ನಂಜನಗೂಡು: ಗುರುವಾರ(ಮೇ.9) ತಡರಾತ್ರಿ ಸುರಿದ ಬಿರುಗಾಳಿ ಮಳೆಗೆ ಬೃಹತ್ ಗಾತ್ರದ ಅರಳಿಮರ ಉರುಳಿ ಬಿದ್ದು ನಾಲ್ಕು ಮನೆಗಳಿಗೆ ಹಾನಿಯಾದ ಘಟನೆ ನಗರ್ಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವನಪುರದಲ್ಲಿ ನಡೆದಿದೆ.
ಗ್ರಾಮದ ಸಿದ್ದರಾಜು, ಮೂಗಯ್ಯ, ಮಲ್ಲೇಶ್, ಚೆನ್ನೇಗೌಡ ಎಂಬುವವರ ಮನೆಗಳ ಮೇಲೆ ಮರ ಉರುಳಿ ಬಿದ್ದಿದ್ದು, ಕೊಟ್ಟಿಗೆಯಲ್ಲಿದ್ದ ಹಸುಗಳನ್ನು ಸ್ಥಳಾಂತರ ಮಾಡಿದ್ದರಿಂದ ಹಸುಗಳು ಪ್ರಾಣಪಾಯದಿಂದ ಪಾರಾಗಿವೆ. ಮಳೆಯ ರಭಸಕ್ಕೆ ವಿದ್ಯುತ್ ಕಂಬಗಳು ಸಹ ಧರೆಗುರಿಳಿದೆ. ಸೆಸ್ಕ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿದರು.
ಬಿರುಗಾಳಿ ಮಳೆಯಿಂದ ಮರ ಹಾಗೂ ವಿದ್ಯುತ್ ಕಂಬಗಳು ಬಿದ್ದು ಭಾಗಶಃ ಹಾನಿಯಾಗಿದ್ದು, ಸರ್ಕಾರದಿಂದ ಮಳೆ ಹಾನಿ ಪರಿಹಾರ ನೀಡಬೇಕು ಎಂದು ಗ್ರಾಮದ ಮುಖಂಡ ಸಣ್ಣೇಗೌಡ ಮನವಿ ಮಾಡಿದ್ದಾರೆ.
ಮಹಾದೇಶ್ ಎಂ.ಗೌಡ ಹನೂರು ತಾಲ್ಲೂಕಿನ ಜನತೆಯ ಬಹು ದಿನಗಳ ಕನಸು ಈಡೇರುವ ನಿರೀಕ್ಷೆ ಹನೂರು : ತಾಲ್ಲೂಕು ಕೇಂದ್ರ ಸ್ಥಾನದಲ್ಲಿ…
ಹೇಮಂತ್ಕುಮಾರ್ ಮಂಡ್ಯ: ನಗರದಲ್ಲಿ ಕಳೆದ ಒಂದು ವಾರದಿಂದ ಸದ್ದಿಲ್ಲದೇ ಆರಂಭಗೊಂಡಿರುವ ಸ್ವಚ್ಛ ಸರ್ವೇಕ್ಷಣೆ ಅಭಿಯಾನವು ಸ್ವಚ್ಛ ಮಂಡ್ಯ ಗುರಿಯನ್ನಿಟ್ಟುಕೊಂಡು ಸಾಗಿರುವುದು…
ಎಸ್.ಎಸ್.ಭಟ್ ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ನಿಲ್ಲಿಸುವ ವಾಹನಗಳ ಚಾಲಕರಿಂದ ಹಗಲು ದರೋಡೆ ನಂಜನಗೂಡು: ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ನಿಲ್ಲಿಸಲಾಗುವ ವಾಹನಗಳ…
ದಿನೇಶ್ ಬಸವಾಪಟ್ಟಣ ಜೊಹಾನ್ಸ್ ಬರ್ಗ್ನ ನಗರ ಪ್ರದಕ್ಷಿಣೆ ಸಮಯದಲ್ಲಿ ನಮ್ಮ ಮಾರ್ಗದರ್ಶಿ ಬಿಲ್ಲಿ, ದಕ್ಷಿಣ ಆಫ್ರಿಕನ್ನರಿಗೆ ಬಹಳ ಅತ್ಯಮೂಲ್ಯ ಅಕ…
ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…