ಮೈಸೂರು

ಕಾರುಗಳ ಮುಖಾಮುಖಿ ಡಿಕ್ಕಿ : ಇಬ್ಬರು ಸಾವು

ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಪಟ್ಟಣದಿಂದ ಕೇರಳಾಪುರಕ್ಕೆ ಹೋಗುವ ಮಾರ್ಗದಲ್ಲಿ ದಡದಹಳ್ಳಿ ಗೇಟ್ ಸಮೀಪ ಇರುವ ಅಶ್ವಿನಿ ಡೈರಿ ಫಾರಂ ಬಳಿ ಮಂಗಳವಾರ ಈ ದುರ್ಘಟನೆ ನಡೆದಿದೆ.

ಪಿರಿಯಾಪಟ್ಟಣ ತಾಲೂಕಿನ ಅಬ್ಬನಕುಪ್ಪೆ ಗ್ರಾಮದ ಗೋವರ್ಧನ್ ಅಲಿಯಾಸ್ ಗಣೇಶ್ (36) ಮತ್ತು ಅರಕಲಗೂಡು ತಾಲೂಕಿನ ಕಟ್ಟೆಪುರ ಗ್ರಾಮದ ನವೀನ್ ಕುಮಾರ್ (29) ಎಂಬುವವರೇ ಮೃತಪಟ್ಟವರಾಗಿದ್ದಾರೆ.

ಸಂತೋಷ್, ಮನು ಮತ್ತು ಪೃಥ್ವಿರಾಜ್ ಅವರುಗಳಿಗೆ ಗಾಯಗಳಾಗಿದ್ದು ಇವರೆಲ್ಲರೂ ಅರಕಲಗೂಡು ತಾಲೂಕಿನ ಕಟ್ಟೆಪುರ ಗ್ರಾಮದವರಾಗಿದ್ದಾರೆ.

ಘಟನೆಯ ವಿವರ
ಅರಕಲಗೂಡು ತಾಲೂಕಿನ ಕೊಣನೂರು ಹೋಬಳಿಗೆ ಸೇರಿದ ಕಟ್ಟೆಪುರ ಗ್ರಾಮದ ನವೀನ್ ಕುಮಾರ್ ಎಂಬುವರು ಮದುವೆಯ ಫೋಟೋ ಮತ್ತು ವಿಡಿಯೋ ತೆಗೆಯುವ ಆರ್ಡರ್ ಇದ್ದ ಕಾರಣ ಕನಕಪುರಕ್ಕೆ ತೆರಳಲು ಕಟ್ಟೆಪುರ ಗ್ರಾಮದ ಸಂತೋಷ, ಪೃಥ್ವಿರಾಜ್ ಹಾಗೂ ಮನು ಅವರುಗಳೊಂದಿಗೆ ನವೀನ್ ಕುಮಾರ್ ಕಾರಿನಲ್ಲಿ ತೆರಳುತ್ತಿದ್ದರು.

ಈ ಸಂದರ್ಭದಲ್ಲಿ ಸಾಲಿಗ್ರಾಮ ತಾಲೂಕಿನ ದಡದಹಳ್ಳಿ ಗೇಟ್ ಸಮೀಪವಿರುವ ಅಶ್ವಿನಿ ಡೈರಿ ಫಾರಂ ಬಳಿ ಎದುರಿನಿಂದ ಪಿರಿಯಾಪಟ್ಟಣ ತಾಲೂಕಿನ ಅಬ್ಬನಕುಪ್ಪೆ ಗ್ರಾಮದ ಗೋವರ್ಧನ್ ಅಲಿಯಾಸ್ ಗಣೇಶ್ ಎಂಬುವರು ಸಾಲಿಗ್ರಾಮ ತಾಲೂಕಿನ ಹೆಬ್ಸೂರು ಗ್ರಾಮದಲ್ಲಿದ್ದ ತನ್ನ ತಂಗಿಯ ಮನೆಯಿಂದ ಸಾಲಿಗ್ರಾಮಕ್ಕೆ ಹೋಗಿ ಒಬ್ಬರೇ ಮರಳಿ ಹೆಬ್ಸೂರು ಗ್ರಾಮಕ್ಕೆ ಕಾರಿನಲ್ಲಿ ಬರುವಾಗ ಏಕಾಏಕಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಪರಿಣಾಮವಾಗಿ ಈ ಅವಘಡ ನಡೆದಿದೆ.

ಆಂದೋಲನ ಡೆಸ್ಕ್

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

5 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

9 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

10 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

10 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

14 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

14 hours ago