ಮೈಸೂರು

ರಾಹುಲ್ ಗಾಂಧಿ ಮನವಿ ಮಾಡಿದ್ದ ಗಾಯಾಳು ಆನೆ ಮರಿ ಚೇತರಿಕೆ

ಮೈಸೂರು: ಇತ್ತೀಚೆಗೆ ಗಾಯಗೊಂಡಿದ್ದ ನಾಗರಹೊಳೆಯ ಆನೆಮರಿಗೆ ಚಿಕಿತ್ಸೆ ನೀಡಲಾಗಿದ್ದು, ಮರಿಯು ಚೇತರಿಕೆ ಕಂಡುಕೊಂಡಿದೆ. ತನ್ನ ತಾಯಿಯೊಂದಿಗೆ ಸುರಕ್ಷಿತವಾಗಿದೆ ಎಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಹರ್ಷ ಚಿಕ್ಕನರಗುಂದ ತಿಳಿಸಿದ್ದಾರೆ.

ರಾಹುಲ್‌ ಅ. 5ರಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿದ್ದ ಸಮಯದಲ್ಲಿಗಾಯಗೊಂಡ ಆನೆ ಮರಿಯೊಂದು ತನ್ನ ತಾಯಿಯೊಂದಿಗೆ ಕರುಣಾಜನಕ ಸ್ಥಿತಿಯಲ್ಲಿಸಂಚರಿಸುವುದನ್ನು ಗಮನಿಸಿದ್ದರು. ಆನೆ ಮರಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು.

ಅಂತರಸಂತೆ ವನ್ಯ ಜೀವಿ ವಲಯದ ಬಿಸಿಲವಾಡಿ ಕೆರೆ ಬಳಿ ಡಾ. ಪ್ರಸನ್ನ ಡಾ ವಾಸಿಮ್ ಮತ್ತು ಇಲಾಖೆಯ ಸಿಬ್ಬಂದಿ ಆನೆ ಮರಿಗೆ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಮರಿಯಾನೆ ಸುಮಾರು 1 ತಿಂಗಳ ಗಂಡು ಮರಿಯಾಗಿದ್ದು ಆನೆ ಸೊಂಡಿಲು, ಬೆನ್ನು ಹಾಗೂ ಬಾಲದಲ್ಲಿ ಗಾಯವಾಗಿತ್ತು. ಕಾಡು ನಾಯಿ ದಾಳಿ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ದಾಳಿ ವೇಳೆ ತಾಯಿ ಆನೆ ನಾಯಿಯನ್ನ ಓಡಿಸಿದೆ ಅಂತ ಅರಣ್ಯ ಇಲಾಖೆ ಅಧಿಕಾರಿಗಳು ಅಂದಾಜಿಸಿದ್ದಾರೆ.

.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago