Mysore
36
few clouds

Social Media

ಗುರುವಾರ, 23 ಏಪ್ರಿಲ 2026
Light
Dark

ಕಾರುಗಳ ಮುಖಾಮುಖಿ ಡಿಕ್ಕಿ : ಇಬ್ಬರು ಸಾವು

ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಪಟ್ಟಣದಿಂದ ಕೇರಳಾಪುರಕ್ಕೆ ಹೋಗುವ ಮಾರ್ಗದಲ್ಲಿ ದಡದಹಳ್ಳಿ ಗೇಟ್ ಸಮೀಪ ಇರುವ ಅಶ್ವಿನಿ ಡೈರಿ ಫಾರಂ ಬಳಿ ಮಂಗಳವಾರ ಈ ದುರ್ಘಟನೆ ನಡೆದಿದೆ.

ಪಿರಿಯಾಪಟ್ಟಣ ತಾಲೂಕಿನ ಅಬ್ಬನಕುಪ್ಪೆ ಗ್ರಾಮದ ಗೋವರ್ಧನ್ ಅಲಿಯಾಸ್ ಗಣೇಶ್ (36) ಮತ್ತು ಅರಕಲಗೂಡು ತಾಲೂಕಿನ ಕಟ್ಟೆಪುರ ಗ್ರಾಮದ ನವೀನ್ ಕುಮಾರ್ (29) ಎಂಬುವವರೇ ಮೃತಪಟ್ಟವರಾಗಿದ್ದಾರೆ.

ಸಂತೋಷ್, ಮನು ಮತ್ತು ಪೃಥ್ವಿರಾಜ್ ಅವರುಗಳಿಗೆ ಗಾಯಗಳಾಗಿದ್ದು ಇವರೆಲ್ಲರೂ ಅರಕಲಗೂಡು ತಾಲೂಕಿನ ಕಟ್ಟೆಪುರ ಗ್ರಾಮದವರಾಗಿದ್ದಾರೆ.

ಘಟನೆಯ ವಿವರ
ಅರಕಲಗೂಡು ತಾಲೂಕಿನ ಕೊಣನೂರು ಹೋಬಳಿಗೆ ಸೇರಿದ ಕಟ್ಟೆಪುರ ಗ್ರಾಮದ ನವೀನ್ ಕುಮಾರ್ ಎಂಬುವರು ಮದುವೆಯ ಫೋಟೋ ಮತ್ತು ವಿಡಿಯೋ ತೆಗೆಯುವ ಆರ್ಡರ್ ಇದ್ದ ಕಾರಣ ಕನಕಪುರಕ್ಕೆ ತೆರಳಲು ಕಟ್ಟೆಪುರ ಗ್ರಾಮದ ಸಂತೋಷ, ಪೃಥ್ವಿರಾಜ್ ಹಾಗೂ ಮನು ಅವರುಗಳೊಂದಿಗೆ ನವೀನ್ ಕುಮಾರ್ ಕಾರಿನಲ್ಲಿ ತೆರಳುತ್ತಿದ್ದರು.

ಈ ಸಂದರ್ಭದಲ್ಲಿ ಸಾಲಿಗ್ರಾಮ ತಾಲೂಕಿನ ದಡದಹಳ್ಳಿ ಗೇಟ್ ಸಮೀಪವಿರುವ ಅಶ್ವಿನಿ ಡೈರಿ ಫಾರಂ ಬಳಿ ಎದುರಿನಿಂದ ಪಿರಿಯಾಪಟ್ಟಣ ತಾಲೂಕಿನ ಅಬ್ಬನಕುಪ್ಪೆ ಗ್ರಾಮದ ಗೋವರ್ಧನ್ ಅಲಿಯಾಸ್ ಗಣೇಶ್ ಎಂಬುವರು ಸಾಲಿಗ್ರಾಮ ತಾಲೂಕಿನ ಹೆಬ್ಸೂರು ಗ್ರಾಮದಲ್ಲಿದ್ದ ತನ್ನ ತಂಗಿಯ ಮನೆಯಿಂದ ಸಾಲಿಗ್ರಾಮಕ್ಕೆ ಹೋಗಿ ಒಬ್ಬರೇ ಮರಳಿ ಹೆಬ್ಸೂರು ಗ್ರಾಮಕ್ಕೆ ಕಾರಿನಲ್ಲಿ ಬರುವಾಗ ಏಕಾಏಕಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಪರಿಣಾಮವಾಗಿ ಈ ಅವಘಡ ನಡೆದಿದೆ.

Tags:
error: Content is protected !!