ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.
ರಮೇಶ್ ಹಾಗೂ ಮನು ಎಂಬುವವರೇ ಬಂಧಿತ ಆರೋಪಿಗಳು. ಮೈಸೂರು ತಾಲ್ಲೂಕಿನ ಕಡಕೊಳದ ಬಳಿ ಡಿಸೆಂಬರ್.19ರಂದು ಗಣೇಶ್ ಎಂಬುವವರು ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದರು.
ಇದನ್ನು ಓದಿ: ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು
ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿ ಮಧ್ಯರಾತ್ರಿ ಮನೆಗೆ ಬರುವಾಗ ಅಪಘಾತವಾಗಿತ್ತು. ಅವರನ್ನು ಆಸ್ಪತ್ರೆಗೆ ಸೇರಿಸುವ ನೆಪದಲ್ಲಿ ಬಂದಿದ್ದ ರಮೇಶ ಹಾಗೂ ಮನು ಎಂಬುವವರು ಗಣೇಶನ ಮೊಬೈಲ್ ಪಡೆದುಕೊಂಡು ಯುಪಿಐ ಮೂಲಕ 80 ಸಾವಿರ ರೂ ಹಣ ವರ್ಗಾವಣೆ ಮಾಡಿಕೊಂಡು ಆಸ್ಪತ್ರೆಗೆ ಸೇರಿಸದೇ ಪರಾರಿಯಾಗಿದ್ದರು.
ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಗಣೇಶ ಅವರ ಸಹೋದರ ಆಸ್ಪತ್ರೆಗೆ ದಾಖಲಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹಣ ವರ್ಗಾವಣೆ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಮೈಸೂರಿನ ಮಹದೇವಪುರ ನಿವಾಸಿಗಳಾದ ರಮೇಶ ಹಾಗೂ ಮನು ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ 80 ಸಾವಿರ ರೂ ಹಾಗೂ 2 ಮೊಬೈಲ್ ವಶಕ್ಕೆ ಪಡೆದುಕೊಳ್ಳಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…