ನಂಜನಗೂಡು: ಗುರುವಾರ(ಮೇ.9) ತಡರಾತ್ರಿ ಸುರಿದ ಬಿರುಗಾಳಿ ಮಳೆಗೆ ಬೃಹತ್ ಗಾತ್ರದ ಅರಳಿಮರ ಉರುಳಿ ಬಿದ್ದು ನಾಲ್ಕು ಮನೆಗಳಿಗೆ ಹಾನಿಯಾದ ಘಟನೆ ನಗರ್ಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವನಪುರದಲ್ಲಿ ನಡೆದಿದೆ.
ಗ್ರಾಮದ ಸಿದ್ದರಾಜು, ಮೂಗಯ್ಯ, ಮಲ್ಲೇಶ್, ಚೆನ್ನೇಗೌಡ ಎಂಬುವವರ ಮನೆಗಳ ಮೇಲೆ ಮರ ಉರುಳಿ ಬಿದ್ದಿದ್ದು, ಕೊಟ್ಟಿಗೆಯಲ್ಲಿದ್ದ ಹಸುಗಳನ್ನು ಸ್ಥಳಾಂತರ ಮಾಡಿದ್ದರಿಂದ ಹಸುಗಳು ಪ್ರಾಣಪಾಯದಿಂದ ಪಾರಾಗಿವೆ. ಮಳೆಯ ರಭಸಕ್ಕೆ ವಿದ್ಯುತ್ ಕಂಬಗಳು ಸಹ ಧರೆಗುರಿಳಿದೆ. ಸೆಸ್ಕ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿದರು.
ಬಿರುಗಾಳಿ ಮಳೆಯಿಂದ ಮರ ಹಾಗೂ ವಿದ್ಯುತ್ ಕಂಬಗಳು ಬಿದ್ದು ಭಾಗಶಃ ಹಾನಿಯಾಗಿದ್ದು, ಸರ್ಕಾರದಿಂದ ಮಳೆ ಹಾನಿ ಪರಿಹಾರ ನೀಡಬೇಕು ಎಂದು ಗ್ರಾಮದ ಮುಖಂಡ ಸಣ್ಣೇಗೌಡ ಮನವಿ ಮಾಡಿದ್ದಾರೆ.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…