ಮೈಸೂರು

ಮರ ಹನನ : ಪರ್ಯಾಯ ಸಸಿ ನೆಟ್ಟಿರುವ ಪುರಾವೆಗೆ ಪರಿಸರವಾದಿಗಳ ಒತ್ತಾಯ

ಮೈಸೂರು : ಬೆಳೆದು ನಿಂತಿದ್ದ 40 ಮರಗಳನ್ನು ಕಳೆದ ಏಪ್ರಿಲ್‌ನಲ್ಲಿ ಕಡಿದು ಹಾಕಿದ್ದ ಹೈದರ್‌ ಆಲಿ ರಸ್ತೆಯಲ್ಲಿ ಗುರುವಾರ ರಸ್ತೆ ಕಾಮಗಾರಿ ಆರಂಭಿಸಲಾಗಿದ್ದು, ಈ ವೇಳೆ ಕಡಿದ ಮರಗಳಿಗೆ ಪರ್ಯಾಯವಾಗಿ ಸಸಿ ನೆಟ್ಟಿರುವ ಪುರಾವೆ ನೀಡುವಂತೆ ಒತ್ತಾಯಿಸಿ, ಪರಿಸರವಾದಿಗಳು ಕೆಲಕಾಲ ಕಾಮಗಾರಿಯನ್ನು ಸ್ಥಗಿತಗೊಳಿಸಿದ ಘಟನೆ ನಡೆಯಿತು.

ಕಳೆದ ಎರಡು ದಿನಗಳಿಂದ ಮೈಸೂರು ನಗರ ಪಾಲಿಕೆ ವತಿಯಿಂದ ರಸ್ತೆ ಅಗಲೀಕರಣ ಕಾರ್ಯವನ್ನು ಆರಂಭಿಸಿದೆ. ಅಲ್ಲಿ ಈಗಾಗಲೇ ರಸ್ತೆಯ ಒಂದು ಬದಿಯಲ್ಲಿ ಅಗೆಯಲಾಗಿದ್ದು, ಜಲ್ಲಿ, ಮಣ್ಣನ್ನು ತಂದು ಹಾಕಲಾಗಿದೆ.
ಈ ವಿಚಾರ ಅರಿತ ಮೈಸೂರು ಗ್ರಹಕರ ಪರಿಷತ್ತಿನ ಕಾರ್ಯಕರ್ತರು ಹಾಗೂ ಅಧ್ಯಕ್ಷ ಡಾ.ಭಾಮಿ ವಿ. ಶೆಣೈ, ರಾಜ್ಯ ಪರಿಸರ ಕ್ರಿಯಾ ಸಮಿತಿ ರಾಜ್ಯಾಧ್ಯಕ್ಷ ಮತ್ತು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ, ಮೈಸೂರು ಜಿಲ್ಲಾ ಪರಿಸರ ಸಮಿತಿ ಅಧ್ಯಕ್ಷ ಪರಶುರಾಮೇಗೌಡ ಮತ್ತು ಇತರರು ಹಸಿರು ಟೋಪಿ ಧರಿಸಿ ದಿಢೀರ್ ಪ್ರತಿಭಟನೆ ನಡೆಸಿದರು.

ಈ ವೇಳೆ ನಗರಪಾಲಿಕೆ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಕಡಿದಿರುವ ಮರಗಳಿಗೆ ಪರ್ಯಾಯವಾಗಿ ಒಂದಕ್ಕೆ ಹತ್ತರಷ್ಟು ಸಸಿಗಳನ್ನು ನೆಟ್ಟಿರುವುದಕ್ಕೆ ಪುರಾವೆಗಳನ್ನು ಒದಗಿಸಿದ ನಂತರವೇ ಕಾಮಗಾರಿಗಳನ್ನು ಪುನರಾರಂಭಿಸಬೇಕೆಂದು ಒತ್ತಾಯಿಸಿದರು.

