ಕೆ.ಆರ್.ನಗರ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಕಾಂಗ್ರೆಸ್ ಸರ್ಕಾರದಿಂದ ತುಘಲಕ್ ದರ್ಬಾರ್ ನಡೆಯುತ್ತಿದೆ ಎಂದು ಕರ್ನಾಟಕ ವಸ್ತು ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಗೌಡ ಆರೋಪಿಸಿದರು.
ಪಟ್ಟಣದಲ್ಲಿ ೯ನೇ ವಾರ್ಡ್ ಸೇರಿದಂತೆ ಅನೇಕ ಕಡೆಗಳಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಎನ್.ಡಿ.ಎ. ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುವಾರಸ್ವಾಮಿ ಪರವಾಗಿ ಚುನಾವಣಾ ಪ್ರಚಾರ ನಡೆಸಿ ಮನೆ ಮನೆಗೆ, ಪಾರ್ಕ್ಗಳಿಗೆ ತೆರಳಿ ಮತಾಯಾಚನೆ ಮಾಡಿ ಅವರು ಮಾತನಾಡಿದರು.
ಜನರು ಬದುಕಿನ ಬಗ್ಗೆ ಗ್ಯಾರಂಟಿ ಕಳೆದುಕೊಂಡಿದ್ದಾರೆ. ಈ ಸರ್ಕಾರದಲ್ಲಿ ಶಾಂತಿ, ನೀರು, ಮಹಿಳೆಯರ ಮಾನ, ಪ್ರಾಣ, ರೈತರ ಬದುಕು, ಭಾವನೆ ಯಾವುದಕ್ಕೂ ಗ್ಯಾರಂಟಿ ಇಲ್ಲದಂತಾಗಿದೆ. ಗಲಭೆಕೋರರು, ಭಯೋತ್ಪಾದಕರಿಗೆ ರಕ್ಷಣೆಯ ಗ್ಯಾರಂಟಿ ಸಿಗುತ್ತಿದೆ. ವಿದ್ಯುತ್ ದರ ಏರಿಕೆಯ ಗ್ಯಾರಂಟಿ, ವಿವಿಧ ತೆರಿಗೆ ಹೆಚ್ಚಳದ ಗ್ಯಾರಂಟಿ ನೀಡುತ್ತಿದೆ ಎಂದು ದೂರಿದರು.
ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹೊಸಹಳ್ಳಿ ವೆಂಕಟೇಶ್ ಮಾತನಾಡಿ, ಸಿದ್ದರಾಮಯ್ಯ ಸರ್ಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿಗಳನ್ನು ಕಳೆದುಕೊಂಡಿದ್ದಾರೆ. ಹುಬ್ಬಳ್ಳಿಯ ನೇಹಾ ಹಿರೇಮಠ ಅಮಾನುಷ ಹತ್ಯೆ ಆಗಿದೆ. ತನ್ನದೇ ಪಕ್ಷದ ಚುನಾಯಿತ ಪ್ರತಿನಿಧಿ ಮಗಳ ಹತ್ಯೆಗೆ ನ್ಯಾಯ ಒದಗಿಸುವುದನ್ನು ಬಿಟ್ಟು ಆರೋಪಿಗೆ ರಕ್ಷಣೆ ಭಾಗ್ಯ ಒದಗಿಸಿದ ಸರ್ಕಾರ ಇದು ಎಂದು ಕಿಡಿ ಕಾರಿದರು.
ನಮ್ಮ ಒಕ್ಕಲಿಗ ಜನಾಂಗಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರೇ ನಾಯಕರು ಎಂದು ತಿಳಿಸಿದರು.
ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಕಾರ್ಯದರ್ಶಿ ಎಚ್.ಡಿ. ಪ್ರಭಾಕರ್ ಜೈನ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಉಮಾ ಶಂಕರ್, ಹೊಸೂರು ಅನಿಲ್, ಸಾಲಿಗ್ರಾಮ ನಟರಾಜ್, ಅರಕೆರೆ ಮಧು, ದೊರೆಸ್ವಾಮಿ, ಕೆ.ಆರ್.ಮಂಜು, ಶಿವರಾಜ್ ಮೊದಲಾದವರು ಹಾಜರಿದ್ದರು.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…