ಮೈಸೂರು

ಎರಡು ಪ್ರತ್ಯೇಕ ಅಪಘಾತ : ಇಬ್ಬರು ಸಾವು

ಮೈಸೂರು : ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳವಾಡಿ ಹಾಗೂ ಕಡಕೊಳ ಬಳಿ ನಡೆದಿದೆ.

ಮೊದಲನೇ ಘಟನೆಯಲ್ಲಿ ಟೆಂಪೋ ಟ್ರಾವೆಲರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡ ಕಡಕೊಳ ನಿವಾಸಿ ನಂಜನಾಯಕ ಎಂಬವರು ಮೃತಪಟ್ಟಿದ್ದಾರೆ. ಬ್ರೆಡ್ ತರಲೆಂದು ಬೇಕರಿಗೆ ಹೋಗಿದ್ದ ವೇಳೆ ಈ ದುರಂತ ನಡೆದಿದೆ.

ಅನಾರೋಗ್ಯಕ್ಕೀಡಾಗಿದ್ದ ನಂಜನಾಯಕ ಅವರು ರಾತ್ರಿ 9 ಗಂಟೆ ವೇಳೆಯಲ್ಲಿ ಬ್ರೆಡ್ ತರಲೆಂದು ಕಡಕೊಳದ ಬೇಕರಿ ಬಳಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ನಂಜನಗೂಡು ಕಡೆಯಿಂದ ಬಂದ ಟಿಟಿ ವಾಹನ ಅವರಿಗೆ ಡಿಕ್ಕಿ ಹೊಡೆದಿದೆ.

ಕೂಡಲೇ ಸ್ಥಳೀಯರು ಅವರನ್ನು ಆಂಬುಲೆನ್ಸ್ ಮೂಲಕ ಕೆಆರ್ ಆಸ್ಪತ್ರೆಗೆ ಕರೆತಂದರು. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು. ಈ ಸಂಬಂಧ ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎರಡನೇ ಘಟನೆಯಲ್ಲಿ ಸ್ವಯಂ ಅಪಘಾತದಲ್ಲಿ ಮಧ್ಯಪ್ರದೇಶ ಮೂಲದ ರವಿಕಾಂತ್ ಎಂಬವರು ಸಾವನ್ನಪ್ಪಿದ್ದಾರೆ. ಖಾಸಗಿ ಕಾರ್ಖಾನೆಯೊಂದರಲ್ಲಿ ಉದ್ಯೋಗಿಯಾಗಿದ್ದ ಅವರು, ಲಿಂಗದೇವರಕೊಪ್ಪಲಿನಲ್ಲಿ ವಾಸವಿದ್ದರು. ಕ್ರಿಕೆಟ್ ಆಡುವ ಸಲುವಾಗಿ ಬೆಳವಾಡಿಯ ಮೈದಾನಕ್ಕೆ ತೆರಳಿದ್ದರು. ನಂತರ ನೀರು ಕುಡಿಯುವ ಸಲುವಾಗಿ ಬೈಕ್‌ನಲ್ಲಿ ಮನೆಗೆ ತೆರಳಿದ್ದರು. ಈ ವೇಳೆ ತಿರುವಿನಲ್ಲಿ ಬೈಕ್ ನಿಯಂತ್ರಣ ಕಳೆದುಕೊಂಡು ಕೆಳಗೆ ಬಿದ್ದಿದ್ದಾರೆ.

ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಾಹನದ ಹಿಂಬದಿ ಕುಳಿತಿದ್ದ ದೀಪು ಎಂಬವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

15 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

15 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

15 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

15 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

15 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

18 hours ago