ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ.
ಪಟ್ಟಣದಿಂದ ಕೇರಳಾಪುರಕ್ಕೆ ಹೋಗುವ ಮಾರ್ಗದಲ್ಲಿ ದಡದಹಳ್ಳಿ ಗೇಟ್ ಸಮೀಪ ಇರುವ ಅಶ್ವಿನಿ ಡೈರಿ ಫಾರಂ ಬಳಿ ಮಂಗಳವಾರ ಈ ದುರ್ಘಟನೆ ನಡೆದಿದೆ.
ಪಿರಿಯಾಪಟ್ಟಣ ತಾಲೂಕಿನ ಅಬ್ಬನಕುಪ್ಪೆ ಗ್ರಾಮದ ಗೋವರ್ಧನ್ ಅಲಿಯಾಸ್ ಗಣೇಶ್ (36) ಮತ್ತು ಅರಕಲಗೂಡು ತಾಲೂಕಿನ ಕಟ್ಟೆಪುರ ಗ್ರಾಮದ ನವೀನ್ ಕುಮಾರ್ (29) ಎಂಬುವವರೇ ಮೃತಪಟ್ಟವರಾಗಿದ್ದಾರೆ.
ಸಂತೋಷ್, ಮನು ಮತ್ತು ಪೃಥ್ವಿರಾಜ್ ಅವರುಗಳಿಗೆ ಗಾಯಗಳಾಗಿದ್ದು ಇವರೆಲ್ಲರೂ ಅರಕಲಗೂಡು ತಾಲೂಕಿನ ಕಟ್ಟೆಪುರ ಗ್ರಾಮದವರಾಗಿದ್ದಾರೆ.
ಘಟನೆಯ ವಿವರ
ಅರಕಲಗೂಡು ತಾಲೂಕಿನ ಕೊಣನೂರು ಹೋಬಳಿಗೆ ಸೇರಿದ ಕಟ್ಟೆಪುರ ಗ್ರಾಮದ ನವೀನ್ ಕುಮಾರ್ ಎಂಬುವರು ಮದುವೆಯ ಫೋಟೋ ಮತ್ತು ವಿಡಿಯೋ ತೆಗೆಯುವ ಆರ್ಡರ್ ಇದ್ದ ಕಾರಣ ಕನಕಪುರಕ್ಕೆ ತೆರಳಲು ಕಟ್ಟೆಪುರ ಗ್ರಾಮದ ಸಂತೋಷ, ಪೃಥ್ವಿರಾಜ್ ಹಾಗೂ ಮನು ಅವರುಗಳೊಂದಿಗೆ ನವೀನ್ ಕುಮಾರ್ ಕಾರಿನಲ್ಲಿ ತೆರಳುತ್ತಿದ್ದರು.
ಈ ಸಂದರ್ಭದಲ್ಲಿ ಸಾಲಿಗ್ರಾಮ ತಾಲೂಕಿನ ದಡದಹಳ್ಳಿ ಗೇಟ್ ಸಮೀಪವಿರುವ ಅಶ್ವಿನಿ ಡೈರಿ ಫಾರಂ ಬಳಿ ಎದುರಿನಿಂದ ಪಿರಿಯಾಪಟ್ಟಣ ತಾಲೂಕಿನ ಅಬ್ಬನಕುಪ್ಪೆ ಗ್ರಾಮದ ಗೋವರ್ಧನ್ ಅಲಿಯಾಸ್ ಗಣೇಶ್ ಎಂಬುವರು ಸಾಲಿಗ್ರಾಮ ತಾಲೂಕಿನ ಹೆಬ್ಸೂರು ಗ್ರಾಮದಲ್ಲಿದ್ದ ತನ್ನ ತಂಗಿಯ ಮನೆಯಿಂದ ಸಾಲಿಗ್ರಾಮಕ್ಕೆ ಹೋಗಿ ಒಬ್ಬರೇ ಮರಳಿ ಹೆಬ್ಸೂರು ಗ್ರಾಮಕ್ಕೆ ಕಾರಿನಲ್ಲಿ ಬರುವಾಗ ಏಕಾಏಕಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಪರಿಣಾಮವಾಗಿ ಈ ಅವಘಡ ನಡೆದಿದೆ.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…