ಮೈಸೂರು : ಭಾರತೀಯ ಜನತಾ ಪಾರ್ಟಿಯ ಮಾತೃ ಪಕ್ಷ ಭಾರತೀಯ ಜನ ಸಂಘದ ಸಂಸ್ಥಾಪಕರಾದ ಡಾ ಶಾಮ್ ಪ್ರಸಾದ್ ಮುಖರ್ಜಿ ರವರ ಪುಣ್ಯ ಸ್ಮರಣೆಯ ಅಂಗವಾಗಿ ಬಿಜೆಪಿ ಕೃಷ್ಣರಾಜ ಕ್ಷೇತ್ರದ ವತಿಯಿಂದ 5 ಜನ ವಿವಿಧ ಕ್ಷೇತ್ರದ ಸಾಧಕರಿಗೆ ಗೌರವ ಸಮರ್ಪಣೆ ಮಾಡಲಾಯಿತು.
ಡಾ.ಶಾಮ ಪ್ರಸಾದ್ ಮುಖರ್ಜಿ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀ ಟಿ.ಎಸ್. ಶ್ರೀವತ್ಸ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಐವರಿಗೆ ಶಾಸಕರು ಸನ್ಮಾನ ಮಾಡಿದರು.
ಕಾರ್ಯಕ್ರಮದಲ್ಲಿ ಕೆ.ಆರ್. ಕ್ಷೇತ್ರದ ಬಿಜೆಪಿ ಅಧ್ಯಕ್ಷ ಯು.ಜಿ. ಗೋಪಾಲ್ ರಾಜ್ ಅರಸ್, ಪ್ರಧಾನ ಕಾರ್ಯದರ್ಶಿಗಳಾದ ಜಯರಾಮ್, ಜಯಶಂಕರ್, ಕಾರ್ಯಕ್ರಮದ ಮುಖ್ಯ ಭಾಷಣಕಾರರಾದ ಪ್ರೊ. ಶಿವಾನಂದ್, ಸನ್ಮಾಮಾನಿತಾರದ, ಡಾ. ಚಂದ್ರಶೇಖರ್, ಯೋಗಾ ಪ್ರಕಾಶ್, ಯೋಗಾ ರಂಗನಾಥ್, ಶಿವಕುಮಾರ್ ಹೆಚ್.ಎನ್, ಕು. ದೀಕ್ಷಿತಾ, ಬಿಜೆಪಿ ಮುಖಂಡರಾದ ಸೋಮಸುಂದರ್, ಯುವಮೋರ್ಚಾ ಅಧ್ಯಕ್ಷ ಕೆ.ಎಂ. ನಿಶಾಂತ್, ಮಾಜಿ ಪಾಲಿಕೆ ಸದಸ್ಯ ಪ್ರಸನ್ನ, ಶೈಲೇಂದ್ರ, ವಿದ್ಯಾ ಅರಸ್, ಶಾರದ ಈಶ್ವರ್, ಸೌಭಾಗ್ಯ ಮೂರ್ತಿ, ಎಸ್.ಸಿ. ಮೋರ್ಚಾ ಅಧ್ಯಕ್ಷ ರವಿ, ಎಸ್.ಟಿ. ಮೊರ್ಚಾ ಅಧ್ಯಕ್ಷ ನಂದೀಶ್, ಉಪಾಧ್ಯಕ್ಷರಾದ ಓಂ ಶ್ರೀನಿವಾಸ್, ಟಿವಿಎಸ್ ನಾಗರಾಜ್, ಮನೋಜ್, ಕಾರ್ಯದರ್ಶಿ ರೇಖಾ, ಕಾವೇರಿ, ಹರ್ಷ, ಪ್ರದೀಪ್, ಕಿಶೋರ್ ಹಾಗು ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.