯವರೆಗೂ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸಿದರು.

ಈ ವೇಳೆ ಶಕ್ತಿ ಯೋಜನೆಯಲ್ಲಿ ಉಚಿತ ಪ್ರಯಾಣಕ್ಕೆ ಆಗಮಿಸಿದ ಮಹಿಳಾ ಪ್ರಯಾಣಿಕರಿಗೆ ಸಿಹಿ ವಿತರಣೆ ಮಾಡಿದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಕಾಂಗ್ರೆಸ್ ಶಕ್ತಿ ಯೋಜನೆಯ ಮೂಲಕ ಬಸ್ ನಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣ ಮಾಡುವ ಅನುಕೂಲ ಮಾಡಿದೆ. ಮಹಿಳೆಯಾಗಿ ನಾನು ಕೂಡ ಶಕ್ತಿ ಯೋಜನೆಯನ್ನ ಅಭಿನಂದಿಸುತ್ತೇನೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ನುಡಿದಂತೆ ನೆಡೆದಿದೆ, ನಡೆಯುತ್ತಿದೆ ಎಂದು ಹೇಳಿದರು.

ಮಹಿಳೆಯರ ಬಳಿಗೆ ತೆರಳಿ ನಾನು ಅಭಿಪ್ರಾಯ ಸಂಗ್ರಹಿಸಿದ್ದೇನೆ. ಎಲ್ಲಾ ಮಹಿಳೆಯರು ಖುಷಿಯಿಂದ ಶಕ್ತಿ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಮಹಿಳೆಯರು ತವರು ಮನೆ ಸೇರಿದಂತೆ ಬೇರೆ ಬೇರೆ ಕಡೆ ಪ್ರಯಾಣ ಮಾಡುತ್ತಿದ್ದಾರೆ. ಬಡವರು ಮತ್ತು ಶ್ರೀಮಂತರು ಎಲ್ಲರಿಗೂ ಈ ಯೋಜನೆ ಒಂದು ಶಕ್ತಿಯಾಗಿದೆ. ಸಿದ್ದರಾಮಯ್ಯ ರವರ ಸರಕಾರವನ್ನ ಮಹಿಳೆಯರು ಹಾರೈಸುತ್ತಿದ್ದಾರೆ ಎಂದರು.

ಗ್ಯಾರಂಟಿ ನಿಲ್ಲಲ್ಲ
ನಾನು ಗ್ಯಾರಂಟಿ ಅನುಷ್ಠಾನ ಉಪಾಧ್ಯಕ್ಷೆಯಾಗಿ ಖುದ್ದು ಫಲಾನುವಿಗಳ ಅಭಿಪ್ರಾಯ ಸಂಗ್ರಹಿಸಲು ಮೈಸೂರಿನಿಂದ ಮಂಡ್ಯಕ್ಕೆ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದೇನೆ. ಮುಂದಿನ ದಿನ ಗಳಲ್ಲಿ ಮತ್ತಷ್ಟು ಬಸ್ ಗಳ ವ್ಯವಸ್ಥೆ ಮಾಡಲಾಗುತ್ತದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲೋದಿಲ್ಲ ಇದು ಜನರಿಗಾಗಿ ಮಾಡಿರುವುದು ಮುಂದುವರೆಯುತ್ತದೆ ಎಂದರು.

ಗೃಹಲಕ್ಷ್ಮಿ ಯೋಜನೆಯಲ್ಲಿ ಕೆಲ ತಾಂತ್ರಿಕ ಸಮಸ್ಯೆ ಉಂಟಾಗಿತ್ತು ಆಗಾಗಿ ಎರಡು ತಿಂಗಳ ಹಣ ಹಾಕಲು ಸಾಧ್ಯವಾಗಿಲ್ಲ. ಸ್ವತಃ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಭರವಸೆ ನೀಡಿದ್ದಾರೆ ಕೆಲವೇ ದಿನಗಳಲ್ಲಿ ಬಾಕಿ ಹಣವನ್ನ ಕೂಡ ಜಮಾ ಮಾಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಅಧಿಕಾರಿಗಳಾದ ದಿನೇಶ್ DTO ಕೆ ಎಸ್ ಆರ್ ಟಿ ಸಿ ಮತ್ತು ಕಲಾಶ್ರೀ ಅಸಿಸ್ಟೆಂಟ್ ಟ್ರಾಫಿಕ್ ಮ್ಯಾನೇಜರ್ ATM ಕೆ ಎಸ್ ಆರ್ ಟಿ ಸಿ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

54 mins ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

1 hour ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

2 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

6 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

6 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

7 hours ago