ಕೆ.ಆರ್.ನಗರ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಕಾಂಗ್ರೆಸ್ ಸರ್ಕಾರದಿಂದ ತುಘಲಕ್ ದರ್ಬಾರ್ ನಡೆಯುತ್ತಿದೆ ಎಂದು ಕರ್ನಾಟಕ ವಸ್ತು ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಗೌಡ ಆರೋಪಿಸಿದರು.
ಪಟ್ಟಣದಲ್ಲಿ ೯ನೇ ವಾರ್ಡ್ ಸೇರಿದಂತೆ ಅನೇಕ ಕಡೆಗಳಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಎನ್.ಡಿ.ಎ. ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುವಾರಸ್ವಾಮಿ ಪರವಾಗಿ ಚುನಾವಣಾ ಪ್ರಚಾರ ನಡೆಸಿ ಮನೆ ಮನೆಗೆ, ಪಾರ್ಕ್ಗಳಿಗೆ ತೆರಳಿ ಮತಾಯಾಚನೆ ಮಾಡಿ ಅವರು ಮಾತನಾಡಿದರು.
ಜನರು ಬದುಕಿನ ಬಗ್ಗೆ ಗ್ಯಾರಂಟಿ ಕಳೆದುಕೊಂಡಿದ್ದಾರೆ. ಈ ಸರ್ಕಾರದಲ್ಲಿ ಶಾಂತಿ, ನೀರು, ಮಹಿಳೆಯರ ಮಾನ, ಪ್ರಾಣ, ರೈತರ ಬದುಕು, ಭಾವನೆ ಯಾವುದಕ್ಕೂ ಗ್ಯಾರಂಟಿ ಇಲ್ಲದಂತಾಗಿದೆ. ಗಲಭೆಕೋರರು, ಭಯೋತ್ಪಾದಕರಿಗೆ ರಕ್ಷಣೆಯ ಗ್ಯಾರಂಟಿ ಸಿಗುತ್ತಿದೆ. ವಿದ್ಯುತ್ ದರ ಏರಿಕೆಯ ಗ್ಯಾರಂಟಿ, ವಿವಿಧ ತೆರಿಗೆ ಹೆಚ್ಚಳದ ಗ್ಯಾರಂಟಿ ನೀಡುತ್ತಿದೆ ಎಂದು ದೂರಿದರು.
ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹೊಸಹಳ್ಳಿ ವೆಂಕಟೇಶ್ ಮಾತನಾಡಿ, ಸಿದ್ದರಾಮಯ್ಯ ಸರ್ಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿಗಳನ್ನು ಕಳೆದುಕೊಂಡಿದ್ದಾರೆ. ಹುಬ್ಬಳ್ಳಿಯ ನೇಹಾ ಹಿರೇಮಠ ಅಮಾನುಷ ಹತ್ಯೆ ಆಗಿದೆ. ತನ್ನದೇ ಪಕ್ಷದ ಚುನಾಯಿತ ಪ್ರತಿನಿಧಿ ಮಗಳ ಹತ್ಯೆಗೆ ನ್ಯಾಯ ಒದಗಿಸುವುದನ್ನು ಬಿಟ್ಟು ಆರೋಪಿಗೆ ರಕ್ಷಣೆ ಭಾಗ್ಯ ಒದಗಿಸಿದ ಸರ್ಕಾರ ಇದು ಎಂದು ಕಿಡಿ ಕಾರಿದರು.
ನಮ್ಮ ಒಕ್ಕಲಿಗ ಜನಾಂಗಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರೇ ನಾಯಕರು ಎಂದು ತಿಳಿಸಿದರು.
ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಕಾರ್ಯದರ್ಶಿ ಎಚ್.ಡಿ. ಪ್ರಭಾಕರ್ ಜೈನ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಉಮಾ ಶಂಕರ್, ಹೊಸೂರು ಅನಿಲ್, ಸಾಲಿಗ್ರಾಮ ನಟರಾಜ್, ಅರಕೆರೆ ಮಧು, ದೊರೆಸ್ವಾಮಿ, ಕೆ.ಆರ್.ಮಂಜು, ಶಿವರಾಜ್ ಮೊದಲಾದವರು ಹಾಜರಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…