ಮೈಸೂರು

ವೈದ್ಯ ಡಾ.ವಿ.ಲಕ್ಷ್ಮೀನಾರಾಯಣ ಅವರ ನುಡಿ ನಮನ

ಮೈಸೂರು: ರಾಮಕೃಷ್ಣನಗರದ ನೃಪತುಂಗ ಶಾಲೆಯ ಆವರಣದಲ್ಲಿರುವ ರಮಾಗೋವಿಂದ ರಂಗಮಂದಿರದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಮೇ.೨ ರಂದು ಸಂಜೆ ೪.೩೦ಕ್ಕೆಇತ್ತೀಚೆಗೆ ನಿಧನರಾದ ವೈದ್ಯ ಡಾ.ವಿ.ಲಕ್ಷ್ಮೀನಾರಾಯಣ ಅವರ ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪ್ರಗತಿಪರ ಚಿಂತಕ ಪ್ರೊ.ಕಾಳಚನ್ನೇಗೌಡ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಯುಸಿಎಲ್, ಸಿಪಿಐ ಎಂಎಲ್ ಲಿಬರೇಷನ್, ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ಸಮತಾ ವೇದಿಕೆ, ಸಮತಾ ಅಧ್ಯಯನ ಕೇಂದ್ರ, ಆರ್‌ಎಲ್‌ಎಚ್‌ಪಿ, ಧ್ವನಿ ಮಹಿಳಾ ಒಕ್ಕೂಟ, ಎಐಎಂಎಂಎಸ್, ದಲಿತ-ಅಲ್ಪಸಂಖ್ಯಾತ ಸಂಘಟನೆಗಳು, ಸಿಪಿಐ, ಸಿಪಿಎಂ, ಎಸ್‌ಯುಸಿಐ, ಎಐಟಿಯುಸಿ, ಸಿಐಟಿಯು, ಎಐಯುಟಿಯುಸಿ, ಎಐಸಿಸಿಟಿಯು, ಐಎನ್‌ಟಿಯುಸಿ, ಪ್ರಗತಿಪರ ಸಂಘಟನೆಗಳ ಒಕ್ಕೂಟ, ಜನಾಂದೋಲನಗಳ ಮಹಾಮೈತ್ರಿ, ಬುದ್ಧ ಧಮ್ಮ ಸಮಿತಿ, ನೆಲೆ ಹಿನ್ನೆಲೆ, ನಿರಂತರ, ದೇಸಿ ರಂಗ, ಒಡನಾಡಿ, ಜನಮನ ಸಾಂಸ್ಕೃತಿಕ ಸಂಘಟನೆ, ಒಡಲು ಟ್ರಸ್ಟ್ , ಕನ್ನಡ ಪರ ಸಂಘಟನೆಗಳು, ಬಾರುಕೋಲು ಬಳಗ ಹಾಗೂ ಮೈಸೂರಿನ ಸಮಸ್ತ ಪ್ರಗತಿಪರ ಸಂಘಟನೆಗಳು ಸಹಯೋಗದಲ್ಲಿ ನುಡಿನಮನ ಕಾರ್ಯಕ್ರಮ ನಡೆಯಲಿದೆ ಎಂದರು.

