ಮೈಸೂರು

ವೈದ್ಯ ಡಾ.ವಿ.ಲಕ್ಷ್ಮೀನಾರಾಯಣ ಅವರ ನುಡಿ ನಮನ

ಮೈಸೂರು: ರಾಮಕೃಷ್ಣನಗರದ ನೃಪತುಂಗ ಶಾಲೆಯ ಆವರಣದಲ್ಲಿರುವ ರಮಾಗೋವಿಂದ ರಂಗಮಂದಿರದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಮೇ.೨ ರಂದು ಸಂಜೆ ೪.೩೦ಕ್ಕೆಇತ್ತೀಚೆಗೆ ನಿಧನರಾದ ವೈದ್ಯ ಡಾ.ವಿ.ಲಕ್ಷ್ಮೀನಾರಾಯಣ ಅವರ ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪ್ರಗತಿಪರ ಚಿಂತಕ ಪ್ರೊ.ಕಾಳಚನ್ನೇಗೌಡ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಯುಸಿಎಲ್, ಸಿಪಿಐ ಎಂಎಲ್ ಲಿಬರೇಷನ್, ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ಸಮತಾ ವೇದಿಕೆ, ಸಮತಾ ಅಧ್ಯಯನ ಕೇಂದ್ರ, ಆರ್‌ಎಲ್‌ಎಚ್‌ಪಿ, ಧ್ವನಿ ಮಹಿಳಾ ಒಕ್ಕೂಟ, ಎಐಎಂಎಂಎಸ್, ದಲಿತ-ಅಲ್ಪಸಂಖ್ಯಾತ ಸಂಘಟನೆಗಳು, ಸಿಪಿಐ, ಸಿಪಿಎಂ, ಎಸ್‌ಯುಸಿಐ, ಎಐಟಿಯುಸಿ, ಸಿಐಟಿಯು, ಎಐಯುಟಿಯುಸಿ, ಎಐಸಿಸಿಟಿಯು, ಐಎನ್‌ಟಿಯುಸಿ, ಪ್ರಗತಿಪರ ಸಂಘಟನೆಗಳ ಒಕ್ಕೂಟ, ಜನಾಂದೋಲನಗಳ ಮಹಾಮೈತ್ರಿ, ಬುದ್ಧ ಧಮ್ಮ ಸಮಿತಿ, ನೆಲೆ ಹಿನ್ನೆಲೆ, ನಿರಂತರ, ದೇಸಿ ರಂಗ, ಒಡನಾಡಿ, ಜನಮನ ಸಾಂಸ್ಕೃತಿಕ ಸಂಘಟನೆ, ಒಡಲು ಟ್ರಸ್ಟ್ , ಕನ್ನಡ ಪರ ಸಂಘಟನೆಗಳು, ಬಾರುಕೋಲು ಬಳಗ ಹಾಗೂ ಮೈಸೂರಿನ ಸಮಸ್ತ ಪ್ರಗತಿಪರ ಸಂಘಟನೆಗಳು ಸಹಯೋಗದಲ್ಲಿ ನುಡಿನಮನ ಕಾರ್ಯಕ್ರಮ ನಡೆಯಲಿದೆ ಎಂದರು.

ವೈಯಕ್ತಿಕ ಬದುಕಿನಲ್ಲಿ, ವೈದ್ಯಕೀಯ ವೃತ್ತಿಯಲ್ಲಿ ಹಾಗೂ ಸಾಮಾಜಿಕ ಚಳವಳಿಗಳಲ್ಲಿ ತಮ್ಮ ಎಡಪಂಥೀಯ ಚಿಂತನೆಗಳೊಂದಿಗೆ ಎಲ್ಲ ಆಯಾಮಗಳ ಜನಪರ ಚಳವಳಿಗಳೊಂದಿಗೂ ಬೆರೆತು ಬಾಳಿದ ಡಾ.ವಿ.ಲಕ್ಷ್ಮೀನಾರಾಯಣ್ ಕಟ್ಟಾ ಮಾರ್ಕ್ಸ್‌ವಾದಿಯಾಗಿಯೇ ಬದುಕಿ ಡಾ.ಬಿ.ಆರ್.ಅಂಬೇಡ್ಕರ್ ಅವರ ತಾತ್ವಿಕತೆಯನ್ನು ಒಪ್ಪಿಕೊಂಡು, ಯುವ ಪೀಳಿಗೆಯಲ್ಲಿ ಮಾರ್ಕ್ಸ್ ಮತ್ತು ಅಂಬೇಡ್ಕರ್ ಅವರನ್ನು ಅಧ್ಯಯನ ಮಾಡುವಂತೆ ಪ್ರಚೋದಿಸುತ್ತಿದ್ದರು. ಅಲ್ಲದೇ ಕಮ್ಯುನಿಸ್ಟರು ಅಂಬೇಡ್ಕರ್ ಅವರ ನೈಜ ವಾರಸುದಾರರಾಗಿರಬೇಕು ಎಂದು ಪ್ರತಿಪಾದಿಸುತ್ತಿದ್ದರು ಎಂದರು.

ಅಂತಿಮ ಉಸಿರಿರುವವರೆಗೂ ಮಾರ್ಕ್ಸ್‌ವಾದ, ಅಂಬೇಡ್ಕರ್ ವಿಚಾರಧಾರೆಗಳಿಗೆ ಬದ್ಧರಾಗಿದ್ದುಕೊಂಡು ಎಲ್ಲ ರೀತಿಯ ಸಾಮಾಜಿಕ ಅನ್ಯಾಯಗಳ ವಿರುದ್ಧ ಪ್ರಖರ ದನಿಯಾಗಿದ್ದ ಡಾ.ವಿ.ಲಕ್ಷ್ಮೀನಾರಾಯಣ್ ಅವರ ನಿಧನ ಜನಪರ ಹೋರಾಟಗಳ ನಡುವೆ ಒಂದು ಶೂನ್ಯ ಸೃಷ್ಟಿಸಿದೆ. ಡಾ.ವಿ.ಲಕ್ಷ್ಮೀನಾರಾಯಣ್ ಅವರಿಗೆ ಮೈಸೂರಿನ ಜನತೆಯ ಪರವಾಗಿ ಮೇ.೨ ರಂದು ಹಮ್ಮಿಕೊಂಡಿರುವ ನುಡಿನಮನ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮೈಸೂರಿನ ಜನತೆ, ಎಲ್ಲ ಪ್ರಗತಿಪರ ಮನಸುಗಳು ಪಾಲ್ಗೊಂಡು ಮೃತರಿಗೆ ಅಂತಿಮ ನಮನಗಳನ್ನು ಸಲ್ಲಿಸೋಣ ಎಂದರು.

ಸಾಹಿತಿ ನಾ.ದಿವಾಕರ, ನಿವೃತ್ತ ವಿಜ್ಞಾನಿಡಾ.ವಿ.ಜಗನ್ನಾಥ್, ಜವರಯ್ಯ, ಬಿ.ಆರ್.ರಂಗಸ್ವಾಮಿ, ಡಾ.ಟಿ.ಪದ್ಮಶ್ರೀ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

13 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

15 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

16 hours ago