ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.
ರಮೇಶ್ ಹಾಗೂ ಮನು ಎಂಬುವವರೇ ಬಂಧಿತ ಆರೋಪಿಗಳು. ಮೈಸೂರು ತಾಲ್ಲೂಕಿನ ಕಡಕೊಳದ ಬಳಿ ಡಿಸೆಂಬರ್.19ರಂದು ಗಣೇಶ್ ಎಂಬುವವರು ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದರು.
ಇದನ್ನು ಓದಿ: ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು
ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿ ಮಧ್ಯರಾತ್ರಿ ಮನೆಗೆ ಬರುವಾಗ ಅಪಘಾತವಾಗಿತ್ತು. ಅವರನ್ನು ಆಸ್ಪತ್ರೆಗೆ ಸೇರಿಸುವ ನೆಪದಲ್ಲಿ ಬಂದಿದ್ದ ರಮೇಶ ಹಾಗೂ ಮನು ಎಂಬುವವರು ಗಣೇಶನ ಮೊಬೈಲ್ ಪಡೆದುಕೊಂಡು ಯುಪಿಐ ಮೂಲಕ 80 ಸಾವಿರ ರೂ ಹಣ ವರ್ಗಾವಣೆ ಮಾಡಿಕೊಂಡು ಆಸ್ಪತ್ರೆಗೆ ಸೇರಿಸದೇ ಪರಾರಿಯಾಗಿದ್ದರು.
ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಗಣೇಶ ಅವರ ಸಹೋದರ ಆಸ್ಪತ್ರೆಗೆ ದಾಖಲಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹಣ ವರ್ಗಾವಣೆ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಮೈಸೂರಿನ ಮಹದೇವಪುರ ನಿವಾಸಿಗಳಾದ ರಮೇಶ ಹಾಗೂ ಮನು ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ 80 ಸಾವಿರ ರೂ ಹಾಗೂ 2 ಮೊಬೈಲ್ ವಶಕ್ಕೆ ಪಡೆದುಕೊಳ್ಳಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…