ವೈಯಕ್ತಿಕ ಬದುಕಿನಲ್ಲಿ, ವೈದ್ಯಕೀಯ ವೃತ್ತಿಯಲ್ಲಿ ಹಾಗೂ ಸಾಮಾಜಿಕ ಚಳವಳಿಗಳಲ್ಲಿ ತಮ್ಮ ಎಡಪಂಥೀಯ ಚಿಂತನೆಗಳೊಂದಿಗೆ ಎಲ್ಲ ಆಯಾಮಗಳ ಜನಪರ ಚಳವಳಿಗಳೊಂದಿಗೂ ಬೆರೆತು ಬಾಳಿದ ಡಾ.ವಿ.ಲಕ್ಷ್ಮೀನಾರಾಯಣ್ ಕಟ್ಟಾ ಮಾರ್ಕ್ಸ್‌ವಾದಿಯಾಗಿಯೇ ಬದುಕಿ ಡಾ.ಬಿ.ಆರ್.ಅಂಬೇಡ್ಕರ್ ಅವರ ತಾತ್ವಿಕತೆಯನ್ನು ಒಪ್ಪಿಕೊಂಡು, ಯುವ ಪೀಳಿಗೆಯಲ್ಲಿ ಮಾರ್ಕ್ಸ್ ಮತ್ತು ಅಂಬೇಡ್ಕರ್ ಅವರನ್ನು ಅಧ್ಯಯನ ಮಾಡುವಂತೆ ಪ್ರಚೋದಿಸುತ್ತಿದ್ದರು. ಅಲ್ಲದೇ ಕಮ್ಯುನಿಸ್ಟರು ಅಂಬೇಡ್ಕರ್ ಅವರ ನೈಜ ವಾರಸುದಾರರಾಗಿರಬೇಕು ಎಂದು ಪ್ರತಿಪಾದಿಸುತ್ತಿದ್ದರು ಎಂದರು.

ಅಂತಿಮ ಉಸಿರಿರುವವರೆಗೂ ಮಾರ್ಕ್ಸ್‌ವಾದ, ಅಂಬೇಡ್ಕರ್ ವಿಚಾರಧಾರೆಗಳಿಗೆ ಬದ್ಧರಾಗಿದ್ದುಕೊಂಡು ಎಲ್ಲ ರೀತಿಯ ಸಾಮಾಜಿಕ ಅನ್ಯಾಯಗಳ ವಿರುದ್ಧ ಪ್ರಖರ ದನಿಯಾಗಿದ್ದ ಡಾ.ವಿ.ಲಕ್ಷ್ಮೀನಾರಾಯಣ್ ಅವರ ನಿಧನ ಜನಪರ ಹೋರಾಟಗಳ ನಡುವೆ ಒಂದು ಶೂನ್ಯ ಸೃಷ್ಟಿಸಿದೆ. ಡಾ.ವಿ.ಲಕ್ಷ್ಮೀನಾರಾಯಣ್ ಅವರಿಗೆ ಮೈಸೂರಿನ ಜನತೆಯ ಪರವಾಗಿ ಮೇ.೨ ರಂದು ಹಮ್ಮಿಕೊಂಡಿರುವ ನುಡಿನಮನ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮೈಸೂರಿನ ಜನತೆ, ಎಲ್ಲ ಪ್ರಗತಿಪರ ಮನಸುಗಳು ಪಾಲ್ಗೊಂಡು ಮೃತರಿಗೆ ಅಂತಿಮ ನಮನಗಳನ್ನು ಸಲ್ಲಿಸೋಣ ಎಂದರು.

ಸಾಹಿತಿ ನಾ.ದಿವಾಕರ, ನಿವೃತ್ತ ವಿಜ್ಞಾನಿಡಾ.ವಿ.ಜಗನ್ನಾಥ್, ಜವರಯ್ಯ, ಬಿ.ಆರ್.ರಂಗಸ್ವಾಮಿ, ಡಾ.ಟಿ.ಪದ್ಮಶ್ರೀ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಾದಕ ವಸ್ತು ಮಾರಾಟ, ಬಳಕೆ ವಿರುದ್ಧ ಕಾರ್ಯಾಚರಣೆ

ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್‌ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…

3 hours ago

ಹಾಳಾಗಿ ವರ್ಷಗಳೇ ಕಳೆದರೂ ದುರಸ್ತಿಯಾಗದ ಶುದ್ಧ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ…

3 hours ago

ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಅಪಘಾತಗಳಿಗೆ ಆಹ್ವಾನ

ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು…

3 hours ago

ಅರ್ಜುನಹಳ್ಳಿ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ…

3 hours ago

ಊರ ಜಾತ್ರೆ ಒಂದು ನೆನಪು…

ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ  ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…

3 hours ago

ಯುದ್ಧ: ಕಟ್ಟಡ ನಿರ್ಮಾಣ ವಲಯಕ್ಕೆ ಬೆಲೆ ಏರಿಕೆಯ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…

3 hours ago