ಮೈಸೂರು

ರಾಹುಲ್ ಗಾಂಧಿ ಮನವಿ ಮಾಡಿದ್ದ ಗಾಯಾಳು ಆನೆ ಮರಿ ಚೇತರಿಕೆ

ಮೈಸೂರು: ಇತ್ತೀಚೆಗೆ ಗಾಯಗೊಂಡಿದ್ದ ನಾಗರಹೊಳೆಯ ಆನೆಮರಿಗೆ ಚಿಕಿತ್ಸೆ ನೀಡಲಾಗಿದ್ದು, ಮರಿಯು ಚೇತರಿಕೆ ಕಂಡುಕೊಂಡಿದೆ. ತನ್ನ ತಾಯಿಯೊಂದಿಗೆ ಸುರಕ್ಷಿತವಾಗಿದೆ ಎಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಹರ್ಷ ಚಿಕ್ಕನರಗುಂದ ತಿಳಿಸಿದ್ದಾರೆ.

ರಾಹುಲ್‌ ಅ. 5ರಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿದ್ದ ಸಮಯದಲ್ಲಿಗಾಯಗೊಂಡ ಆನೆ ಮರಿಯೊಂದು ತನ್ನ ತಾಯಿಯೊಂದಿಗೆ ಕರುಣಾಜನಕ ಸ್ಥಿತಿಯಲ್ಲಿಸಂಚರಿಸುವುದನ್ನು ಗಮನಿಸಿದ್ದರು. ಆನೆ ಮರಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು.

ಅಂತರಸಂತೆ ವನ್ಯ ಜೀವಿ ವಲಯದ ಬಿಸಿಲವಾಡಿ ಕೆರೆ ಬಳಿ ಡಾ. ಪ್ರಸನ್ನ ಡಾ ವಾಸಿಮ್ ಮತ್ತು ಇಲಾಖೆಯ ಸಿಬ್ಬಂದಿ ಆನೆ ಮರಿಗೆ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಮರಿಯಾನೆ ಸುಮಾರು 1 ತಿಂಗಳ ಗಂಡು ಮರಿಯಾಗಿದ್ದು ಆನೆ ಸೊಂಡಿಲು, ಬೆನ್ನು ಹಾಗೂ ಬಾಲದಲ್ಲಿ ಗಾಯವಾಗಿತ್ತು. ಕಾಡು ನಾಯಿ ದಾಳಿ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ದಾಳಿ ವೇಳೆ ತಾಯಿ ಆನೆ ನಾಯಿಯನ್ನ ಓಡಿಸಿದೆ ಅಂತ ಅರಣ್ಯ ಇಲಾಖೆ ಅಧಿಕಾರಿಗಳು ಅಂದಾಜಿಸಿದ್ದಾರೆ.

.

andolana

Recent Posts

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

3 mins ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

9 mins ago

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

14 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

14 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

15 hours ago