ಹೈದರ್ ಅಲಿ ರಸ್ತೆಯಲ್ಲಿ ಮತ್ತೆ ಹಸಿರು ಕಾಣಬೇಕು. ರಸ್ತೆ ಅಗಲವಾಗಿರುವುದರಿಂದ ಮತ್ತೆ ರಸ್ತೆ ಅಗಲೀಕರಣ ಕಾಮಗಾರಿ ಬೇಡ. ಕೂಡಲೇ ಕಾಮಗಾರಿಯನ್ನು ನಿಲ್ಲಿಸಿ ಅಲ್ಲಿನ ಎರಡೂ ಬದಿಯಲ್ಲಿ ಸಸಿಗಳನ್ನು ನೆಡುವಂತೆ ಎಂಜಿಪಿ ಸದಸ್ಯರು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ನಗರಪಾಲಿಕೆ ಅಧಿಕಾರಿಗಳು, ಇಲ್ಲಿ ಬಾಕ್ಸ್ ಮಾದರಿಯ ಚರಂಡಿಗಳ ನಿರ್ಮಾಣಕ್ಕಾಗಿ ಭೂಮಿಯನ್ನು ಸಮತಟ್ಟು ಮಾಡುವ ಕೆಲಸವನ್ನು ಪ್ರಾರಂಭಿಸಿದೆ. ನಂತರದ ಹಂತಗಳಲ್ಲಿ, ಎರಡೂ ಬದಿಗಳಲ್ಲಿ ಪಾದಚಾರಿ ಮಾರ್ಗಗಳು, ಬೀದಿ ದೀಪಗಳು ಮತ್ತು ಡಾಂಬರೀಕರಣವನ್ನು ಯೋಜಿಸಲಾಗಿದೆ ಎಂದರು.

ಅಂದಾಜು ವೆಚ್ಚ 4 ಕೋಟಿ ರೂ. ವೆಚ್ಚದಲ್ಲಿ ಕೆಲಸ ಆರಂಭಿಸಲಾಗಿದೆ. ಆರು ತಿಂಗಳುಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಅಷ್ಟರಲ್ಲಿ ರಸ್ತೆಯ ಎರಡೂ ಬದಿ ಹಾಗೂ ಮದ್ಯಭಾಗದಲ್ಲಿ ಒಟ್ಟು 130 ಸಸಿಗಳನ್ನು ನಡೆಲಾಗುವುದು. ಉಳಿದಂತೆ 370 ಗಿಡಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಅವರ ವ್ಯಾಪ್ತಿಯಲ್ಲಿ ನೆಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಅವರ ಮಾತಿಗೆ ಒಪ್ಪದ ಪರಿಸರವಾದಿಗಳು ನೀವು ಸರ್ವೋಚ್ಚ ನ್ಯಾಯಾಲಯದ ನಿಯಮಗಳನ್ನು ಉಲ್ಲಂಘಿಸಿ ರಸ್ತೆ ಕಾಮಗಾರಿಯನ್ನು ನಡೆಸುತ್ತಿದ್ದೀರಿ. ಈ ಸಂಬಂದ ನಾವುಗಳು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮ್ಮೆ ಹೂಡುತ್ತೇವೆ. ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ವಾದಿಸಿದರು. ಪ್ರತಿಭಟನೆಯಲ್ಲಿ ಸಿಂಧುವಳ್ಳಿ ಅಕ್ಬರ್, ಗಂಗಾವತಿ ಮತ್ತು ಇತರ ಕಾರ್ಯಕರ್ತರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ನಿಧನಕ್ಕೆ ಗಣ್ಯಾತಿಗಣ್ಯರ ಸಂತಾಪ

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್‌ ಪವಾರ್‌ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…

19 mins ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ದುರ್ಮರಣ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್‌ ಪವಾರ್‌ ನಿಧನರಾಗಿದ್ದಾರೆ. ಅಜಿತ್‌…

43 mins ago

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ: ಡಿಸಿಎಂ ಅಜಿತ್‌ ಪವಾರ್‌ ಸೇರಿ 5 ಮಂದಿ ದುರ್ಮರಣ

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…

1 hour ago

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

5 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

5 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

5 hours ago